crime

ಎರಡು ಪ್ರತ್ಯೇಕ ಭೀಕರ ರಸ್ತೆ ಅಪಘಾತ – ಇಬ್ಬರು ಪೋಲಿಸರು ಸೇರಿ 8 ಮಂದಿ ಸಾವು

ಕಳೆದ ರಾತ್ರಿ ಸಂಭವಿಸಿದ ಎರಡು ಪ್ರತ್ಯೇಕ ಭೀಕರ ಅಪಘಾತದಲ್ಲಿ ರಾಜ್ಯದ ಇಬ್ಬರು ಪೋಲಿಸರು, ಚಾಲಕ ಸೇರಿ ಎಂಟು ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ ಹಲವಾರು ಮಂದಿ ಗಾಯಗೊಂಡಿದ್ದಾರೆ.

ಬೆಂಗಳೂರಿನಿಂದ ತಿರುಪತಿಗೆ ಹೊರಟಿದ್ದ ಪೋಲಿಸರ ಕಾರೊಂದು ಆಂದ್ರ ಪ್ರದೇಶದ ಚಿತ್ತೂರು ಬಳಿ ಬೆಳಗಿನ ಜಾವ ಮೂರು ಗಂಟೆ ವೇಳೆಗೆ ಡಿವೈಡರ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಪೊಲೀಸರು ಹಾಗೂ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಘಟನೆಯಲ್ಲಿ ಶಿವಾಜಿನಗರ PSI ಅವಿನಾಶ್, PC ಅನಿಲ್ ಹಾಗೂ ಕಾರು ಚಾಲಕ ಸಾವನ್ನಪ್ಪಿದ್ದಾರೆ. ಕಾನ್ಸ್‌ಟೇಬಲ್ ಶರಣಬಸವ, PSI ದೀಕ್ಷಿತ್ ಅವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಳುಗಳಿಗೆ ವೇಲೂರು CMC ಆಸ್ಪತ್ರೆಗೆ ದಾಖಲಿಸಲಾಗಿದೆ.

ಗಾಂಜಾ ಕೇಸ್​ಗೆ ಸಂಬಂಧಿಸಿದಂತೆ ಆರೋಪಿಗಳ ಬಂಧನಕ್ಕಾಗಿ ಶಿವಾಜಿನಗರದ ಓರ್ವ ಎಸ್​​ಐ, ಪಿಎಸ್​ಐ, ಮೂವರು ಪೇದೆಗಳು ಸೇರಿ 6 ಪೊಲೀಸರ ತಂಡ ಆಂಧ್ರ ಪ್ರದೇಶದ ಚಿತ್ತೂರಿಗೆ ಖಾಸಗಿ ಟ್ರ್ಯಾವೆಲ್ಸ್​​ನಿಂದ ಕಾರನ್ನು ಬಾಡಿಗೆ ಪಡೆದು ತೆರಳಿತ್ತು.

ಈ ಘಟನೆಯಲ್ಲಿ SI ಸೇರಿ ಇತರ ಪೋಲಿಸರಿಗೆ ಗಾಯಗಳಾಗಿವೆ . ಬೆಂಗಳೂರಿನ ಶಿವಾಜಿನಗರ ಪೋಲಿಸ್ ಠಾಣೆಯಲ್ಲಿ ಸಾವನ್ನಪ್ಪಿದ ಇಬ್ಬರು ಪೊಲಿಸರು ಸೇವೆ ಸಲ್ಲಿಸುತ್ತಿದ್ದರು.

ಒಂದೇ ಕುಟುಂಬದ ಐವರು ಸಾವು :

ಕೊಪ್ಪಳದ ಬಳಿ ಸ್ಕಾರ್ಪಿಯೋ ವಾಹನಕ್ಕೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಒಂದೇ ಕುಟುಂಬ 5 ಮಂದಿ ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕು ಭಾನಾಪುರ ಗ್ರಾಮದ ಬಳಿ ನಡೆದಿದೆ.

ಬಿನ್ನಾಳ ಗ್ರಾಮದ ದೇವಪ್ಪ ಕೊಪ್ಪದ (62), ಮೃತರ ಸೊಸೆ ಗಿರಿಜಮ್ಮ (45), ಅಣ್ಣನ ಮಕ್ಕಳಾದ ಶಾಂತಮ್ಮ (35), ಪಾರ್ವತಮ್ಮ (32), ಸಂಬಂಧಿ ಕಸ್ತೂರಮ್ಮ (20) ಮೃತ ದುರ್ದೈವಿಗಳಾಗಿದ್ದಾರೆ.

ಯಲಬುರ್ಗಾ ತಾಲೂಕು ಬಿನ್ನಾಳ ಗ್ರಾಮದ ದೇವಪ್ಪ ಕೊಪ್ಪದ ಸೇರಿ ಅವರ ಕುಟುಂಬದ 5 ಜನ ದುರ್ಘಟನೆತಲ್ಲಿ ಸಾವನ್ನಪ್ಪಿದ್ದಾರೆ.

ಅಪಘಾತದ ಸಂದರ್ಭದಲ್ಲಿ ಸ್ಕಾರ್ಪಿಯೋ ವಾಹನದಲ್ಲಿ ಇಬ್ಬರು ಮಕ್ಕಳು ಸೇರಿ ಒಟ್ಟು 9 ಜನ ಪ್ರಯಾಣಿಸುತ್ತಿದ್ದರು. ಚಾಲಕ ಹರ್ಷವರ್ಧನ, ಮಕ್ಕಳಾದ ಬಸವರಾಜ, ಪುಟ್ಟರಾಜ, ಭೂಮಿಕಾ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಶಿಕ್ಷಕರ ನೇಮಕಾತಿ ಹಗರಣ – W B ಟಿಎಂಸಿ ಸಚಿವ ಪಾರ್ಥ ಚಟರ್ಜಿ ಬಂಧನ

ಕುಟುಂಬಸ್ಥರೆಲ್ಲರೂ ಕೊಪ್ಪಳದ ಖಾಸಗಿ ಹೋಟೆಲ್ ನಲ್ಲಿ ಆಯೋಜಿಸಲಾಗಿದ್ದ ದೇವಪ್ಪ ಕೊಪ್ಪದ ಮಗ ಶರಣಪ್ಪ ಕೊಪ್ಪದ ಅವರ ಮಗಳ ಬರ್ತ್​ಡೇ ಪಾರ್ಟಿ ಮುಗಿಸಿಕೊಂಡು ಗ್ರಾಮಕ್ಕೆ ವಾಪಸ್​ ಆಗುತ್ತಿದ್ದ ಸಂದರ್ಭದಲ್ಲಿ ಘಟನೆ ನಡೆದಿದೆ

ಲಾರಿಯೊಂದು ಸ್ಕಾರ್ಪಿಯೋ ವಾಹನಕ್ಕೆ ಡಿಕ್ಕಿ ಹೊಡೆದಿರುವ ಗುರುತು ಪತ್ತೆಯಾಗಿದೆ.

Team Newsnap
Leave a Comment
Share
Published by
Team Newsnap

Recent Posts

ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು

ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More

May 5, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More

May 5, 2024

ಲೋಕಾಯುಕ್ತರ ಹೆಸರಿನಲ್ಲಿ ಬೆಸ್ಕಾಂ ಎಂಡಿಗೆ ಬೆದರಿಕೆ – ದೂರು ದಾಖಲು

ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More

May 5, 2024

ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ

ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More

May 4, 2024

ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ

ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್​.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More

May 4, 2024

ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ

ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More

May 4, 2024