ಕಾಡಾನೆಯೊಂದು ಏಕಾಏಕಿ ದಾಳಿ ನಡೆಸಿದ ಪರಿಣಾಮ ಕಾಫಿ ತೋಟದ ಇಬ್ಬರು ಕೆಲಸಗಾರರು ಸ್ಥಳದಲ್ಲೇ ಸಾವಿಗೀಡಾಗಿದ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಕಡೆಗರ್ಜೆ ಗ್ರಾಮದಲ್ಲಿ ನಡೆದಿದೆ.
ಚಿಕ್ಕಯ್ಯ(60), ಚಿಕ್ಕಯ್ಯ(50) ಕಾಡಾನೆ ದಾಳಿಗೆ ಬಲಿಯಾದ ಮೃತ ದುರ್ದೈವಿಗಳು.
ಕಾಫಿ ತೋಟದಲ್ಲಿ ಇಬ್ಬರು ಕೆಲಸ ಮಾಡುತ್ತಿದ್ದ ವೇಳೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಕೆಲಸಗಾರರ ಮೇಲೆ ದಾಳಿ ಮಾಡಿರುವ ಕಾಡಾನೆ ಸೊಂಡಲಿನಿಂದ ತಿವಿದು, ತುಳಿದ ಕಾರಣ ಇಬ್ಬರು ಸ್ಥಳದಲ್ಲೇ ಪ್ರಾಣತೆತ್ತಿದ್ದಾರೆ.
ಕಾಡಾನೆ ದಾಳಿಗೆ ಇಬ್ಬರು ಬಲಿಯಾದ ಕಾರಣ ನೂರಾರು ಮಹಿಳೆಯರು ಹಾಗೂ ಗ್ರಾಮಸ್ಥರು ರಸ್ತೆ ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ.
ಸ್ಥಳಕ್ಕೆ ಅರಣ್ಯ ಸಚಿವರು, ಶಾಸಕರು ಬರುವವರೆಗೂ ಶವಗಳನ್ನು ಕೊಂಡೊಯ್ಯಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.
ಅರೇ ಹಳ್ಳಿ ಪೋಲಿಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಬುದ್ಧಿಮಾಂದ್ಯ ಬಾಲಕಿಗೆ ಪಕ್ಕದ ಮನೆಯವನಿಂದಲೇ ಅತ್ಯಾಚಾರ – ಆರೋಪಿ ಪರಾರಿ
ಲೋಕಾಯುಕ್ತ ಬಲೆಗೆ ಬಿದ್ದ ನಗರಸಭೆ ಆಯುಕ್ತ ಮತ್ತು ಸಹಾಯಕ ಕಾರ್ಯಪಾಲಕ ಇಂಜಿನಿಯರ್