ಕಾವೇರಿ ನದಿಯಲ್ಲಿ ಮುಳುಗಿ ಇಬ್ಬರು ಯುವಕರು ದುರ್ಮರಣ

Team Newsnap
1 Min Read

ಮಂಡ್ಯ : ಇಂದು ಜಿಲ್ಲೆಯ ಶ್ರೀರಂಗಪಟ್ಟಣದ ಗಂಜಾಮ್ ಸಮೀಪದ ನಿಮಿಷಾಂಭ ದೇಗುಲದ ಬಳಿ ಈಜಲು ಕಾವೇರಿ ನದಿಗೆ ಇಳಿದಿದ್ದಂತ ಇಬ್ಬರು ಯುವಕರು ನೀರುಪಾಲಾಗಿರುವ ಘಟನೆ ನಡೆದಿದೆ.

ವಿಶಾಲ್(19), ರೋಹಣ್(17) ನಿಮಿಷಾಂಭ ದೇಗುಲದ ಬಳಿಯಲ್ಲಿ ಕಾವೇರಿ ನದಿಯಲ್ಲಿ ಈಜಲು ತೆರಳಿದ್ದಂತ ಇಬ್ಬರು ಯುವಕರು ನೀರು ನೀರುಪಾಲಾಗಿದ್ದು ,ಈ ಇಬ್ಬರು ಬೆಂಗಳೂರು ಮತ್ತು ತಮಿಳಉನಾಡು ಮೂಲದ ಯುವಕರಾಗಿದ್ದಾರೆ.

ಮೈಸೂರಿನಲ್ಲಿ ಅಜ್ಜಿಯ ಮನೆಗೆ ಬಂದು ಕುಟುಂಬದ ಜೊತೆಗೆ ನಿಮಿಷಾಂಭ ದೇಗುಲದ ಬಳಿಯಲ್ಲಿ ಕಾವೇರಿ ನದಿಯಲ್ಲಿ ಈಜಲು ತೆರಳಿದ್ದು ,ಈ ವೇಳೆ ಇಬ್ಬರು ಯುವಕರು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.ದರ್ಶನ್ ವಿರುದ್ಧ ರೈತ ಸಂಘದ ಪ್ರತಿಭಟನೆ : ಪ್ರಕರಣದ ತನಿಖೆ ಸಿಬಿಐಗೆ ವಹಿಸಲು ಒತ್ತಾಯ

ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a comment