ಟೈಲರ್ ಕನ್ಹಯ್ಯ ಹತ್ಯೆ ಪ್ರಕರಣ ಖಂಡಿಸಿ ಸರ್ಕಾರವನ್ನು ಎಚ್ಚರಿಸಿದ ಪೇಜಾವರ ಶ್ರೀಗಳು

Team Newsnap
1 Min Read

ಟೈಲರ್ ಕನ್ಹಯ್ಯ ಹತ್ಯೆ ಪ್ರಕರಣ ಖಂಡಿಸಿ ಸರ್ಕಾರವನ್ನು ಪೇಜಾವರ ಶ್ರೀಗಳು ಎಚ್ಚರಿಸಿದ್ದಾರೆ.

ರಾಜಸ್ಥಾನದ ಉದಯಪುರದಲ್ಲಿ ಟೈಲರ್ ಕನ್ಹಯ್ಯ ಲಾಲ್​ರ ಹತ್ಯೆ ಖಂಡಿಸಿ ಮಾತನಾಡಿದ ಶ್ರೀಗಳು, ಕನ್ಹಯ್ಯರ ಹತ್ಯೆ ಪ್ರಕರಣ ಇಡೀ ನಾಗರಿಕ ಸಮಾಜ ತಲೆತಗ್ಗಿಸುವ ಘಟನೆ. ಸಂವಿಧಾನಬದ್ಧವಾದ ನಾಗರಿಕ ಸಮಾಜದಲ್ಲಿ ಅನಾಗರಿಕರು ಪ್ರವೇಶ ಮಾಡಿ ಅನ್ಯಾಯ ಎಸಗದಂತೆ ಚುನಾಯಿತ ಸರ್ಕಾರಗಳು ಕಾಳಜಿ ವಹಿಸಬೇಕು ಎಂದು ಸಲಹೆ ನೀಡಿದರು.

ಕೃಷಿ ಸೊಸೈಟಿಗಳಿಗೆ ಡಿಜಿಟಲ್‌ ಸ್ಪರ್ಶ: ಕೇಂದ್ರ ಸಚಿವ ಸಂಪುಟ ಅಸ್ತು

ಜನರ ರಕ್ಷಣೆ ಹೊಣೆ ಸರ್ಕಾರದ್ದು. ಅನಾಗರಿಕ ಪ್ರವೃತ್ತಿಯ ದುಷ್ಕರ್ಮಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಸಾರ್ವಜನಿಕರು ಯಾವುದೇ ಭಯವಿಲ್ಲದೆ ಮುಕ್ತ ವಾತಾವರಣದಲ್ಲಿ ಬದುಕುವಂತೆ ನೋಡಿಕೊಳ್ಳುವುದು ಸರ್ಕಾರದ ಕರ್ತವ್ಯ ಎಂದು ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅಭಿಪ್ರಾಯಪಟ್ಟಿದ್ದಾರೆ.

Share This Article
Leave a comment