ಶ್ರೀಲಂಕಾ ವಿರುದ್ಧದ ಅಂಡರ್-19 ಏಷ್ಯಾಕಪ್ ಫೈನಲ್ ಪಂದ್ಯದಲ್ಲಿ ಉತ್ತಮ ಆಟವಾಡಿದ ಟೀಮ್ ಇಂಡಿಯಾ ಟ್ರೋಫಿ
ಗೆದ್ದುಕೊಂಡಿದೆ
ಟೂರ್ನಿಯಲ್ಲಿ 8ನೇ ಬಾರಿಗೆ ಚಾಂಪಿಯನ್ ಆಗಿ ಹೊರ ಹೊಮ್ಮಿದೆ.
ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ಶ್ರೀಲಂಕಾ ತಂಡ ಭಾರತದ ಬೌಲಿಂಗ್ ದಾಳಿ ಎದುರು ಮಂಡಿಯೂರಿತು.
ಪ್ರಮುಖ ಬ್ಯಾಟ್ಸ್ಮನ್ಗಳಾದ ಚಾಮಿಂದು ವಿಕ್ರಮಸಿಂಘೆ, ಶೇವೋನ್ ಡೇನಿಯಲ್, ವಿಕೆಟ್ ಕೀಪರ್ ಅಂಜಲಾ ಭಂಡಾರಾ, ಪವನ್ ಪಥಿರಾಜಾ, ರಾನುಡಾ ಸೋಮರತ್ನೆ ಹಾಗೂ ನಾಯಕ ಡಿ. ವಲ್ಲಘೆ ಬಂದಷ್ಟೇ ವೇಗವಾಗಿ ಪೆವಿಲಿಯನ್ ಸೇರಿದರು
ಲಂಕಾ ತಂಡ 57 ರನ್ ಗಳಿಸುವ ವೇಳೆಗಾಗಲೇ 7 ವಿಕೆಟ್ ಗಳನ್ನು ಕಳೆದುಕೊಂಡಿತ್ತು. ಅಂತಿಮ ಹಂತದಲ್ಲಿ ಬಾಲಂಗೋಚಿಗಳಾದ ರವೀನ್ ಡಿ ಸಿಲ್ವಾ , ಯಾಸಿರು ರೋಡ್ರಿಗೋ ಹಾಗೂ ಮಥೀಶಾ ಪಥಿರಣ ತಂಡಕ್ಕೆ ನೆರವಾದರು .
ಮಳೆ ಬಂದ ಕಾರಣ ಪಂದ್ಯವನ್ನು ಡಕ್ವರ್ತ್ ಲೂಯಿಸ್ ನಿಯಮದಡಿಯಲ್ಲಿ 38 ಓವರ್ಗಳಿಗೆ ಕಡಿತಗೊಳಿಸಲಾಯ್ತು.
9 ವಿಕೆಟ್ ಗೆ 106 ರನ್ ಗಳಿಸಿದ್ದ ವೇಳೆ ಅವರ ಇನ್ನಿಂಗ್ಸ್ ಅನ್ನು ಕೊನೆ ಮಾಡಲಾಗಿತ್ತು. ಇನ್ನೂ ಡಿಎಲ್ಎಸ್ ನಿಯಮದಡಿ 38 ಓವರ್ ಗಳಲ್ಲಿ 102 ರನ್ಗಳ ಗುರಿಯನ್ನು ಭಾರತಕ್ಕೆ ನೀಡಲಾಯ್ತು.
ಈ ಗುರಿ ಬೆನ್ನತ್ತಿದ ಭಾರತ ಆರಂಭದಲ್ಲೇ ಎಡವಿತು. ಆರಂಭಿಕ ಹರ್ನೂರ್ ಸಿಂಗ್ ಕೇವಲ 5 ರನ್ಗಳಿಗೆ ಔಟಾಗಿ ನಿರಾಸೆ ಮೂಡಿಸಿದ್ರು. ಬಳಿಕ ಜೊತೆಯಾದ ರಘುವಂಶಿ ಹಾಗೂ ಶೇಖ್ ರಶೀದ್ ಅದ್ಭುತ ಜೊತೆಯಾಟ ಆಡುವ ಮೂಲಕ ಸುಲಭ ಗೆಲುವಿಗೆ ಕಾರಣರಾದರು. 96 ರನ್ ಗಳ ಜೊತೆಯಾಟವಾಡಿದ ಈ ಜೋಡಿ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸಿದ್ರು. 21.3 ಓವರ್ ಗಳಲ್ಲಿ 1 ವಿಕೆಟ್ ನಷ್ಟಕ್ಕೆ 104 ರನ್ ಬಾರಿಸಿದ ಭಾರತ 9 ವಿಕೆಟ್ಗಳ ಗೆಲುವು ಕಂಡಿತು.
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More
ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರ… Read More
ಬೆಂಗಳೂರು : ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಿಸಲು ಸಂಚು ರೂಪಿಸಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳ(ಎನ್ಐಎ)… Read More
ಹುಬ್ಬಳ್ಳಿ : ಇಂದು ಪಾಗಲ್ ಪ್ರೇಮಿಯೊಬ್ಬ ಪ್ರೀತಿ ನಿರಾಕರಿಸಿದ್ದಕ್ಕೆ ಮನೆಗೆ ನುಗ್ಗಿ ಯುವತಿಗೆ ಚಾಕುವಿನಿಂದ ಮನಬಂದಂತೆ ಇರಿದು ಹತ್ಯೆಗೈದಿರುವ ಘಟನೆ… Read More
This website uses cookies.
Leave a Comment