Trending

U-19 ಏಷ್ಯಾಕಪ್​ ಕಿರೀಟ ಭಾರತದ ಮುಡಿಗೆ

ಶ್ರೀಲಂಕಾ ವಿರುದ್ಧದ ಅಂಡರ್​​-19 ಏಷ್ಯಾಕಪ್​ ಫೈನಲ್​ ಪಂದ್ಯದಲ್ಲಿ ಉತ್ತಮ ಆಟವಾಡಿದ ಟೀಮ್​ ಇಂಡಿಯಾ ಟ್ರೋಫಿ
ಗೆದ್ದುಕೊಂಡಿದೆ

ಟೂರ್ನಿಯಲ್ಲಿ 8ನೇ ಬಾರಿಗೆ ಚಾಂಪಿಯನ್ ಆಗಿ ಹೊರ ಹೊಮ್ಮಿದೆ.
ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ಶ್ರೀಲಂಕಾ ತಂಡ ಭಾರತದ ಬೌಲಿಂಗ್​ ದಾಳಿ ಎದುರು ಮಂಡಿಯೂರಿತು.

ಪ್ರಮುಖ ಬ್ಯಾಟ್ಸ್​​​ಮನ್​ಗಳಾದ ಚಾಮಿಂದು ವಿಕ್ರಮಸಿಂಘೆ, ಶೇವೋನ್ ಡೇನಿಯಲ್, ವಿಕೆಟ್ ಕೀಪರ್ ಅಂಜಲಾ ಭಂಡಾರಾ, ಪವನ್ ಪಥಿರಾಜಾ, ರಾನುಡಾ ಸೋಮರತ್ನೆ ಹಾಗೂ ನಾಯಕ ಡಿ. ವಲ್ಲಘೆ ಬಂದಷ್ಟೇ ವೇಗವಾಗಿ ಪೆವಿಲಿಯನ್​ ಸೇರಿದರು

ಲಂಕಾ ತಂಡ 57 ರನ್ ಗಳಿಸುವ ವೇಳೆಗಾಗಲೇ 7 ವಿಕೆಟ್ ಗಳನ್ನು ಕಳೆದುಕೊಂಡಿತ್ತು. ಅಂತಿಮ ಹಂತದಲ್ಲಿ ಬಾಲಂಗೋಚಿಗಳಾದ ರವೀನ್ ಡಿ ಸಿಲ್ವಾ , ಯಾಸಿರು ರೋಡ್ರಿಗೋ  ಹಾಗೂ ಮಥೀಶಾ ಪಥಿರಣ ತಂಡಕ್ಕೆ ನೆರವಾದರು .

ಮಳೆ ಬಂದ ಕಾರಣ ಪಂದ್ಯವನ್ನು ಡಕ್​ವರ್ತ್​ ಲೂಯಿಸ್​ ನಿಯಮದಡಿಯಲ್ಲಿ 38 ಓವರ್​ಗಳಿಗೆ ಕಡಿತಗೊಳಿಸಲಾಯ್ತು.

9 ವಿಕೆಟ್ ಗೆ 106 ರನ್ ಗಳಿಸಿದ್ದ ವೇಳೆ ಅವರ ಇನ್ನಿಂಗ್ಸ್ ಅನ್ನು ಕೊನೆ ಮಾಡಲಾಗಿತ್ತು. ಇನ್ನೂ ಡಿಎಲ್​ಎಸ್​ ನಿಯಮದಡಿ 38 ಓವರ್ ಗಳಲ್ಲಿ 102 ರನ್​ಗಳ ಗುರಿಯನ್ನು ಭಾರತಕ್ಕೆ ನೀಡಲಾಯ್ತು.

ಈ ಗುರಿ ಬೆನ್ನತ್ತಿದ ಭಾರತ ಆರಂಭದಲ್ಲೇ ಎಡವಿತು. ಆರಂಭಿಕ ಹರ್ನೂರ್ ಸಿಂಗ್ ಕೇವಲ 5 ರನ್​ಗಳಿಗೆ ಔಟಾಗಿ ನಿರಾಸೆ ಮೂಡಿಸಿದ್ರು. ಬಳಿಕ ಜೊತೆಯಾದ ರಘುವಂಶಿ ಹಾಗೂ ಶೇಖ್​ ರಶೀದ್​ ಅದ್ಭುತ ಜೊತೆಯಾಟ ಆಡುವ ಮೂಲಕ ಸುಲಭ ಗೆಲುವಿಗೆ ಕಾರಣರಾದರು. 96 ರನ್ ಗಳ ಜೊತೆಯಾಟವಾಡಿದ ಈ ಜೋಡಿ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸಿದ್ರು. 21.3 ಓವರ್ ಗಳಲ್ಲಿ 1 ವಿಕೆಟ್ ನಷ್ಟಕ್ಕೆ 104 ರನ್ ಬಾರಿಸಿದ ಭಾರತ 9 ವಿಕೆಟ್​ಗಳ ಗೆಲುವು ಕಂಡಿತು.

Team Newsnap
Leave a Comment
Share
Published by
Team Newsnap

Recent Posts

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್‌ನಲ್ಲಿ ಘೋಷಣೆ… Read More

May 16, 2024

ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More

May 16, 2024

ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ

ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More

May 16, 2024

ಪ್ರಜ್ವಲ್ ಪೆಂಡ್ರೈವ್ ಪ್ರಕರಣ : 10 ಪೆನ್ ಡ್ರೈವ್ ಪ್ರೀತಂ ಗೌಡ ಆಪ್ತರ ಮನೆಯಲ್ಲಿ ಪತ್ತೆ

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳು ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರ… Read More

May 16, 2024

ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು; ಮೈಸೂರಿನಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ ಎನ್‌ಐಎ

ಬೆಂಗಳೂರು : ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಿಸಲು ಸಂಚು ರೂಪಿಸಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳ(ಎನ್‌ಐಎ)… Read More

May 15, 2024

ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಯುವತಿಯ ಭೀಕರ ಹತ್ಯೆ

ಹುಬ್ಬಳ್ಳಿ : ಇಂದು ಪಾಗಲ್ ಪ್ರೇಮಿಯೊಬ್ಬ ಪ್ರೀತಿ ನಿರಾಕರಿಸಿದ್ದಕ್ಕೆ ಮನೆಗೆ ನುಗ್ಗಿ ಯುವತಿಗೆ ಚಾಕುವಿನಿಂದ ಮನಬಂದಂತೆ ಇರಿದು ಹತ್ಯೆಗೈದಿರುವ ಘಟನೆ… Read More

May 15, 2024