ಅಂತಾರಾಷ್ಟ್ರೀಯ

ಇನ್ನು ಮುಂದೆ ಸರ್ ನೇಮ್ ಇಲ್ಲದೇ ಹೋದರೆ UAE ವೀಸಾ ಅಲಭ್ಯ

ಪಾಸ್‍ಪೋರ್ಟ್ ನಲ್ಲಿ ಯಾವುದೇ ಉಪನಾಮ ( ಸರ್ ನೇಮ್ ) ಇಲ್ಲದೇ ಏಕನಾಮ ಹೊಂದಿದ್ದರೆ ಅಂತಹ ಪ್ರಯಾಣಿಕರಿಗೆ ವೀಸಾ ನೀಡುವುದಿಲ್ಲ ಎಂದು ಯುಎಇ ಹೇಳಿದೆ.

2022ರ ನವೆಂಬರ್ 21 ರಿಂದ ಈ ನಿಯಮ ಜಾರಿಗೆ ಬರಲಿದೆ. ವಿದೇಶ ಪ್ರವಾಸ ಅಥವಾ ಯಾವುದೇ ರೀತಿಯ ಪ್ರವಾಸಕ್ಕೆ ತೆರಳುವವರು ಪಾಸ್‍ಪೋರ್ಟ್‍ನಲ್ಲಿ ಏಕನಾಮ ಹೊಂದಿದ್ದರೆ, ಅವರಿಗೆ ಯುಎಇಗೆ/ವಿನಿಂದ ಪ್ರಯಾಣಿಸಲು ಅನುಮತಿಸಲಾಗುವುದಿಲ್ಲ ಎಂದು ತಿಳಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಏರ್‌ಇಂಡಿಯಾ, ಏರ್‌ಇಂಡಿಯಾ ಎಕ್ಸ್‌ಪ್ರೆಸ್ ಮತ್ತು ಇಂಡಿಗೋ ವಿಮಾನಯಾನ ಸಂಸ್ಥೆಗಳು ಸುತ್ತೋಲೆ­ಯನ್ನು ಹೊರಡಿಸಿವೆ.

ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಈ ನಿಯಮ ಅನ್ವಯವಾಗುತ್ತದೆ. ಉದಾಹರಣೆಗೆ ನಿಮ್ಮ ಹೆಸರು ರಮೇಶ್ ಎಂದಷ್ಟೇ ಇದ್ದರೆ, ನಿಮಗೆ ಪ್ರವೇಶ ಸಿಗುವುದಿಲ್ಲ. ನಿಮ್ಮ ಹೆಸರಿನ ಜೊತೆಗೆ ಉಪನಾಮಗಳಿದ್ದರೆ ನೀವು ಯಾವುದೇ ಸಮಸ್ಯೆಯಿಲ್ಲದೇ ಯುಎಇಗೆ ಪ್ರವೇಶಿಸಬಹುದು. ಶಿಕ್ಷಣ ಇಲಾಖೆ: 5 ವರ್ಷಕ್ಕಿಂತ ಹೆಚ್ಚು ಕಾಲ ಇರುವ ಬೋಧಕೇತರರ ವರ್ಗಾವಣೆ

ಈ ನಿಯಮವು ವಿಸಿಟಿಂಗ್ ವೀಸಾ, ವೀಸಾ ಆನ್ ಅರೈವಲ್, ಉದ್ಯೋಗ ವೀಸಾ ಮತ್ತು ತಾತ್ಕಾಲಿಕ ವೀಸಾ ಹೊಂದಿರುವವರಿಗೆ ಅನ್ವಯವಾಗುತ್ತದೆ. ಯುಎಇ ರೆಸಿಡೆಂಟ್ ಕಾರ್ಡ್ ಹೊಂದಿರುವವರಿಗೆ ಇದು ಅನ್ವಯವಾಗುವುದಿಲ್ಲ.

Team Newsnap
Leave a Comment
Share
Published by
Team Newsnap

Recent Posts

5 ವಿದ್ಯಾರ್ಥಿಗಳ ಕಾವೇರಿ ನದಿಯಲ್ಲಿ ಮುಳುಗಿ ದುರ್ಮರಣ

ರಾಮನಗರ : ಮೇಕೆದಾಟು (Mekedatu) ಬಳಿಯ ಸಂಗಮದ ಕಾವೇರಿ ನದಿಯಲ್ಲಿ ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರು ಪಾಲಾದ ಘಟನೆ… Read More

April 29, 2024

ಎಸ್.ಎಂ ಕೃಷ್ಣ ಆರೋಗ್ಯದಲ್ಲಿ ಏರುಪೇರು; ಮಣಿಪಾಲ್ ಆಸ್ಪತ್ರೆಗೆ ದಾಖಲು

ಬೆಂಗಳೂರು: ಮಾಜಿ ಸಿಎಂ ಎಸ್.ಎಂ ಕೃಷ್ಣ (91) ಆರೋಗ್ಯದಲ್ಲಿ ಏರುಪೇರು ಆಗಿದೆ. ವೈದ್ಯರ ಸೂಚನೆ ಮೇರೆಗೆ ಮಣಿಪಾಲ್ ಆಸ್ಪತ್ರೆಗೆ ಎಸ್.ಎಂ… Read More

April 29, 2024

ಜೆಡಿಎಸ್ ನಿಂದ ಪ್ರಜ್ವಲ್ ರೇವಣ್ಣ ಅಮಾನತ್ತು – ಎಚ್ ಡಿಕೆ

ಬೆಂಗಳೂರು: ಮಹಿಳೆಯರ ಮೇಲಿನ ಸತತ ದೌರ್ಜನ್ಯದ ಆರೋಪಗಳ ಹಿನ್ನೆಲೆಯಲ್ಲಿ ಸಂಸದ ಪ್ರಜ್ವಲ್ ರೇವಣ್ಣರನ್ನು ಜೆಡಿಎಸ್ ನಿಂದ ಅಮಾನತು ಮಾಡಲಾಗಿದೆ. ಈ… Read More

April 29, 2024

ನಾಳೆ ಶ್ರೀನಿವಾಸ ಪ್ರಸಾದ್ ಅವರ ಅಂತಿಮ ಸಂಸ್ಕಾರ

ಮೈಸೂರು : ಶ್ರೀನಿವಾಸ್‌ ಪ್ರಸಾದ್ (Srinivas Prasad) ಅವರ ಅಂತ್ಯಕ್ರಿಯೆ ನಾಳೆ ಮಾಡಲಾಗುತ್ತದೆ ಎಂದು ‌ ಮಗಳು ಪ್ರತಿಮಾ ಪ್ರಸಾದ್‌… Read More

April 29, 2024

ಭ್ರೂಣ ಲಿಂಗ ಪತ್ತೆ ಪ್ರಕರಣ – ಮೈಸೂರಿನಲ್ಲಿ 17 ಮಂದಿ ವಿರುದ್ಧ ಎಫ್‌ಐಆರ್‌ ದಾಖಲು

ಮೈಸೂರು : ಉದಯಗಿರಿ ಪೊಲೀಸ್‌ ಠಾಣೆಯಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಗರ್ಭಪಾತ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಮಂದಿ… Read More

April 29, 2024

ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

ಬೆಂಗಳೂರು: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್​ (76) ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಮೂತ್ರಕೋಶ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಅವರು… Read More

April 29, 2024