Karnataka

ಬೆಂಗಳೂರಿನ KSR ರೈಲು ನಿಲ್ದಾಣದಲ್ಲಿ ಉದ್ಯಾನ್ ಎಕ್ಸ್‌ಪ್ರೆಸ್ ಗೆ​ ಬೆಂಕಿ

ಬೆಂಗಳೂರು : KSR ರೈಲು ನಿಲ್ದಾಣದಲ್ಲಿ ಉದ್ಯಾನ್ ಎಕ್ಸ್‌ಪ್ರೆಸ್ ರೈಲಿನ ಇಂಜಿನ್​ನಲ್ಲಿ ದಿಢೀರ್ ಕಾಣಿಸಿಕೊಂಡಿದೆ

ತಾಂತ್ರಿಕ ಸಮಸ್ಯೆಯಿಂದ ಉದ್ಯಾನ್​ ರೈಲಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ರೈಲ್ವೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆದಿದ್ದಾರೆ. ಸ್ಥಳಕ್ಕೆ ಮೂರು ಅಗ್ನಿಶಾಮಕ ವಾಹನಗಳು ದೌಡಾಯಿಸಿ ಬೆಂಕಿಯನ್ನು ನಂದಿಸಿವೆ. ರೈಲಿನ ಎರಡು ಸ್ಲೀಪರ್ ಕೋಚ್​ಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಬೆಳಗ್ಗೆ 6 ಗಂಟೆಗೆ KSR ನಿಲ್ದಾಣಕ್ಕೆ ಉದ್ಯಾನ್​ ಟ್ರೈನ್​ ಮುಂಬೈನಿಂದ ಬಂದಿತು. ಮೊದಲು ಎಸಿ ಕೋಚ್​ನಲ್ಲಿ ಬೆಂಕಿ ಕಾಣಿಸಿಕೊಂಡಿತು. B1-B2 ಬೋಗಿಯಲ್ಲಿ ಬೆಂಕಿ ಕಾಣಿಸಿಕೊಂಡಿರುವ ಬಗ್ಗೆ ಮಾಹಿತಿ ತಿಳಿದುಬಂದಿದೆ. ನಿನ್ನೆ ರಾತ್ರಿ 8.10ಕ್ಕೆ ಮುಂಬೈನ ಛತ್ರಪತಿ ಶಿವಾಜಿ ಟರ್ಮಿನಲ್​ನಿಂದ ಉದ್ಯಾನ್​ ರೈಲು ಹೊರಟಿತ್ತು. ಶಾರ್ಟ್ ಸರ್ಕ್ಯೂಟ್​ನಿಂದ ಬೆಂಕಿ ಹೊತ್ತಿಕೊಂಡಿರೋ ಶಂಕೆ ವ್ಯಕ್ತವಾಗಿದೆ. AC ಕೋಚ್​ನಿಂದಲೇ ಮೊದಲು ಬೆಂಕಿ ಹೊತ್ತಿಕೊಂಡಿರೋ ಮಾಹಿತಿ ಇದೆ. ಬೆಂಗಳೂರಿನಲ್ಲಿ ಭಾರತದ ಮೊದಲ 3ಡಿ ಮುದ್ರಿಸಿದ ಅಂಚೆ ಕಚೇರಿ ಲೋಕಾರ್ಪಣೆ

ಅಗ್ನಿಶಾಮಕ ಸಿಬ್ಬಂದಿ ಘಟನಾ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ. ಈ ಘಟನೆಯಿಂದ ಮೆಜೆಸ್ಟಿಕ್ ಸುತ್ತಮುತ್ತ ದಟ್ಟ ಹೊಗೆ ಆವರಿಸಿಕೊಂಡಿತು. ಇದನ್ನು ನೋಡಿ ಜನರು ಒಂದು ಕ್ಷಣ ಗಾಬರಿಯಾದರು.

ರೈಲಿನ ಬೋಗಿಗಳಲ್ಲಿಯೂ ಬೆಂಕಿ ಕಾಣಿಸಿಕೊಂಡಿದೆ. ಈ ಉದ್ಯಾನ್ ಎಕ್ಸ್‌ಪ್ರೆಸ್‌ ರೈಲು‌ ಮುಂಬೈನಿಂದ ಆಗಮಿಸಿತ್ತು. ರೈಲು ನಿಲುಗಡೆಯಾದ ಬಳಿಕ ಈ ಅಗ್ನಿ ಅವಘಡ ಸಂಭವಿಸಿದೆ. ಚಾಲನೆಯಲ್ಲಿ ಇರುವಾಗ ಸಂಭವಿಸಿದ್ದರೆ ಅನಾಹುತ ನಡೆಯುವ ಸಾಧ್ಯತೆ ಇತ್ತು. ಪ್ರಯಾಣಿಕರು ಇಳಿದು ಹೋದ ಬಳಿಕ ಈ ಅವಘಡ ನಡೆದಿದೆ.

KSR ರೈಲು ನಿಲ್ದಾಣ | ಬೆಂಗಳೂರಿನ KSR ರೈಲು ನಿಲ್ದಾಣದಲ್ಲಿ ಉದ್ಯಾನ್ ಎಕ್ಸ್‌ಪ್ರೆಸ್ ಗೆ​ ಬೆಂಕಿ – Udyan Express catches fire at Bangalore KSR railway station #BENGALURU #KSR

Team Newsnap
Leave a Comment
Share
Published by
Team Newsnap

Recent Posts

ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ

2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್​ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More

May 18, 2024

SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ

ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More

May 17, 2024

ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More

May 17, 2024

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್‌ನಲ್ಲಿ ಘೋಷಣೆ… Read More

May 16, 2024

ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More

May 16, 2024

ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ

ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More

May 16, 2024