February 23, 2026

Newsnap Kannada

The World at your finger tips!

karona

ರಾಜ್ಯದಲ್ಲಿ ಯುಗಾದಿ ದಿನವೂ 8,778 ಹೊಸ ಪ್ರಕರಣ, 67 ಸಾವು, ಬೆಂಗಳೂರಿನಲ್ಲಿ 5,500 ಕೇಸ್

Spread the love

ರಾಜ್ಯದಲ್ಲಿ ಯುಗಾದಿ ದಿನವೂ ಕೊರೋನಾ ಅಬ್ಬರಿಸಿದೆ. ಇಂದು 8,778 ಜನರಿಗೆ ಕೊರೊನಾ ಸೋಂಕು ತಗುಲಿದೆ. 67 ಜನ ಸಾವನ್ನಪ್ಪಿದ್ದಾರೆ.

ಬೆಂಗಳೂರಿನಲ್ಲಿ 5,500 ಜನರಿಗೆ ಸೋಂಕು ತಗುಲಿದೆ. ಸಿಲಿಕಾನ್ ಸಿಟಿಯಲ್ಲಿ 55 ಜನ ಮಹಾಮಾರಿಗೆ ಬಲಿಯಾಗಿದ್ದಾರೆ.

ಈ ಮೂಲಕ ರಾಜ್ಯದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 78,617ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 10,83,647ಕ್ಕೆ ಹೆಚ್ಚಳವಾಗಿದೆ. ರಾಜ್ಯದಲ್ಲಿ ಇಂದು 6,079 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಈ ವರೆಗೆ ಒಟ್ಟು 9,92,003 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಯಾವ ಜಿಲ್ಲೆಯಲ್ಲಿ‌ ಎಷ್ಟು ಪ್ರಕರಣ ?

ಬಾಗಲಕೋಟೆ 73, ಬಳ್ಳಾರಿ 168, ಬೆಳಗಾವಿ 42, ಬೆಂಗಳೂರು ಗ್ರಾಮಾಂತರ 163, ಬೆಂಗಳೂರು ನಗರ 5,500, ಬೀದರ್ 198, ಚಾಮರಾಜನಗರ 51, ಚಿಕ್ಕಬಳ್ಳಾಪುರ 114, ಚಿಕ್ಕಮಗಳೂರು 19, ಚಿತ್ರದುರ್ಗ 45, ದಕ್ಷಿಣ ಕನ್ನಡ 142, ದಾವಣಗೆರೆ 66, ಧಾರವಾಡ 132, ಗದಗ 30, ಹಾಸನ 150, ಹಾವೇರಿ 17, ಕಲಬುರಗಿ 290, ಕೊಡಗು 14, ಕೋಲಾರ 67, ಕೊಪ್ಪಳ 29, ಮಂಡ್ಯ 114, ಮೈಸೂರು 492, ರಾಯಚೂರು 80, ರಾಮನಗರ 37, ಶಿವಮೊಗ್ಗ 95, ತುಮಕೂರು 350, ಉಡುಪಿ 75, ಉತ್ತರ ಕನ್ನಡ 75, ವಿಜಯಪುರ 105 ಹಾಗೂ ಯಾದಗಿರಿಯಲ್ಲಿ 45 ಪ್ರಕರಣಗಳು ವರದಿಯಾಗಿವೆ.

error: Content is protected !!