ಉಜಿರೆಯಲ್ಲಿ ಬಾಲಕನ ಕಿಡ್ನಾಪ್ ಪ್ರಕರಣ ಕೋಲಾರದಲ್ಲಿ ಸುಖಾಂತ್ಯ ಕಂಡಿದೆ.
ಕಿಡ್ನಾಪ್ ಆಗಿದ್ದ ಬಾಲಕ ಅನುಭವ್ (8) ಬಾಲಕನನ್ನು ಪೊಲೀಸರು ಸುರಕ್ಷಿತವಾಗಿ ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕೋಲಾರದ ಬಳಿ ಮಾಸ್ತಿಯಲ್ಲಿ ಮಗುವನ್ನು ಪತ್ತೆ ಹಚ್ಚಿ 6 ಜನ ಅಪಹರಣಕಾರರನ್ನು ಬಂಧಿಸಲಾಗಿದೆ. ಅಪಹರಣವಾದ 48 ಗಂಟೆಗಳಲ್ಲಿ ಪ್ರಕರಣವನ್ನು ಪೋಲಿಸರು ಭೇದಿಸಿದ್ದಾರೆ.
ಉಜಿರೆ ರಥಬೀದಿಯ ಬಿಜೋಯ್ ಮಗ ಅನುಭವ್ ಮನೆಯಂಗಳದಲ್ಲಿ ಆಡುತ್ತಿದ್ದಾಗಲೇ ಎರಡು ದಿನಗಳ ಹಿಂದೆ ಅಪಹರಣಕಾರರು ಅಪಹರಿಸಿದ್ದರು. ಉಭಯ ಜಿಲ್ಲೆಗಳಲ್ಲಿ ಈ ಪ್ರಕರಣ ಸಾಕಷ್ಟು ಆತಂಕ ಸೃಷ್ಟಿಸಿತ್ತು.
ಕೋಲಾರದ ಮಾಸ್ತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಹರಣಕಾರರನ್ನು ಮಗುವಿನೊಂದಿಗೆ ವಿಶೇಷ ತಂಡ ಪೊಲೀಸರು ಶನಿವಾರ ಬೆಳಗ್ಗೆ 5 ರ ಹೊತ್ತಿಗೆ ಪತ್ತೆ ಹಚ್ಚಿದರು. ಕೂಡಲೇ ಅಪಹರಣಕಾರರನ್ನು ಕೋಲಾರ ಪೊಲೀಸ್ ಠಾಣೆಗೆ ಕರೆತರಲಾಯಿತು.
ಅಪಹರಣಕಾರರು 17 ಕೋಟಿ ರು ಬೇಡಿಕೆ ಇಟ್ಟಿರುವ ಹಿನ್ನೆಲೆಯಲ್ಲಿ ಈ ಪ್ರಕರಣದ ಹಿಂದೆ ಯಾರ ಕೈವಾಡ ಇದೆ ಎಂಬುದನ್ನು ಮಂಗಳೂರು ಪೋಲಿಸರು ಬಯಲಿಗೆ ಎಳೆಯಲಿದ್ದಾರೆ.
ಈ ಕುರಿತಂತೆ ತನಿಖೆ ಮುಂದುವರೆದಿದೆ
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ