ರಿಹಾನಾಗೆ ರೈತರ ಶ್ರಮದ ಬಗ್ಗೆ ಏನು ಗೊತ್ತು? ರಿಹಾನಾ ಭತ್ತದ ಗದ್ದೆ ನೋಡಿದ್ದಾರಾ? ಎಂದು ಕೇಂದ್ರ ಸಚಿವ ಸದಾನಂದಗೌಡ ಪಾಪ್ ಗಾಯಕಿ ರಿಹಾನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಮೈಸೂರಿನಲ್ಲಿ ಶನಿವಾರ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಪಾಪ್ ಗಾಯಕಿ ರಿಹಾನ ಅವರಿಗೆ ರೈತರ ಕಷ್ಟದ ಬಗ್ಗೆ ಏನು ಗೊತ್ತಿದೆ. ಅವರಿಗೆ ರೈತರ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ರಿಹಾನಾ ಭತ್ತದ ಗದ್ದೆ ಮುಂದೆ ನಿಂತು ಫೋಟೋ ತೆಗೆಸಿಕೊಂಡು ಹೋಗಿರಬಹುದು ಅಷ್ಟೇ. ಆದರೆ, ರೈತರ ಶ್ರಮ ಬಗ್ಗೆ ತಿಳಿದಿಲ್ಲ ಎಂದು ಕಿಡಿಕಾರಿದರು.
ವಿದೇಶಿ ಕೈಗೊಂಬೆಯಾಗಿ ಅವರು ಈ ರೀತಿ ಹೇಳಿಕೆ ನೀಡುತ್ತಿದ್ದಾರೆ. ರೈತರು ಹೇಗೆ ತಮ್ಮ ಉತ್ಪನ್ನಗಳನ್ನು ಮಾರುಕಟ್ಟೆಯಲ್ಲಿ ಮಾರಾಟ ಮಾಡುತ್ತಾರೆ ಎಂಬ ವಿಚಾರವನ್ನು ಅವರು ತಿಳಿದುಕೊಂಡಿದ್ದಾರ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ದೇಶಕ್ಕೆ ಸ್ವಾತಂತ್ರ್ಯ ಬಂದಿದ್ದರೂ ರೈತನಿಗೆ ಇನ್ನು ಸ್ವಾತಂತ್ರ್ಯ ದೊರಕಿಲ್ಲ. ರೈತರು ತಮಗೆ ಬೇಕಾದವರಿಗೆ ಬೆಳೆ ಮಾರಾಟ ಮಾಡಲು ಸ್ವಾತಂತ್ರ್ಯ ಇಲ್ಲವಾಗಿದೆ. ಹಾಗಾಗಿ ರೈತನಿಗೆ ಬೆಳೆದ ಬೆಳೆಯನ್ನು ಮುಕ್ತವಾಗಿ ಮಾರಲು ಸ್ವಾತಂತ್ರ್ಯ ನೀಡುತ್ತಿದ್ದೇವೆ. ತನ್ನ ಬೆಳೆಗೆ ಯಾರಾದರೂ ಹೆಚ್ಚು ಬೆಲೆ ಕೊಡುವವರಿಗೆ ಮಾರಾಟ ಮಾಡಲಿ ಎಂದರು.
ರೈತರು ಬಂಡವಾಳ ಶಾಹಿಗಳ ಕೈಗೊಂಬೆಯಾಗುತ್ತಾರೆ ಎನ್ನುವುದು ಸುಳ್ಳು. ರೈತರು ಎಪಿಎಂಸಿ ಕೈಗೊಂಬೆಯಾಗಿ ಇರುವುದು ಬೇಡ. ಸ್ವತಂತ್ರವಾಗಿ ಬೆಳೆ ಮಾರಾಟ ಮಾಡಲು ಅವಕಾಶ ಕೊಟ್ಟಿದ್ದೇವೆ. ಆದರೆ, ಪಟ್ಟಭದ್ರ ಹಿತಾಸಕ್ತಿಯಿಂದ ರೈತರ ಪ್ರತಿಭಟನೆ ನಡೆಯುತ್ತಿದೆ ಎಂದು ಆರೋಪಿಸಿದರು.
ಜನರ ಸಮಸ್ಯೆಗಳಿಗಿಂತ ಟಿವಿ ಚಾನಲ್ ಗಳಿಗೆ ಗಂಡ ಹೆಂಡ್ತಿ ಜಗಳಗಳ ಬಗ್ಗೆಯೇ ಹೆಚ್ಚು ಆಸಕ್ತಿ: ಸಿಎಂ ವ್ಯಂಗ್ಯ ಫೇಕ್ ನ್ಯೂಸ್… Read More
ಹಾಸನ: 10 ವರ್ಷದ ಬಾಲಕನೊಬ್ಬ ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನದ ಅಲೂರು ತಾಲೂಕಿನ ಚಿನ್ನಪುರದಲ್ಲಿ ನಡೆದಿದೆ. ಮೃತ ಬಾಲಕ ಸಚಿನ್… Read More
ಮೈಸೂರು: ಶುಕ್ರವಾರ ( 20-09-2024 ) ರಾತ್ರಿ ದಸರಾ ಗಜಪಡೆಯ ಆನೆ ಧನಂಜಯ ಮತ್ತೊಂದು ಆನೆ ಕಂಜನ್ ಮೇಲೆ ಏಕಾಏಕಿ… Read More
ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More
ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
This website uses cookies.
Leave a Comment