filmy

ಉರಿಗೌಡ, ದೊಡ್ಡ ನಂಜೇಗೌಡ ಸಿನಿಮಾ ಮಾಡಲ್ಲ : ಸಚಿವ ಮುನಿರತ್ನ

ಉರಿಗೌಡ, ದೊಡ್ಡ ನಂಜೇಗೌಡ ಸಿನಿಮಾ ನಿರ್ಮಾಣದ ಕುರಿತಂತೆ ಮುನಿರತ್ನ ಯೂಟರ್ನ್ ಹೊಡೆದಿದ್ದು, ನಿರ್ಮಲಾನಂದ ಸ್ವಾಮೀಜಿಗಳ ಭೇಟಿ ಬಳಿಕ ಮಾತನಾಡಿದ ಮುನಿರತ್ನ ಅವರು, ಉರಿಗೌಡ, ದೊಡ್ಡ ನಂಜೇಗೌಡ ಕುರಿತ ಸಿನಿಮಾ ನಿರ್ಮಾಣ ಮಾಡಲ್ಲ ಎಂದು ಹೇಳುವ ಮೂಲಕ ವಿವಾದಿತ ಚಲನಚಿತ್ರ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.

ಬಿಜೆಪಿಯವನು ಅಂತಾ ನಾನು ಈ ಸಿನಿಮಾ ಮಾಡಲು ಹೋಗಲ್ಲ. ಶ್ರೀಗಳು ನೈಜತೆ ಇದ್ದರೆ ಅದರ ಬಗ್ಗೆ ಯೋಚನೆ ಮಾಡಿ ಎಂದರು. ಗೊಂದಲ ಇರುವಾಗ ಯಾವುದು ಸೂಕ್ತ ಎಂದು ಕೇಳಿದರು. ಶ್ರೀಗಳ ಮಾತಿನಂತೆ ನಾನು ಸಿನಿಮಾ ಮಾಡಲ್ಲ ಎಂದು ಹೇಳಿದ್ದಾರೆ.

ಉರಿಗೌಡ, ನಂಜೇಗೌಡ ಸಿನಿಮಾ ನಿರ್ಮಾಣ ವಿಚಾರ ರಾಜಕೀಯ ಗದ್ದಲಕ್ಕೆ ಕಾರಣವಾದ ಬೆನ್ನಲ್ಲೆ ನಿರ್ಮಾಪಕ, ತೋಟಗಾರಿಕೆ ಇಲಾಖೆ ಸಚಿವ ಮುನಿರತ್ನ ಉರಿಗೌಡ-ನಂಜೇಗೌಡ ಪಾತ್ರಗಳನ್ನು ಪ್ರಧಾನವಾಗಿರಿಸಿ ಅದೇ ಹೆಸರಲ್ಲಿ ಸಿನಿಮಾ ನಿರ್ಮಾಣಕ್ಕೆ ಮುಂದಾಗಿದ್ದರು.

ವೃಷಭ ಪ್ರೊಡಕ್ಷನ್‌ನಲ್ಲಿ ಮೇ 14ರಂದು ಚಿತ್ರೀಕರಣದ ಮುಹೂರ್ತ ಮಾಡಬೇಕು ಅಂದುಕೊಂಡಿದ್ದೆ. ಬಹಳ ದೊಡ್ಡ ಸಿನಿಮಾ ಮಾಡಬೇಕು ಅಂದುಕೊಂಡಿದ್ದೆ. ಮೈಸೂರು ಸಂಸ್ಥಾನ ಹಾಗೂ ಟಿಪ್ಪು ವಿಚಾರಕ್ಕೆ ಸಂಬಂಧಿಸಿದಂತೆ ದೊಡ್ಡ ಚರ್ಚೆಯಾಗಿತ್ತು. ಕುಮಾರಸ್ವಾಮಿ ಅವರು ಮುನಿರತ್ನನಿಗೆ ಅಶ್ವಥ್‌ ನಾರಾಯಣ್ ಸಿನಿಮಾ ಮಾಡೋಕೆ ಹೇಳಿರಬೇಕು ಎಂದಿದ್ದರು. ಅಲ್ಲಿಯವರೆಗೆ ನನಗೆ ಸಿನಿಮಾ ಮಾಡುವ ಆಲೋಚನೆ ಇರಲಿಲ್ಲ ಎಂದು ತಿಳಿಸಿದ್ದಾರೆ.

ಉರಿಗೌಡ-ನಂಜೇಗೌಡ ವಿಚಾರದಲ್ಲಿ ಒಂದಷ್ಟು ದಾಖಲೆ ಸಿಗುತ್ತಿವೆ, ಒಂದಷ್ಟು ಸಿಗುತ್ತಿಲ್ಲ. ನನಗ ಚಿತ್ರ ಮಾಡಬೇಕು ಅನ್ನಿಸಿತು. ಸ್ವಾಮೀಜಿ ಅವರ ಜೊತೆ ಚರ್ಚೆ ಮಾಡಿದೆ. ಆಗ ನನಗೆ ಅನ್ನಿಸಿತು, ಯಾರಿಗೂ ಮನಸ್ಸು ನೋಯಿಸಿ ಸಿನಿಮಾ ಮಾಡಬಾರದು. ಸಿನಿಮಾ ಮಾಡಲು ಕಥೆಗಳು ತುಂಬಾ ಸಿಗುತ್ತದೆ. ಸ್ವಾಮೀಜಿ ಅವರಿಗೆ ಹೇಳಿದ್ದೇನೆ. ಯಾರ ಮನಸ್ಸು ನೋಯಿಸುವ ಉದ್ದೇಶ ನನ್ನದಲ್ಲ. ನಾನು ಈ‌ ಸಿನಿಮಾವನ್ನು ಇಲ್ಲಿಗೆ ಕೈ ಬಿಡುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.

Team Newsnap
Leave a Comment
Share
Published by
Team Newsnap

Recent Posts

ನಾಳೆ ಶ್ರೀನಿವಾಸ ಪ್ರಸಾದ್ ಅವರ ಅಂತಿಮ ಸಂಸ್ಕಾರ

ಮೈಸೂರು : ಶ್ರೀನಿವಾಸ್‌ ಪ್ರಸಾದ್ (Srinivas Prasad) ಅವರ ಅಂತ್ಯಕ್ರಿಯೆ ನಾಳೆ ಮಾಡಲಾಗುತ್ತದೆ ಎಂದು ‌ ಮಗಳು ಪ್ರತಿಮಾ ಪ್ರಸಾದ್‌… Read More

April 29, 2024

ಭ್ರೂಣ ಲಿಂಗ ಪತ್ತೆ ಪ್ರಕರಣ – ಮೈಸೂರಿನಲ್ಲಿ 17 ಮಂದಿ ವಿರುದ್ಧ ಎಫ್‌ಐಆರ್‌ ದಾಖಲು

ಮೈಸೂರು : ಉದಯಗಿರಿ ಪೊಲೀಸ್‌ ಠಾಣೆಯಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಗರ್ಭಪಾತ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಮಂದಿ… Read More

April 29, 2024

ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

ಬೆಂಗಳೂರು: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್​ (76) ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಮೂತ್ರಕೋಶ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಅವರು… Read More

April 29, 2024

ಇಬ್ಬರು ಮಕ್ಕಳು ಬಿಸಿಲ ಝಳಕ್ಕೆ ಬಲಿ

ರಾಯಚೂರು : ರಾಯಚೂರಿನ ತಾಪಮಾನ ಹೆಚ್ಚಳದಿಂದ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ನಡೆದಿದೆ. ಜನರು ಬಿಸಿ ಗಾಳಿಯಿಂದಾಗಿ ತತ್ತರಿಸುತ್ತಿದ್ದು ,… Read More

April 28, 2024

ರಾಜ್ಯದಲ್ಲಿ ಇಂದಿನಿಂದ ನರೇಂದ್ರ ಮೋದಿ ಪ್ರಚಾರ

ಬೆಂಗಳೂರು : ರಾಜ್ಯದಲ್ಲಿ 14 ಕ್ಷೇತ್ರಗಳ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಮುಕ್ತಾಯವಾಗಿದ್ದು , ಮೇ 7ರಂದು ಉತ್ತರ… Read More

April 28, 2024

ಮೈಸೂರು : ಇವಿಎಂ, ವಿವಿ ಪ್ಯಾಟ್ ಗಳಿಗೆ ಬಿಗಿ ಭದ್ರತೆ: ಸ್ಟ್ರಾಂಗ್ ರೂಂ ಪರಿಶೀಲಿಸಿದ ಡಿಸಿ ಡಾ ರಾಜೇಂದ್ರ

ಮೈಸೂರು: ಮೈಸೂರು ಕೊಡುಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ ಸಿಬ್ಬಂದಿ ಇವಿಎಂ,… Read More

April 27, 2024