ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಂಸದ ತೇಜಸ್ವಿ ಸೂರ್ಯ, “ನನ್ನ ಪ್ರೀತಿಯ ಬೆಂಗಳೂರು, ಯುಎಸ್ ಕಾನ್ಸುಲೇಟ್ ಕೊನೆಗೂ ಅಧಿಕೃತವಾಗಿ ಜನವರಿ 17ರಂದು ಕಾರ್ಯಾರಂಭಗೊಳ್ಳುತ್ತಿದೆ” ಎಂದು ವಿಡಿಯೋ ಮೂಲಕ ತಿಳಿಸಿದ್ದಾರೆ.
ಇಷ್ಟು ದೊಡ್ಡ ಸಾಧನೆಗೆ ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಹಾಗೂ ವಿದೇಶಾಂಗ ಸಚಿವ ಡಾ. ಎಸ್ ಜೈಶಂಕರ್ ಅವರ ಮಾರ್ಗದರ್ಶನವೇ ಕಾರಣ ಎಂದು ತಿಳಿಸಿದ ತೇಜಸ್ವಿ ಸೂರ್ಯ, ಅವರಿಗೆ ಧನ್ಯವಾದಗಳನ್ನೂ ಅರ್ಪಿಸಿದ್ದಾರೆ.
ಬೆಂಗಳೂರಿನಲ್ಲಿ ಯುಎಸ್ ಕಾನ್ಸುಲೇಟ್ ಆರಂಭವಾದ ಸಂತೋಷವನ್ನು ತಿಳಿಸಲು, ತೇಜಸ್ವಿ ಸೂರ್ಯ ನವದೆಹಲಿಗೆ ತೆರಳಿ ವಿದೇಶಾಂಗ ಸಚಿವ ಡಾ. ಜೈಶಂಕರ್ ಅವರನ್ನು ಭೇಟಿ ಮಾಡಿ ಮೈಸೂರು ಪಾಕವನ್ನು ನೀಡಿ ಕೃತಜ್ಞತೆ ಸಲ್ಲಿಸಿದ್ದಾರೆ.
My dear Bengaluru,
— Tejasvi Surya (@Tejasvi_Surya) January 15, 2025
It’s official. The US Consulate is opening on January 17th.
It’s been made possible only and only because of PM @narendramodi and EAM @DrSJaishankar’s efforts.
What better way to thank our EAM than with our own Mysuru Pak! pic.twitter.com/uo85y2vsfl
ಈ ಕುರಿತು ಮಾತನಾಡಿದ ಡಾ. ಜೈಶಂಕರ್ ಅವರು, “ಬೆಂಗಳೂರಿಗೆ ನನ್ನ ವಿಶೇಷ ಪ್ರೀತಿ ಇದೆ, ಅಲ್ಲಿನ ಜನರೊಂದಿಗೆ ನನಗೆ ಅನನ್ಯವಾದ ಸಂಬಂಧ ಇದೆ. ಯುಎಸ್ ಕಾನ್ಸುಲೇಟ್ ಕಚೇರಿ ಉದ್ಘಾಟನೆಗೆ ಭಾಗವಹಿಸುವೆನೆಂಬ ಭರವಸೆ ನೀಡಿದ್ದೇನೆ” ಎಂದು ತಿಳಿಸಿದ್ದಾರೆ.
ಮೂಲತಃ ಖಾಸಗಿ ಹೋಟೆಲ್ವೊಂದರಲ್ಲಿ ತಾತ್ಕಾಲಿಕವಾಗಿ ಈ ಕಚೇರಿ ಕಾರ್ಯನಿರ್ವಹಿಸಲಿದೆ. ಇದರಿಂದ ಕರ್ನಾಟಕದ ಜನರು ವೀಸಾ ಸಂದರ್ಶನ ಅಥವಾ ಅನುಮೋದನೆಗಳಿಗಾಗಿ ಬೇರೆ ರಾಜ್ಯಗಳಿಗೆ ತೆರಳಬೇಕಾದ ಅಗತ್ಯವಿಲ್ಲ ಎಂದು ತೇಜಸ್ವಿ ಸೂರ್ಯ ತಿಳಿಸಿದ್ದಾರೆ.ಇದನ್ನು ಓದಿ –ವಿಚಿತ್ರ ಕಾಯಿಲೆಗೆ 15 ಜನರು ಬಲಿಪಡೆದ ಅನುಮಾನಾಸ್ಪದ ಘಟನೆ
ಈ ಕಚೇರಿಯ ಆರಂಭದ ಮೂಲಕ ಕರ್ನಾಟಕದ ಜನರ ಯಾತನೆ ಕಡಿಮೆಯಾಗಲಿದೆ ಮತ್ತು ಇದು ಅಮೆರಿಕಾ-ಭಾರತ ಸಂಬಂಧವನ್ನು ಇನ್ನಷ್ಟು ಬಲಪಡಿಸಲಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು