ಉತ್ತರಾಖಂಡ್ನ ಚಮೋಲಿ ಜಿಲ್ಲೆಯ ಋಷಿಗಂಗಾ ನದಿಯ ವಿದ್ಯುತ್ ಯೋಜನೆ ಅಣೆಕಟ್ಟು ಭಾನುವಾರ ಮುರಿದು ಬಿದ್ದಿದೆ.
ಅಲಕಾನಂದ ನದಿಯ ಹರಿವು ಹೆಚ್ಚಾಗಿದೆ. ದಿಢೀರ್ ಪ್ರವಾಹದಿಂದ 100 ರಿಂದ 150 ಮಂದಿ ಸಾವನ್ನಪ್ಪಿರುವ ಅಥವಾ ಗಾಯಗೊಂಡಿರುವ ಶಂಕೆ ಇದೆ ಎಂದು ಉತ್ತರಾಖಂಡ್ ಮುಖ್ಯಕಾರ್ಯದರ್ಶಿ ಓಂ ಪ್ರಕಾಶ್ ಹೇಳಿದ್ದಾರೆ.
ಹಿಮದ ಬಂಡೆ ಉರುಳಿ ಆಣೆಕಟ್ಟೆ ಮೇಲೆ ಬಿದ್ದಿದೆ:
ತಪೋವನದಲ್ಲಿ ಹಿಮದ ಬಂಡೆಯ ಒಂದು ಭಾಗ ಬೆಟ್ಟದಿಂದ ಮುರಿದು ಅಣೆಕಟ್ಟಿನ ಮೇಲೆ ಬಿದ್ದಿದೆ ಎಂದು ಹೇಳಲಾಗುತ್ತಿದೆ.
ಇದರಿಂದಾಗಿ ಅಣೆಕಟ್ಟಿನ ಒಂದು ಭಾಗಕ್ಕೆ ಹಾನಿಯಾಗಿದೆ. ಪರಿಣಾಮ ಡ್ಯಾಂ ನೀರು ವೇಗವಾಗಿ ಅಲಕಾನಂದ ನದಿಗೆ ಹರಿದು ಹೋಗುತ್ತಿದೆ. ಘಟನೆ ಕುರಿತು ಮಾಹಿತಿ ಪಡೆದ ಜಿಲ್ಲಾಡಳಿತ ಮತ್ತು ಪೊಲೀಸ್ ತಂಡಗಳು ಸ್ಥಳಕ್ಕೆ ಧಾವಿಸಿವೆ.
ಅಲಕಾನಂದ ನದಿ ತೀರದ ಜನರಿಗೆ, ಋಷಿಕೇಶ, ಹರಿದ್ವಾರ ಸೇರಿದಂತೆ ಸುತ್ತಮುತ್ತಲ ಬಯಲು ಪ್ರದೇಶದ ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಎಚ್ಚರಿಕೆ ನೀಡಲಾಗಿದೆ.
ಪ್ರವಾಹದಲ್ಲಿ ಬಿಆರ್ಒ ನಿರ್ಮಿಸುತ್ತಿರುವ ಒಂದು ಸೇತುವೆಗೆ ಹಾನಿಯಾಗಿದೆ. ಋಷಿಗಂಗಾ ಯೋಜನೆಯ ಮೇಲ್ಭಾಗದಲ್ಲಿ ಹಾನಿ ಉಂಟಾಗಿದೆ.
ಚಮೋಲಿ, ಜೋಶಿಮಠ್ ಮತ್ತು ಇತರ ತಗ್ಗುಪ್ರದೇಶಕ್ಕೆ ಹಾನಿ ಉಂಟಾಗಲಿದೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಡಿ.ಜಿ ಎಸ್.ಎನ್ ಪ್ರಧಾನ್ ಹೇಳಿದ್ದಾರೆ.
ಜೋಶಿ ಮಠದಲ್ಲಿ ಈಗಾಗಲೇ ಸ್ಟೇಟ್ ಡಿಸಾಸ್ಟರ್ ರೆಸ್ಪಾನ್ಸ್ ಫೋರ್ಸ್(ಎಸ್ಡಿಆರ್ಎಫ್) ತಂಡಗಳನ್ನು ನಿಯೋಜಿಸಲಾಗಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್ಡಿಆರ್ಎಫ್) ಡೆಹ್ರಾಡೂನ್ನಿಂದ ಜೋಶಿಮಠಕ್ಕೆ ಸ್ಥಳಾಂತರಗೊಂಡಿದೆ. ದೆಹಲಿಯಿಂದ ಡೆಹ್ರಾಡೂನ್ ಹಾಗೂ ಅಲ್ಲಿಂದ ಜೋಶಿಮಠಕ್ಕೆ ಇನ್ನೂ 3-4 ತಂಡಗಳನ್ನ ಏರ್ಲಿಫ್ಟ್ ಮಾಡಲಾಗುತ್ತದೆ ಎಂದು ಪ್ರಧಾನ್ ತಿಳಿಸಿದ್ದಾರೆ.
ಜನರ ಸಮಸ್ಯೆಗಳಿಗಿಂತ ಟಿವಿ ಚಾನಲ್ ಗಳಿಗೆ ಗಂಡ ಹೆಂಡ್ತಿ ಜಗಳಗಳ ಬಗ್ಗೆಯೇ ಹೆಚ್ಚು ಆಸಕ್ತಿ: ಸಿಎಂ ವ್ಯಂಗ್ಯ ಫೇಕ್ ನ್ಯೂಸ್… Read More
ಹಾಸನ: 10 ವರ್ಷದ ಬಾಲಕನೊಬ್ಬ ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನದ ಅಲೂರು ತಾಲೂಕಿನ ಚಿನ್ನಪುರದಲ್ಲಿ ನಡೆದಿದೆ. ಮೃತ ಬಾಲಕ ಸಚಿನ್… Read More
ಮೈಸೂರು: ಶುಕ್ರವಾರ ( 20-09-2024 ) ರಾತ್ರಿ ದಸರಾ ಗಜಪಡೆಯ ಆನೆ ಧನಂಜಯ ಮತ್ತೊಂದು ಆನೆ ಕಂಜನ್ ಮೇಲೆ ಏಕಾಏಕಿ… Read More
ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More
ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
This website uses cookies.
Leave a Comment