Main News

ಕುಂಭದ್ರೋಣ ಮಳೆಯ ಆರ್ಭಟಕ್ಕೆ ಉತ್ತರಾಖಂಡ, ಹಿಮಾಚಲ ಪ್ರದೇಶ ತತ್ತರ

ಉತ್ತರಾಖಂಡ ಹಾಗೂ ಹಿಮಾಚಲ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಅನಾಹುತಗಳು ಸಂಭವಿಸುತ್ತಲೇ ಇವೆ. ಹಿಮಾಚಲ ಪ್ರದೇಶದಲ್ಲಿ ಮಳೆ ಸಂಬಂಧಿತ ಅವಾಂತರಗಳಿಂದ ಈವರೆಗೆ 66 ಮಂದಿ ಸಾವನ್ನಪ್ಪಿದ್ದರೆ, ಉತ್ತರಾಖಂಡದಲ್ಲಿ 6 ಮಂದಿ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.

ಭಾರತೀಯ ಹವಾಮಾನ ಇಲಾಖೆಯು ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಿದ್ದು, ಡೆಹ್ರಾಡೂನ್‌, ಪುರಿ, ತೆಹ್ರಿ, ನೈನಿತಾಲ್‌, ಚಂಪಾವತ್‌ ಮತ್ತು ಉಧಮ್‌ ಸಿಂಗ್‌ ನಗರಗಳು ಸೇರಿದಂತೆ ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದ ಹಲವು ಪ್ರದೇಶಗಳಲ್ಲಿ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಜೋಶಿಮಠ ಬಳಿ ಕಟ್ಟಡ ಕುಸಿತ, ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ಉತ್ತರಾಖಂಡದಲ್ಲಿ ಮಳೆ ರೌದ್ರನರ್ತನಕ್ಕೆ ಚಮೋಲಿ ಜಿಲ್ಲೆಯಲ್ಲಿ ಭೂಕುಸಿತ ಪೀಡಿತ ಪ್ರದೇಶವಾದ ಜೋಶಿಮಠ ಸಮೀಪದ ಹೆಲಾಂಗ್‌ನಲ್ಲಿ ಮಂಗಳವಾರ ತಡರಾತ್ರಿ ಕಟ್ಟಡವೊಂದು ಕುಸಿದುಬಿದ್ದಿದ್ದು, ಅವಶೇಷಗಳ ಅಡಿಯಲ್ಲಿ ಹಲವರು ಸಿಲುಕಿರುವ ಶಂಕೆಗಳು ವ್ಯಕ್ತವಾಗಿವೆ. ಈವರೆಗೂ ಮೂವರನ್ನು ರಕ್ಷಣೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ನ್ಯಾಯಾಧೀಶನೆ ಪತ್ನಿಯ ಮೇಲೆ ಗುಂಡು ಹಾರಿಸಿ ಹತ್ಯೆ

ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. ಮಂಡಿ ಪ್ರದೇಶದಲ್ಲಿ ಅತಿ ಹೆಚ್ಚು ಜನರು ಮೃತಪಟ್ಟಿದ್ದಾರೆ. ಭೂಕುಸಿತದಿಂದ ಹೆದ್ದಾರಿಗಳಲ್ಲಿ ಸಿಲುಕಿರುವ ಪ್ರಯಾಣಿಕರನ್ನು ರಕ್ಷಿಸುವ ಕಾರ್ಯದಲ್ಲಿ ವಿಪತ್ತು ನಿರ್ವಹಣಾ ತಂಡ ತೊಡಗಿದೆ. ಚಂಡೀಗಢ–ಶಿಮ್ಲಾ ನಡುವಿನ ರಾಷ್ಟ್ರೀಯ ಹೆದ್ದಾರಿಗಳು ಸಂಚಾರಕ್ಕೆ ಮುಕ್ತವಾಗಿದ್ದು, ರಾಜ್ಯ ಹೆದ್ದಾರಿಗಳ ತೆರವಿಗೆ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

Team Newsnap
Leave a Comment

Recent Posts

ಪ್ರಜ್ವಲ್ ಪೆಂಡ್ರೈವ್ ಪ್ರಕರಣ : 10 ಪೆನ್ ಡ್ರೈವ್ ಪ್ರೀತಂ ಗೌಡ ಆಪ್ತರ ಮನೆಯಲ್ಲಿ ಪತ್ತೆ

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳು ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರ… Read More

May 16, 2024

ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು; ಮೈಸೂರಿನಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ ಎನ್‌ಐಎ

ಬೆಂಗಳೂರು : ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಿಸಲು ಸಂಚು ರೂಪಿಸಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳ(ಎನ್‌ಐಎ)… Read More

May 15, 2024

ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಯುವತಿಯ ಭೀಕರ ಹತ್ಯೆ

ಹುಬ್ಬಳ್ಳಿ : ಇಂದು ಪಾಗಲ್ ಪ್ರೇಮಿಯೊಬ್ಬ ಪ್ರೀತಿ ನಿರಾಕರಿಸಿದ್ದಕ್ಕೆ ಮನೆಗೆ ನುಗ್ಗಿ ಯುವತಿಗೆ ಚಾಕುವಿನಿಂದ ಮನಬಂದಂತೆ ಇರಿದು ಹತ್ಯೆಗೈದಿರುವ ಘಟನೆ… Read More

May 15, 2024

ಪಾಕ್ ಆಕ್ರಮಿತ ಕಾಶ್ಮೀರ ಭಾರತಕ್ಕೆ ಸೇರಿದ್ದು : ಅಮಿತ್‌ ಶಾ

ನವದೆಹಲಿ : ಕೇಂದ್ರ ಗೃಹ ಸಚಿವ ಅಮಿತ್ ಷಾ ಬುಧವಾರ ಪಾಕ್ ಆಕ್ರಮಿತ ಕಾಶ್ಮೀರ (POK) ಮೇಲೆ ಭಾರತದ ಸಾರ್ವಭೌಮತ್ವವನ್ನು… Read More

May 15, 2024

ಪೆನ್ ಡ್ರೈವ್ ಕೇಸ್: ಹಾಸನದ 18 ಕಡೆಗಳಲ್ಲಿ ಎಸ್ ಐಟಿ ಶೋಧ

ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸೇರಿದ್ದು ಎನ್ನಲಾದ ಅಶ್ಲೀಲ ವಿಡಿಯೋ ಹೊಂದಿದ ಪೆನ್ ಡ್ರೈವ್ ಹಂಚಿಕೆ ಪ್ರಕರಣ ಸಂಬಂಧ… Read More

May 15, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 15 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,750 ರೂಪಾಯಿ ದಾಖಲಾಗಿದೆ. 24… Read More

May 15, 2024