ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಬೆನ್ನಲ್ಲೇಸಂಕ್ರಾಂತಿ, ವೈಕುಂಠ ಏಕಾದಶಿಗೆ ಪ್ರತ್ಯೇಕ ಮಾರ್ಗಸೂಚಿ ಹೊರಡಿಸಲಾಗಿದೆ
ದೇವಾಲಯದ ಒಳಾಂಗಣದಲ್ಲಿ ಮಾತ್ರ ಪೂಜೆಗೆ ಅನುಮತಿ ನೀಡಲಾಗಿದೆ
ಎರಡು ಡೋಸ್ ಲಸಿಕೆ ಪಡೆದವರಿಗೆ ಮಾತ್ರ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ.
ಶೇಕಡ 50 ರಷ್ಟು ಜನರಿಗೆ ಮಾತ್ರ ದೇಗುಲಕ್ಕೆ ಅವಕಾಶ ಇರಲಿದ್ದು, ಎಲ್ಲಾ ರೀತಿಯ ಸೇವೆಗಳಿಗೆ ನಿರ್ಬಂಧ ವಿಧಿಸಲಾಗಿದೆ.
ಹಬ್ಬಗಳ ಆಚರಣೆ ವೇಳೆ ಯಾವುದೇ ರೀತಿಯ ಮೆರವಣಿಗೆ, ಮನರಂಜನೆ ಕಾರ್ಯಕ್ರಮ ಆಯೋಜಿಸದಂತೆ ಸೂಚಿಸಲಾಗಿದೆ.