ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಕೋಟ್ಯಾಂತರ ರೂಪಾಯಿಗಳ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ, ಜಾಮೀನು ರದ್ದು ಮಾಡುವಂತೆ ಇಡಿ (ಎನ್ಫೋರ್ಸ್ಮೆಂಟ್ ಡಿರೆಕ್ಟರೆಟ್) ಹೈಕೋರ್ಟ್ಗೆ ಅರ್ಜಿ ಸಲ್ಲಿಸಿತ್ತು. ಈ ಕುರಿತು ವಿಚಾರಣೆ ನಡೆಸಿದ ಹೈಕೋರ್ಟ್, ಮಾಜಿ ಸಚಿವ ಬಿ. ನಾಗೇಂದ್ರಗೆ ನೋಟಿಸ್ ಜಾರಿ ಮಾಡಿದೆ.
ಈ ಹಿಂದೆ, ಬಿ. ನಾಗೇಂದ್ರ ಅವರಿಗೆ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಅಕ್ರಮ ಸಂಬಂಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ನೀಡಿತ್ತು. ಆದರೆ, ಇಡಿ ಅಧಿಕಾರಿಗಳು ಈ ಜಾಮೀನು ರದ್ದುಪಡಿಸಲು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಇದನ್ನು ಓದಿ – ಕೆರೆ ಅಭಿವೃದ್ಧಿಗೆ 60,000 ರೂ. ಲಂಚ : ಆರ್ಎಫ್ಒ ಲೋಕಾಯುಕ್ತ ಬಲೆಗೆ
ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಮುಂದಿನ ವಿಚಾರಣೆಯನ್ನು ನವೆಂಬರ್ 15ಕ್ಕೆ ನಿಗದಿಪಡಿಸಿದ್ದು, ಬಿ. ನಾಗೇಂದ್ರ ವಿರುದ್ಧದ ಪ್ರಕರಣದಲ್ಲಿ ಮುಂದಿನ ಕ್ರಮ ಕೈಗೊಳ್ಳಲಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು