ವರುಣ ಆಭ೯ಟ : ರಸ್ತೆಗೆ ಉರುಳಿದ ಬೃಹತ್​ ಬಂಡೆ; ತಪ್ಪಿದ ಭಾರೀ ಅನಾಹುತ

Team Newsnap
0 Min Read

ತುಮಕೂರು ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಬಂಡೆಯೊಂದು ರಸ್ತೆಗುರುಳಿದ ಘಟನೆ ಜಿಲ್ಲೆಯ ಮಧುಗಿರಿ ಪಟ್ಟಣದಲ್ಲಿ ನಡೆದಿದೆ.

ಪಟ್ಟಣದ ಮುಖ್ಯರಸ್ತೆಗೆ ಹೊಂದಿಕೊಂಡಿರುವ ಬೆಟ್ಟದಿಂದ ಸತತ ಮಳೆಯಿಂದಾಗಿ ಮಣ್ಣು ಕುಸಿದು ಬೃಹತ್​ ಬಂಡೆ ರಸ್ತೆಗುರುಳಿದೆ.

ನೂರಾರು ಜನರು, ವಾಹನಗಳು ಸಂಚರಿಸುತ್ತಿದ್ದ ವೇಳೆಯೇ ಈ ಘಟನೆ ನಡೆದಿದೆ. ಅದೃಷ್ಟವಶಾತ್​ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಸದ್ಯ ಸ್ಥಳಕ್ಕೆ ಮಧುಗಿರಿ ಎಸಿ ಸೋಮಪ್ಪ ಕಡಕೋಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share This Article
Leave a comment