Main News

ಜೆಡಿಎಸ್ ಪಂಚರತ್ನಕ್ಕೆ ವರುಣ ಅಡ್ಡಿ : ಒಂದು ವಾರ ಬ್ರೇಕ್- ಮಳೆ ಬಿಡುವು ನೀಡಿದ ಮೇಲೆ ಯಾತ್ರೆಗೆ ಚಾಲನೆ

ಪಂಚರತ್ನ ಯಾತ್ರೆ ಮೂಲಕ ರಾಜ್ಯಾದ್ಯಂತ ಸ್ವಂತ ಬಲದಲ್ಲಿ ಅಧಿಕಾರಕ್ಕೆ ಬರಬೇಕು. ತಾವು ಮತ್ತೊಮ್ಮೆ ಸಿಎಂ ಗಾದಿಗೇರಲು ಫಿನಿಕ್ಸ್​ನಂತೆ ಮೇಲೆ ಬರಲು ದಳಪತಿಗಳು ಶತಾಯಗತಾಯವಾಗಿ ಪ್ರಯತ್ನಿಸುತ್ತಿದ್ದಾರೆ. ಈ ಪ್ರಯತ್ನದ ಅಂಗವಾಗಿ ತೆನೆ ಹೊತ್ತ ಮಹಿಳೆಯನ್ನು ರಾಜ್ಯದ ಸಿಂಹಾಸನವೇರುವಂತೆ ಮಾಡುವ ಹಂತದ ಮತ್ತೊಂದು ಹೆಜ್ಜೆಯೇ ಪಂಚರತ್ನ ರಥಯಾತ್ರೆ.

ನಿನ್ನೆ ಪಂಚರತ್ನ ರಥಯಾತ್ರೆಗೆ ಚಾಲನೆ ಕೊಡ್ತಿದ್ದಂತೆ ಇತ್ತ ವರುಣ ಪ್ರವೇಶ ಕೊಟ್ಟ ಪರಿಣಾಮ ರ್ಯಾಲಿಯನ್ನು ಒಂದು ವಾರ ಮುಂದೂಡಲಾಗಿದೆ.

ಈ ಬಗ್ಗೆ ಮುಳಬಾಗಿಲುನಲ್ಲಿ ಮಾತನಾಡಿದ ಹೆಚ್​ಡಿಕೆ, ಉಚಿತ ಚಿಕಿತ್ಸೆ, ಶಿಕ್ಷಣ, ವಸತಿ, ರೈತ ಚೈತನ್ಯ, ಮಹಿಳಾ ಸಬಲೀಕರಣ ಕಾರ್ಯಕ್ರಮ ಮಾಡಲಾಗುತ್ತಿದೆ. ಮಳೆ ಆಗಮಿಸಿದ್ದರಿಂದ ಯಾತ್ರೆ ಮೂಂದೂಡಿದ್ದು ವರುಣನ ಸಿಂಚನ ಮೂಲಕ ಪಂಚರತ್ನಕ್ಕೆ ಶುಭ ಸೂಚನೆ ಸಿಕ್ಕಿದೆ. ಮುಳಬಾಗಿಲಿನಿಂದಲೇ ಮತ್ತೆ ರಥಯಾತ್ರೆಗೆ ಚಾಲನೆ ನೀಡುತ್ತೇವೆ ಅಂತ ಹೇಳಿದ್ದಾರೆ. ಅಪ್ಪುಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ: ಭಾವುಕರಾಗಿ ಸ್ವೀಕರಿಸಿದ ಪುನೀತ್ ಪತ್ನಿ ಅಶ್ವಿನಿ

ಜೆಡಿಎಸ್‌ನ ಪಂಚರತ್ನ ರಥಯಾತ್ರೆಗೆ ಚಾಲನೆ ಜೆಡಿಎಸ್​ನ ಮಹಾತ್ವಾಕಾಂಕ್ಷಿ ಯಾತ್ರೆ ಪಂಚರತ್ನಕ್ಕೆ ನಿನ್ನೆ ದಳಪತಿಗಳು ಚಾಲನೆ ಕೊಟ್ಟಿದ್ದಾರೆ. ಕೋಲಾರ‌ದ ಕುರುಡುಮಲೆಯಿಂದ ರ್ಯಾಲಿ ಕುರುಡುಮಲೆ ಗಣಪತಿ ದೇವಾಲಯದಲ್ಲಿ ರಥಯಾತ್ರೆ ಯಶಸ್ವಿಗಾಗಿ ವಿಶೇಷ ಪೂಜೆ, ಹೋಮ‌-ಹವನ ನೆರವೇರಿಸಿ ಮಾಜಿ ಪ್ರಧಾನಿ ಹೆಚ್​​.ಡಿ ದೇವೇಗೌಡ ವಿದ್ಯುಕ್ತ ಚಾಲನೆ‌ ನೀಡಿದ್ದಾರೆ. ಈ ವೇಳೆ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಸೇರಿದಂತೆ ಜೆಡಿಎಸ್​ನ ಹಲವು ನಾಯಕರು ಭಾಗಿಯಾಗಿದ್ದರು.

Team Newsnap
Leave a Comment
Share
Published by
Team Newsnap

Recent Posts

ಕರ್ತವ್ಯಕ್ಕೆ ತೆರಳುತ್ತಿದ್ದ ಚುನಾವಣಾ ಸಿಬ್ಬಂದಿ ಹೃದಯಾಘಾತದಿಂದ ಸಾವು

ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಎಂಬುವರು… Read More

May 6, 2024

ಪೋಷಕರ ಕಣ್ಣೆದುರೇ ಮಕ್ಕಳು ನೀರುಪಾಲು

ಮಂಗಳೂರು : ಬಂಟ್ವಾಳದ (Bantwal) ನಾವೂರಿನಲ್ಲಿ ಪೋಷಕರ ಎದುರೇ ಇಬ್ಬರು ಮಕ್ಕಳು ನೀರುಪಾಲಾದ ಘಟನೆ ನಡೆದಿದೆ. ಅನ್ಸಾರ್ ಅವರ ಪುತ್ರಿ… Read More

May 6, 2024

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 6, 2024

ಹಾಸನ ಅಶ್ಲೀಲ ವಿಡಿಯೋಗಳನ್ನು ಹಂಚುವುದು ಶಿಕ್ಷಾರ್ಹ ಅಪರಾಧ: ಎಸ್‌ಐಟಿ

ಬೆಂಗಳೂರು : ವಿಶೇಷ ತನಿಖಾ ತಂಡ (SIT) ಮುಖ್ಯಸ್ಥ ಬಿ.ಕೆ.ಸಿಂಗ್ , ಹಾಸನದ ಅಶ್ಲೀಲ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ… Read More

May 6, 2024

ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು

ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More

May 5, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More

May 5, 2024