ಗ್ರಾಹಕರಿಂದ ಕೋಟ್ಯಂತರ ರೂಪಾಯಿ ಹಣ ಪಡೆದು ವಂಚಿಸಿದ ಆರೋಪ ಎದುರಿಸುತ್ತಿರುವ ಬ್ಯಾಂಕ್ನ ವಿರುದ್ಧ ಈಗಾಗಲೇ 70ಕ್ಕೂ ಮಂದಿ ದೂರು ನೀಡಿದ್ದಾರೆ.
10.92 ಕೋಟಿ ರುಗೂ ಅಧಿಕ ಮೊತ್ತದ ಅವ್ಯವಹಾರ ನಡೆದಿದೆ. ದೊಡ್ಡ ಮೊತ್ತದ ಕೇಸ್ ಆದ ಕಾರಣ ಪ್ರಕರಣವನ್ನು ಸಿಐಡಿಗೆ ವಹಿಸಲು ಹನುಮಂತನಗರ ಠಾಣೆ ಪೊಲೀಸರು ಸಿದ್ಧತೆ ಮಾಡುತ್ತಿದ್ದಾರೆ.
ಈಗಾಗಲೇ ಪೊಲೀಸರು ಆರೋಪಿಗಳ ವಿಚಾರಣೆ ನಡೆಸಿದ್ದಾರೆ. ಬ್ಯಾಂಕ್ ಮುಖ್ಯಸ್ಥರು ಹಣ ಹಿಂದಿರುಗಿಸಲು ಕಾಲಾವಕಾಶ ಕೇಳಿದ್ದಾರೆ.