ಹೆಡ್ ಬುಷ್ ಸಿನಿಮಾದಲ್ಲಿ ವೀರಗಾಸೆ ಕುಣಿತಕ್ಕೆ ಅಪಮಾನ ಮಾಡಲಾಗಿದೆ. ಇದರಿಂದ ಹಿಂದೂ ಧರ್ಮಕ್ಕೆ ಅವಮಾನವಾಗಿದೆ ಎಂದು ಆರೋಪಿಸಿ ಭಜರಂಗದಳದ ಕಾರ್ಯಕರ್ತರು ಡಾಲಿ ಧನಂಜಯ್ ಕಟೌಟ್ಗೆ ಚಪ್ಪಲಿ ಹಾರ ಹಾಕಿ, ಕಪ್ಪು ಮಸಿ ಬಳಿದು ಆಕ್ರೋಶ ಹೊರಹಾಕಿದ ಘಟನೆ ತಿಪಟೂರಿನ ಲಕ್ಷ್ಮೀ ಚಿತ್ರಮಂದಿರದ ಆವರಣದಲ್ಲಿ ನಡೆದಿದೆ.
ಡಾಲಿ ಧನಂಜಯ ಕ್ಷಮೆ ಕೇಳಬೇಕು ಹಾಗೂ ಚಿತ್ರದಿಂದ ವಿವಾದಿತ ದೃಶ್ಯಕ್ಕೆ ಕತ್ತರಿ ಹಾಕಬೇಕು ಎಂದು ಪ್ರತಿಭಟನಾಕಾರು ಆಗ್ರಹಿಸಿದ್ದಾರೆ. ಇಲ್ಲದಿದ್ದರೇ ಯಾವ ಚಿತ್ರಮಂದಿರಗಳಲ್ಲೂ ಈ ಚಿತ್ರ ಪ್ರದರ್ಶನ ಮಾಡದಂತೆ ತಡೆಯುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.ರಾಜಧಾನಿ ಬೆಂಗಳೂರಿನಲ್ಲಿ ಪಟಾಕಿ ಸಿಡಿತದಿಂದ 93 ಮಂದಿಗೆ ಗಾಯ
ಡಾಲಿ ಧನಂಜಯ್ ನಟನೆಯ ಹೆಡ್ ಬುಷ್ ಸಿನಿಮಾದಲ್ಲಿ ಕರಗ ಮತ್ತು ವೀರಗಾಸೆಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿ ಸಿನಿಮಾ ಬೈಕಾಟ್ ಕೂಗು ಒಂದೆಡೆ ಕೇಳಿಬಂದಿದ್ದರೆ, ಮತ್ತೊಂದೆಡೆ ಅಭಿಮಾನಿಗಳು ಡಾಲಿ ಧನಂಜಯ್ ಪರವಾಗಿದ್ದೇವೆ ಎಂಬ ಧ್ವನಿ ಎತ್ತಿದ್ದಾರೆ.
ಕನ್ನಡದ ಇತರ ಸ್ಟಾರ್ ನಟ ಜೊತೆಗಿರುವ ಡಾಲಿ ಧನಂಜಯ್ ಫೋಟೋ ಹಾಗೂ ಅವರು ಮಾತನಾಡಿರುವ ವೀಡಿಯೋಗಳ ತುಣುಕು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ, ಹ್ಯಾಷ್ ಟ್ಯಾಗ್ ಟ್ವಿಟ್ಟರ್ನಲ್ಲಿ ಟ್ರೆಂಡ್ ಆಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು