ಬೆಳಗಾವಿ ಅಧಿವೇಶನದಲ್ಲಿ ಅನುಮೋದನೆ
ಈ ಸಂಬಂಧ ಮಸೂದೆ ಈಗಾಗಲೇ ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಮಂಡನೆಗೊಂಡಿದ್ದು, ಅದಕ್ಕೆ ಗ್ರೀನ್ ಸಿಗ್ನಲ್ ದೊರಕಿದೆ. ಡಿಸೆಂಬರ್ನಲ್ಲಿ ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆದ ಅಧಿವೇಶನದಲ್ಲಿ ಈ ವಿಷಯ ಚರ್ಚೆಯಾಗಿ, ಪರಿಷ್ಕೃತ ದರಗಳನ್ನು ಜಾರಿಗೆ ತರಲು ನಿರ್ಧಾರ ಕೈಗೊಳ್ಳಲಾಗಿದೆ.
ಯೆಲ್ಲೋ ಬೋರ್ಡ್ ಚಾಲಕರ ಅಭಿವೃದ್ಧಿಗೆ ಹಣ ಬಳಕೆ
ಸರಕಾರ ಈ ಹೆಚ್ಚುವರಿ ಹಣವನ್ನು ಯೆಲ್ಲೋ ಬೋರ್ಡ್ (ವಾಣಿಜ್ಯ ವಾಹನ) ಚಾಲಕರ ಕಲ್ಯಾಣಕ್ಕೆ ಬಳಸಲಾಗುವುದು ಎಂದು ತಿಳಿಸಿದೆ. ಈ ಹೊಸ ದರಗಳನ್ನು ಅನುಷ್ಠಾನಗೊಳಿಸಲು ಸರಕಾರ ಈಗಾಗಲೇ ಗೆಜೆಟ್ ನೋಟಿಫಿಕೇಷನ್ ಹೊರಡಿಸಿದ್ದು, ಸಾರಿಗೆ ಇಲಾಖೆ ‘ವಾಹನ್ – 4’ ಸಾಫ್ಟ್ವೇರ್ನಲ್ಲಿ ಈ ಪರಿಷ್ಕೃತ ದರಗಳನ್ನು ಅಪ್ಡೇಟ್ ಮಾಡುತ್ತಿದೆ. ಅಂತಿಮ ಆದೇಶ ಹೊರಡಿಸಿದ ಕೂಡಲೇ ರಾಜ್ಯದ ಎಲ್ಲ ಪ್ರಾದೇಶಿಕ ಸಾರಿಗೆ ಕಚೇರಿಗಳು (RTO) ಹೊಸ ದರ ಜಾರಿಗೆ ತರಲಿವೆ.ಇದನ್ನು ಓದಿ –ಮಹಾ ಕುಂಭಮೇಳದಲ್ಲಿ ಭೀಕರ ಕಾಲ್ತುಳಿತ: 17 ಮಂದಿ ಸಾವು, 50ಕ್ಕೂ ಹೆಚ್ಚು ಮಂದಿ ಗಾಯ
ಸರ್ಕಾರದ ನಿರ್ಧಾರದ ವಿರುದ್ಧ ಜನರ ಆಕ್ರೋಶ
ಈ ಹಿಂದೆ KSRTC ಬಸ್ ಟಿಕೆಟ್ ದರವನ್ನು 15% ಹೆಚ್ಚಿಸಿ ಸಾರ್ವಜನಿಕ ಆಕ್ರೋಶ ಎದುರಿಸಿದ್ದ ರಾಜ್ಯ ಸರ್ಕಾರ, ಇದೀಗ ಹೊಸ ವಾಹನ ಖರೀದಿಗೆ ಹೆಚ್ಚುವರಿ ನೋಂದಣಿ ಶುಲ್ಕ ವಿಧಿಸಿ ಮತ್ತಷ್ಟು ವಿರೋಧಕ್ಕೆ ಕಾರಣವಾಗಿದೆ. ಸರ್ಕಾರ ಚಾಲಕರ ಅಭಿವೃದ್ಧಿ ಹೆಸರಿನಲ್ಲಿ ಹೊಸ ವಾಹನ ಖರೀದಿದಾರರಿಂದ ಹೆಚ್ಚುವರಿ ಹಣ ವಸೂಲಿ ಮಾಡುತ್ತಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು