ಹಿರಿಯ ನಟಿ ವಿನಯಪ್ರಸಾದ್ ಮನೆಯ ಬಾಗಿಲು ಮುರಿದು ಖದೀಮರು ಮನೆಯಲ್ಲಿದ್ದ ನಗದು ಹಾಗೂ ಬೆಲೆಬಾಳುವ ವಸ್ತುಗಳನ್ನು ದೋಚಿಕೊಂಡು ಹೋಗಿದ್ದಾರೆ.ಅಪ್ಪು ಸ್ಮರಣೆಯಲ್ಲಿ ಪಾಲ್ಗೊಂಡಿದ್ದ ಮಂಡ್ಯದ ಯುವಕ ಆತ್ಮಹತ್ಯೆಗೆ ಶರಣು
ದೀಪಾವಳಿ ಹಬ್ಬಕ್ಕೆ ಕುಟುಂಬ ಸಮೇತರಾಗಿ ಹಿರಿಯ ನಟಿ ವಿನಯ ಪ್ರಸಾದ್ ಅವರು, ತಮ್ಮ ಹುಟ್ಟೂರು ಉಡುಪಿಗೆ ಹೋಗಿದ್ದರು. ಊರಿಗೆ ಹೋಗಿರುವುದನ್ನು ಗಮನಿಸಿದ ಕಳ್ಳರು ದೀಪಾವಳಿ ಹಬ್ಬದ ದಿನ ಮನೆ ಬೀಗ ಮುರಿದು 7 ಸಾವಿರ ರೂಪಾಯಿ ನಗದು ದೋಚಿಕೊಂಡು ಹೋಗಿದ್ದಾರೆ.
ವಿನಯ ಪ್ರಸಾದ್ ಕುಟುಂಬ ಹಬ್ಬ ಮುಗಿಸಿ ನಂದಿನಿ ಲೇಔಟ್ನಲ್ಲಿರುವ ತಮ್ಮ ಮನೆಗೆ ಬಂದಾಗ ಕಳ್ಳತನ ಆಗಿರುವ ವಿಚಾರ ಬೆಳಕಿಗೆ ಬಂದಿದೆ. ಕಳ್ಳತನ ಸಂಬಂಧ ಸದ್ಯ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ, ಕಳ್ಳರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.
ದೀಪಾವಳಿ ಹಬ್ಬದ ದಿನವೇ ಉತ್ತರ ವಿಭಾಗದ ನಾಲ್ಕೈದು ಠಾಣಾ ವ್ಯಾಪ್ತಿಯಲ್ಲಿ ಖದೀಮರು ಕಳ್ಳತನ ಮಾಡಿದ್ದಾರೆ. ಜೆಸಿ ನಗರ, ಮಲ್ಲೇಶ್ವರಂ, ಸುಬ್ರಹ್ಮಣ್ಯನಗರ, ರಾಜಗೋಪಾಲನಗರ ಠಾಣಾ ವ್ಯಾಪ್ತಿಯಲ್ಲಿ ಖದೀಮರು ತಮ್ಮ ಕರಾಮತ್ತನ್ನು ತೋರಿಸಿದ್ದಾರೆ.
ಕಳ್ಳರು ಮನೆ ಮಾಲೀಕರು ಮನೆಯಲ್ಲಿ ಇಲ್ಲದೇ ಇರುವುದು ಮತ್ತು ದೀಪಾವಳಿ ಹಬ್ಬದಲ್ಲಿ ದೊಡ್ಡ ಮಟ್ಟದ ಪಟಾಕಿ ಹೊಡೆಯುವುದನ್ನೇ ಕಳ್ಳರು ಬಂಡವಾಳವಾನ್ನಾಗಿ ಮಾಡಿಕೊಂಡಿದ್ದಾರೆ. ಪಟಾಕಿ ಸದ್ದಿನ ನಡುವೆ ಮನೆಗಳ ಬೀಗ ಮುರಿಯುವ ಶಬ್ಧ ಆಚೇ ಬರದ ರೀತಿಯಲ್ಲಿ ನೋಡಿಕೊಂಡು ಕಳ್ಳತನ ಮಾಡಿಕೊಂಡು ಹೋಗಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು