ಪ್ರಾಣಿ ಪರೀಕ್ಷಿಸಲು ಕರೆಸಿದ್ದ ಪಶುವೈದ್ಯನನ್ನು ಅಪಹರಿಸಿ ಬಲವಂತವಾಗಿ ಮದುವೆ ಮಾಡಿಸಿದ ಘಟನೆ ಬಿಹಾರದ ಬೇಗುಸರಾಯ್ನಲ್ಲಿ ನಡೆದಿದೆ.
ಸಂತ್ರಸ್ತನ ತಂದೆ ಈ ಕುರಿತು ಮಾತನಾಡಿದ್ದು, ನನ್ನ ಮಗನನ್ನು 12 ಗಂಟೆ ರಾತ್ರಿಗೆ ಪ್ರಾಣಿಯೊಂದಕ್ಕೆ ಆರೋಗ್ಯ ಸರಿಯಿಲ್ಲ ಎಂದು ಕರೆಸಿಕೊಂಡಿದ್ದರು. ಈ ವೇಳೆ ಮೂವರು ಬಂದು ನನ್ನ ಮಗನನ್ನು ಅಪಹರಿಸಿಕೊಂಡು ಹೋಗಿದ್ದಾರೆ. ವಿಷಯ ತಿಳಿದು ನಮಗೆ ಗಾಬರಿಯಾಯಿತು. ಅದಕ್ಕೆ ನಾನು ಪೊಲೀಸರಿಗೆ ದೂರು ಕೊಟ್ಟಿದ್ದೇವೆ ಎಂದು ಹೇಳಿದರು. ಇದನ್ನು ಓದಿ –ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿದ ನೂತನ ಲೋಕಾಯುಕ್ತ ಬಿ.ಎಸ್. ಪಾಟೀಲ್
ಬೇಗುಸರಾಯ್ SP ಯೋಗೇಂದ್ರ ಕುಮಾರ್ ಈ ಕುರಿತು ಮಾತನಾಡಿದ್ದು, ಸಂತ್ರಸ್ತನ ತಂದೆ ಅವರೇ ದೂರನ್ನು ಬರೆದು ಪೊಲೀಸ್ ಠಾಣೆಗೆ ಕೊಟ್ಟಿದ್ದಾರೆ. ಈ ಬಗ್ಗೆ ತನಿಖೆ ನಡೆಸುವಂತೆ ನಾವು ಎಸ್ಎಚ್ಒ ಮತ್ತು ಇತರ ಅಧಿಕಾರಿಗಳನ್ನು ಕೇಳಿದ್ದೇವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಇದೊಂದು ಪದ್ಧತಿ ವರನ ಅಪಹರಣ ಅಥವಾ ‘ಪಕದ್ವಾ ವಿವಾಹ’ ಎಂಬುದು ಬಿಹಾರದಲ್ಲಿ ನಡೆಯುವ ಪದ್ಧತಿಯಾಗಿದೆ. ಜಾರ್ಖಂಡ್ ಮತ್ತು ಉತ್ತರ ಪ್ರದೇಶದ ಭಾಗಗಳಲ್ಲಿ ಇದು ಸಾಮಾನ್ಯವಾಗಿದೆ. ಈ ಪದ್ಧತಿಯಲ್ಲಿ ಬ್ರಹ್ಮಚಾರಿಗಳನ್ನು ಅಪಹರಿಸಿ ಬಲವಂತವಾಗಿ ಮದುವೆ ಮಾಡಿಸುತ್ತಾರೆ. ಆರ್ಥಿಕ ಮತ್ತು ಸಾಮಾಜಿಕ ಭದ್ರತೆಯನ್ನು ಹೊಂದಿರುವವರನ್ನು ವಧುವಿನ ಕುಟುಂಬ ಅಪಹರಿಸಿ ಮದುವೆ ಮಾಡಿಸುತ್ತಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ