ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಕಾರ್ಯಕರ್ತರ ಹತ್ಯೆ ಪ್ರಕರಣಗಳು ತೀವ್ರ ಸ್ವರೂಪ ಪಡೆದುಕೊಂಡಿವೆ
ಕಳೆದ ರಾತ್ರಿ ನಡೆದ ಹಿಂಸಾಚಾರದಲ್ಲಿ 10 ಮಂದಿ ಸಜೀವ ದಹನಗೊಂಡ ಘಟನೆ ವರದಿಯಾಗಿದೆ.
ಬಿರ್ಭುಮ್ ಜಿಲ್ಲೆಯ ರಾಂಪುರ ಹತ್ನ ಬಾಗುತಿ ಗ್ರಾಮದ ಪಂಚಾಯತ್ ಉಪಾಧ್ಯಕ್ಷ ಭದು ಶೇಖ್ ಹತ್ಯೆ ಬಳಿಕ ಹಿಂಸಾಚಾರ ಮತ್ತಷ್ಟು ಭುಗಿಲೆದ್ದಿದೆ. ಭದು ಶೇಖ್, ಟಿಎಂಸಿ ಕಾ ರ್ಯಕರ್ತನಾಗಿದ್ದ ಎಂದು ತಿಳಿದುಬಂದಿದೆ.
ಕಳೆದ ರಾತ್ರಿ ಭದು ಅಭಿಮಾನಿಗಳು ಸುಮಾರು 10 ರಿಂದ 12 ಮನೆಗಳಿಗೆ ಬೆಂಕಿಯಿಟ್ಟು ಪೈಶಾಚಿಕ ಕೃತ್ಯ ಮೆರೆದಿದ್ದಾರೆ. ಪರಿಣಾಮ 10 ಮಂದಿ ಬೆಂಕಿಗೆ ಆಹುತಿಯಾಗಿದ್ದಾರೆ.
ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಜನ ಉದ್ರಿಕ್ತರ ಗುಂಪು ಸುಮಾರು 1 ಡಜನ್ ಮನೆಗಳಿಗೆ ಬೆಂಕಿಯಿಟ್ಟಿದೆ. ಈ ಬಗ್ಗೆ ಯಾರೋ ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಅವರು, ಬೆಂಕಿಯನ್ನು ನಂದಿಸಿದ್ದಾರೆ. ಆಘಾತಕಾರಿ ವಿಷಯ ಏನಂದರೆ ಒಂದೇ ಮನೆಯಲ್ಲಿ 7 ಮಂದಿಯ ಮೃತದೇಹ ಪತ್ತೆಯಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಒಟ್ಟು 11 ಜನರನ್ನು ಬಂಧಿಸಿ ವಿಚಾರಣೆ ಆರಂಭಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ