ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಕಾರ್ಯಕರ್ತರ ಹತ್ಯೆ ಪ್ರಕರಣಗಳು ತೀವ್ರ ಸ್ವರೂಪ ಪಡೆದುಕೊಂಡಿವೆ
ಕಳೆದ ರಾತ್ರಿ ನಡೆದ ಹಿಂಸಾಚಾರದಲ್ಲಿ 10 ಮಂದಿ ಸಜೀವ ದಹನಗೊಂಡ ಘಟನೆ ವರದಿಯಾಗಿದೆ.
ಬಿರ್ಭುಮ್ ಜಿಲ್ಲೆಯ ರಾಂಪುರ ಹತ್ನ ಬಾಗುತಿ ಗ್ರಾಮದ ಪಂಚಾಯತ್ ಉಪಾಧ್ಯಕ್ಷ ಭದು ಶೇಖ್ ಹತ್ಯೆ ಬಳಿಕ ಹಿಂಸಾಚಾರ ಮತ್ತಷ್ಟು ಭುಗಿಲೆದ್ದಿದೆ. ಭದು ಶೇಖ್, ಟಿಎಂಸಿ ಕಾ ರ್ಯಕರ್ತನಾಗಿದ್ದ ಎಂದು ತಿಳಿದುಬಂದಿದೆ.
ಕಳೆದ ರಾತ್ರಿ ಭದು ಅಭಿಮಾನಿಗಳು ಸುಮಾರು 10 ರಿಂದ 12 ಮನೆಗಳಿಗೆ ಬೆಂಕಿಯಿಟ್ಟು ಪೈಶಾಚಿಕ ಕೃತ್ಯ ಮೆರೆದಿದ್ದಾರೆ. ಪರಿಣಾಮ 10 ಮಂದಿ ಬೆಂಕಿಗೆ ಆಹುತಿಯಾಗಿದ್ದಾರೆ.
ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಜನ ಉದ್ರಿಕ್ತರ ಗುಂಪು ಸುಮಾರು 1 ಡಜನ್ ಮನೆಗಳಿಗೆ ಬೆಂಕಿಯಿಟ್ಟಿದೆ. ಈ ಬಗ್ಗೆ ಯಾರೋ ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಅವರು, ಬೆಂಕಿಯನ್ನು ನಂದಿಸಿದ್ದಾರೆ. ಆಘಾತಕಾರಿ ವಿಷಯ ಏನಂದರೆ ಒಂದೇ ಮನೆಯಲ್ಲಿ 7 ಮಂದಿಯ ಮೃತದೇಹ ಪತ್ತೆಯಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಒಟ್ಟು 11 ಜನರನ್ನು ಬಂಧಿಸಿ ವಿಚಾರಣೆ ಆರಂಭಿಸಿದ್ದಾರೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ