Trending

ಸರ್ವಾಧಿಕಾರಿ ಆಡಳಿತವೇ ಶ್ರೇಷ್ಠ ವಿಜಯ್ ದೇವರಕೊಂಡ

ದೇಶದ ಎಲ್ಲ ನಾಗರಿಕರಿಗೂ ಮತದಾನದ ಹಕ್ಕನ್ನು ನೀಡಲೇಬಾರದು. ಸರ್ವಾಧಿಕಾರಿ ಆಡಳಿತವೇ ಶ್ರೇಷ್ಠ ಎಂದು ತೆಲುಗಿನ ನಟ ವಿಜಯ್‌ ದೇವರಕೊಂಡ ಹೇಳಿದ್ದಾರೆ.

ಸಂದರ್ಶನವೊಂದರಲ್ಲಿ ಈ ಹೇಳಿಕೆ ನೀಡಿರುವ ಅವರು, ನಾನೇನಾದರೂ ರಾಜಕೀಯ ಪ್ರವೇಶಿಸಿದರೆ ಸರ್ವಾಧಿಕಾರಿಯಾಗಲು ಬಯಸುತ್ತೇನೆ. 300 ಮಂದಿ ಒಂದು ವಿಮಾನದಲ್ಲಿ ತೆರಳಲು ಬಯಸುತ್ತಾರೆ ಎಂದಿಟ್ಟುಕೊಳ್ಳಿ. ಪೈಲಟ್‌ ಯಾರಾಗಬೇಕು ಎಂದು ಎಲ್ಲ 300 ಮಂದಿ ಸೇರಿ ನಿರ್ಧರಿಸುತ್ತಾರಾ? ಇಲ್ಲವಲ್ಲ. ವಿಮಾನ ಓಡಿಸಲು ಯಾರು ಅರ್ಹರು ಎಂಬುದನ್ನು ಒಂದು ಸಮರ್ಪಕ ಸಂಸ್ಥೆ ನಿರ್ಧರಿಸುತ್ತದೆ.

ಅದೇ ರೀತಿ ದೇಶವನ್ನು ನಡೆಸಬೇಕಾದವರು ಯಾರು ಎಂಬುದನ್ನು ಇಡೀ ದೇಶವೇ ನಿರ್ಧರಿಸಬೇಕಾಗಿಲ್ಲ. ಪ್ರತಿಯೊಬ್ಬರಿಗೂ ಮತದಾನದ ಹಕ್ಕನ್ನು ನೀಡುವುದು ನನಗೆ ಸಮಂಜಸ ಎನಿಸುವುದಿಲ್ಲ ಎಂದು ಹೇಳಿದ್ದಾರೆ.

ತುಂಬಾ ಜನರು ಹಣ ಮತ್ತು ಹೆಂಡಕ್ಕಾಗಿ ತಮ್ಮ ಮತದಾನದ ಹಕ್ಕನ್ನು ಮಾರಿಕೊಳ್ಳುತ್ತಾರೆ. ಅವರು ಯಾವ ಕಾರಣಕ್ಕಾಗಿ ಮತದಾನದಲ್ಲಿ ಭಾಗಿಯಾಗುತ್ತಾರೆ ಎನ್ನುವ ಪರಿಕಲ್ಪನೆಯೂ ಅವರಿಗೆ ಇರುವುದಿಲ್ಲ. ಅಂತವರಿಗೆ ಮತದಾನ ಮಾಡಲು ಅವಕಾಶ ನೀಡಬಾರದು ಎಂದು ವಿಜಯ್ ಹೇಳಿದ್ದಾರೆ.

Team Newsnap
Leave a Comment
Share
Published by
Team Newsnap

Recent Posts

ಪ್ರಜ್ವಲ್ ಪ್ರಕರಣ : ಸಿಬಿಐಗೆ ವಹಿಸಲ್ಲ – ಸಿಎಂ ಸಿದ್ದು

ನಮ್ಮ ಪೋಲಿಸರು ಸಮರ್ಥರಿದ್ದಾರೆ ⁠ಬಿಜೆಪಿಯವರು ಯಾವತ್ತಾದರೂ ಸಿಬಿಐ ತನಿಖೆ ಕೊಟ್ಟಿದ್ದಾರಾ ? ಬೆಂಗಳೂರು : ಪ್ರಜ್ವಲ್‌ ರೇವಣ್ಣ ಪ್ರಕರಣವನ್ನು ಸಿಬಿಐಗೆ… Read More

May 10, 2024

ಕೊಡಗು: ಬಾಲಕಿಯನ್ನು ಭೀಕರ ಹತ್ಯೆಗೈದ ಆರೋಪಿ ಆತ್ಮಹತ್ಯೆ

ಮಡಿಕೇರಿ : ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿಯಲ್ಲಿ ಎಸ್​ಎಸ್​ಎಲ್​ಸಿ ಬಾಲಕಿಯನ್ನು ಭೀಕರವಾಗಿ ಹತ್ಯೆ ಮಾಡಿ ತಲೆ ಕೊಂಡೊಯ್ದಿದ್ದ ಪ್ರಕರಣಕ್ಕೆ… Read More

May 10, 2024

ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ

ಮುಂಬೈ: ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ರಾಮಮಂದಿರವನ್ನು ಶುದ್ಧೀಕರಿಸುತ್ತೇವೆ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ… Read More

May 10, 2024

ಕ್ರೇಜಿವಾಲ್ ಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದ ಸುಪ್ರೀಂ

ನವದೆಹಲಿ : ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜೂನ್ 1 ರ ವರೆಗೂ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು… Read More

May 10, 2024

ಪ್ರಜ್ವಲ್ ವಿರುದ್ಧ ಮೂರನೇ ಎಫ್ ಐ ಆರ್ ದಾಖಲಿಸಲು ಎಸ್ ಐಟಿ ಸಿದ್ದತೆ

ಬೆಂಗಳೂರು:ಪೆನ್‍ಡ್ರೈವ್ ಪ್ರಕರಣ ಎದುರಿಸುತ್ತಿರುವ ಸಂಸದ ಪ್ರಜ್ವಲ್ ರೇವಣ್ಣಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು… Read More

May 10, 2024

ವಿಚಾರವಾದಿ ದಾಭೋಲ್ಕರ್ ಹತ್ಯೆಗೈದ ಇಬ್ಬರಿಗೆ ಜೀವಾವಧಿ ಶಿಕ್ಷೆ

ಪುಣೆ : ವಿಚಾರವಾದಿ ಡಾ. ನರೇಂದ್ರ ದಾಭೋಲ್ಕರ್ ಅವರನ್ನು ಹತ್ಯೆಗೈದಿದ್ದ ಇಬ್ಬರಿಗೆ ಪುಣೆಯ ವಿಶೇಷ ಯುಎಪಿಎ ನ್ಯಾಯಾಲಯ ಜೀವಾವಧಿ ಶಿಕ್ಷೆ… Read More

May 10, 2024