ಕಾಂಗ್ರೆಸ್ ಮುಖಂಡ ವಿನಯ್ ಕುಲಕರ್ಣಿ ಸಹೋದರ ವಿಜಯ್ ಕುಲಕರ್ಣಿ ಪ್ರಯಾಣಿಸುತ್ತಿದ್ದ ಕಾರ್ ರಸ್ತೆ ಪಕ್ಕ ನಿಂತವರ ಮೇಲೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿ, ಆರು ಜನರು ಗಾಯಗೊಂಡ ಘಟನೆ ಧಾರವಾಡದಲ್ಲಿ ಸೋಮವಾರ ಜರುಗಿದೆ.
ಕಾರ್ ಹರಿದ ಪರಿಣಾಮ ರಸ್ತೆ ಪಕ್ಕ ನಿಲ್ಲಿಸಲಾಗಿದ್ದ ಐದಾರು ಬೈಕ್ಗಳು ಸಹ ಜಖಂಗೊಂಡಿವೆ.
ಈ ಘಟನೆಯಲ್ಲಿ ಶೇಖರ ಮತ್ತು ಚರಣ ಸಾವನ್ನಪ್ಪಿದ್ದಾರೆ.
ಧಾರವಾಡದ ಕೆವಿಜಿ ಬ್ಯಾಂಕ್ ಎದುರು ಅಪಘಾತದ ನಂತರ ಸ್ಥಳದಿಂದ ವಿಜಯ್ ಕುಲಕರ್ಣಿ ಕಾಲ್ಕಿತ್ತಿದ್ದಾರೆ ಎನ್ನಲಾಗಿದೆ.
ಬೆಳಗಾವಿಯಿಂದ ಧಾರವಾಡಕ್ಕೆ ವಿಜಯ್ ಕುಲಕರ್ಣಿ ಪ್ರಯಾಣಿಸುವ ವೇಳೆ ಘಟನೆ ನಡೆದಿದೆ ಎನ್ನಲಾಗಿದೆ. ಗಾಯಗೊಂಡ ಆರು ಜನರಿಗೆ ಸಿವಿಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ