ಬ್ಯಾಂಕ್ಗಳಿಂದ ಸಾವಿರಾರು ಕೋಟಿ ಸಾಲ ಪಡೆದು ವಂಚಿಸಿ ಲಂಡನ್ನಲ್ಲಿ ತಲೆಮರೆಸಿಕೊಂಡಿರುವ ಉದ್ಯಮಿಗಳಾದ ವಿಜಯ್ ಮಲ್ಯ ಹಾಗೂ ನೀರವ್ ಮೋದಿಯನ್ನು ಭಾರತಕ್ಕೆ ಹಸ್ತಾಂತರಿಸಲು ಯಾವುದೇ ತೊಡಕು ಇಲ್ಲ ಎಂದು ಬ್ರಿಟಿಷ್ ಪ್ರಧಾನಿ ಬೋರಿಸ್ ಜಾನ್ಸನ್ ಹೇಳಿದರು.
ಭಾರತದಲ್ಲಿ ಎರಡು ದಿನ ಪ್ರವಾಸ ಕೈಗೊಂಡಿರುವ ಬೋರಿಸ್ ಜಾನ್ಸನ್, ವಿಜಯ್ ಮಲ್ಯ, ನೀರವ್ ಮೋದಿಯನ್ನು ವಿಚಾರಣೆಗಾಗಿ ಭಾರತಕ್ಕೆ ವಾಪಸ್ ಹಸ್ತಾಂತರಿಸಲು ನಾವು ಬಯಸುತ್ತೇವೆ ಎಂದರು.
ಯುಕೆ ಸರ್ಕಾರವು ಅವರನ್ನು ಹಸ್ತಾಂತರಿಸಲು ಆದೇಶಿಸಿದೆ. ಅವರನ್ನು ವಿಚಾರಣೆಗಾಗಿ ಭಾರತಕ್ಕೆ ಹಿಂತಿರುಗಿಸಲು ನಾವು ಬಯಸುತ್ತೇವೆ ಎಂದು ಹೇಳಿದ್ದಾರೆ.
ವಿಜಯ್ ಮಲ್ಯ ಮತ್ತು ನೀರವ್ ಮೋದಿ ಬ್ಯಾಂಕ್ಗಳಿಂದ 9 ಸಾವಿರ ಕೋಟಿ ರೂ. ಸಾಲ ಪಡೆದು ವಂಚಿಸಿ ವಿದೇಶಕ್ಕೆ ಪರಾರಿಯಾಗಿದ್ದಾರೆ.
ಆವರಿಬ್ಬರ ನಡೆಯನ್ನು ನಾವು ಸ್ವಾಗತಿಸುವುದಿಲ್ಲ. ನಾನು ಈಗ ಅದನ್ನು ಸಂಪೂರ್ಣವಾಗಿ ಸ್ಪಷ್ಟಪಡಿಸಲು ಬಯಸುತ್ತೇನೆ. ಭಾರತದಲ್ಲಿ ಕಾನೂನಿನಿಂದ ತಪ್ಪಿಸಿಕೊಳ್ಳಲು ನಮ್ಮ ಕಾನೂನು ವ್ಯವಸ್ಥೆಯನ್ನು ಬಳಸಿಕೊಳ್ಳುತ್ತಾರೆ ಈ ಜನರು ಎಂದು ಮಲ್ಯ, ನೀರವ್ ಮೋದಿ ವಿರುದ್ಧ ಹರಿಹಾಯ್ದಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಂಪಿಯನ್ಸ್ ಟ್ರೋಫಿ: ಕಾಂಗರೂಗಳನ್ನು ಮಣಿಸಿ ಫೈನಲ್ಗೆ ಲಗ್ಗೆ ಇಟ್ಟ ಭಾರತ
ಜೆಟ್ ವಿಮಾನ ಪತನ: 6 ಮಂದಿ ಸಾವು, ಹಲವಾರು ಮನೆಗಳಿಗೆ ಬೆಂಕಿ
ಆಫ್ರಿಕಾ ಮೂಲದ ಡ್ರಗ್ ಪೆಡ್ಲರ್ ಬಂಧನ: 48 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ