ಹೊಸ ಜಿಲ್ಲೆ ವಿಜಯನಗರಕ್ಕೆ ನೂತನ ಜಿಲ್ಲಾಧಿಕಾರಿಯಾಗಿ ಟಿ.ವೆಂಕಟೇಶ್ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ವಿಜಯನಗರಕ್ಕೆ ಮೊದಲ ಜಿಲ್ಲಾಧಿಕಾರಿಯಾಗಿ ವಿಶೇಷಾಧಿಕಾರಿಯಾಗಿ ಅನಿರುದ್ಧ ನೇಮಕವಾಗಿದ್ದರು. ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕ ವೆಂಕಟೇಶ್ ರನ್ನು ನೂತನ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿದೆ.
ವಿಜಯನಗರದ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಯಾಗಿದ್ದ ಡಾ ಅರುಣ್ ಕೆ ಅವರನ್ನು ಸರ್ಕಾರ ವರ್ಗಾವಣೆ ಮಾಡಿದ್ದು, ಅವರ ಜಾಗಕ್ಕೆ ಶ್ರೀ ಹರಿ ಬಾಬು ಅವರನ್ನು ನೇಮಿಸಿ ಆದೇಶಿಸಿದೆ