Main News

ನನಸಾಗದೇ ಉಳಿದ ವಿಜಯನಗರ ಜಿಲ್ಲೆ ಕನಸು

ವಿಜಯನಗರ ಜಿಲ್ಲೆ ಘೋಷಣೆ ಹಾಗೂ ಆನಂದ್ ಸಿಂಗ್ ಅವರನ್ನು ಮಂತ್ರಿ ಮಾಡುವ ಭರವಸೆ ನೀಡಿದ್ದ ಬಿಜೆಪಿ ಒಂದನ್ನು ಮಾತ್ರ ಈಡೇರಿಸಿದೆ. ಸಾರ್ವಜನಿಕರ ಬಹುದಿನದ ಕನಸನ್ನು ಇದುವರೆಗೂ ಭಗ್ನಗೊಳಿಸಿಕೊಂಡೇ ಬಂದಿದೆ.

ವಿಜಯನಗರ ಜಿಲ್ಲೆ ಮಾಡುವ ಭರವಸೆ
ನೀಡಿಕೊಂಡೇ ಶಾಸಕರಾಗಿ ಆಯ್ಕೆಯಾದ ಆನಂದ್ ಸಿಂಗ್ ಈಗ ಮೌನಕ್ಕೆ ಶರಣಾಗಿದ್ದಾರೆ.

ಸುದ್ದಿಗಷ್ಟೇ ಮೀಸಲಾದ ಪ್ರಚಾರ

ಹೊಸ ಪೇಟೆ, ಕಂಪ್ಲಿ, ಹಗರಿ, ಬೊಮ್ಮನ ಹಳ್ಳಿ, ಕೊಟ್ಟೂರು, ಹಡಗಲಿ, ಹರಪನ ಹಳ್ಳಿ, ತಾಲೂಕುಗಳನ್ನು ಸೇರಿಸಿ ರಾಜ್ಯ ಸರ್ಕಾರ ನವೆಂಬರ್ 1 ಕನ್ನಡ ರಾಜ್ಯೋತ್ಸವದ ದಿನ ಕರ್ನಾಟಕದ 31 ನೇ ಜಿಲ್ಲೆಯಾಗಿ ವಿಜಯ ನಗರವನ್ನು ಅಧಿಕೃತವಾಗಿ ಘೋಷಣೆ ಮಾಡುತ್ತದೆ ಎಂಬ ಸುದ್ದಿ ಹರಿದಾಡುತ್ತಿತ್ತು. ಸಾಕಷ್ಟು ಪ್ರಚಾರವೂ ಆಯ್ತು.

ಸಚಿವ ಸಂಪುಟದ ಮುಂದೆ ವಿಜಯನಗರ ಕ್ಷೇತ್ರ ಮಾಡಲು ಅನುಮೋದನೆ ಇಡಲಾಗಿತ್ತು. ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ರವರು ನವಂಬರ್1 ಕನ್ನಡ ರಾಜ್ಯೋತ್ಸವದ ದಿನ ಬಳ್ಳಾರಿ ಜಿಲ್ಲೆಯನ್ನು ಬೇರ್ಪಡಿಸಿ ನೂತನ ವಿಜಯನಗರ ಜಿಲ್ಲೆಯಾಗಿ ಮಾಡಿ ಪ್ರಕಟಣೆ ಮಾಡಬಹುದು ಎಂದು ಜನ ಕಾತುರದಿಂದ ಕಾಯುತ್ತಿದ್ದರು. ಆದರೆ ಅದು ಹುಸಿಯಾಗಿದೆ.

ಆನಂದ್ ಸಿಂಗ್ ರವರು ವಿಜಯನಗರ ಕ್ಷೇತ್ರದ ಜನರಿಗೆ ಚುನಾವಣಾ ಸಮಯದಲ್ಲಿ ಪ್ರಥಮ ಆದ್ಯತೆಯಾಗಿ ಆಶ್ವಾಸನೆ ನೀಡಿದ ನೂತನ ವಿಜಯನಗರ ಜಿಲ್ಲೆ ಮಾಡುವ ಕನಸು ನನಸಾಗಲು ಕ್ಷೇತ್ರದ ಜನ ಇನ್ನೂ ಕಾಯಬೇಕಾಗಿದೆ.

ವಿಜಯನಗರ ಜಿಲ್ಲಾ ಹೋರಾಟ ಸಮಿತಿ ,ಕನ್ನಡಪರ ಸಂಘ ಸಂಸ್ಥೆಗಳು ,ರೈತ ಸಮಿತಿ ಮತ್ತು ಸಚಿವರ ವಿಜಯನಗರ ನೂತನ ಜಿಲ್ಲೆಯ ಕನಸು ನನಸಾಗುತ್ತದೆಯೋ ಅಥವಾ ಕನಸಾಗಿಯೇ ಮನಸ್ಸಿನಲ್ಲಿ ಉಳಿಯುತ್ತದೆಯೋ ಎಂದು ಮುಂದಿನ ದಿನಗಳಲ್ಲಿ ಕಾದು ನೋಡಬೇಕಾಗಿದೆ.

ಮಾಹಿತಿ : ಮುರಳೀಧರ ನಾಡಿಗೇರ್ ಹೊಸಪೇಟೆ
Team Newsnap
Leave a Comment
Share
Published by
Team Newsnap

Recent Posts

SIT ಯಿಂದ ಸಂಸದ ಪ್ರಜ್ವಲ್ ರೇವಣ್ಣಗೆ ಲುಕ್ ಔಟ್ ನೋಟಿಸ್ ಜಾರಿ

ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More

May 2, 2024

ಪ್ರಜ್ವಲ್ ರೇವಣ್ಣನ ಮಾಜಿ ಕಾರು ಚಾಲಕ ‘ಕಾರ್ತಿಕ್’ ನಾಪತ್ತೆ

ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More

May 2, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More

May 2, 2024

ಪಿಎಚ್ಡಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಅನುಮಾನಾಸ್ಪದ ಸಾವು

ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್‌ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More

May 2, 2024

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 1, 2024

2024ರ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡ ಪ್ರಕಟ

ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್‍ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More

April 30, 2024