ರಾಜ್ಯದ 31ನೇ ಜಿಲ್ಲೆಯಾಗಿ ರಾಜ್ಯ ಸರ್ಕಾರ ವಿಜಯನಗರವನ್ನು ಘೋಷಣೆ ಮಾಡಿ ಸರ್ಕಾರ ಅಧಿಕೃತವಾಗಿ ಗೆಜೆಟ್ ಅಧಿಸೂಚನೆ ಹೊರಡಿಸಿದೆ.
ರಾಜ್ಯದ 31ನೇ ಜಿಲ್ಲೆಯಾಗಿ ವಿಜಯನಗರ ಸೇರ್ಪಡೆಯಾದಂತಾಗಿದೆ.
ಕಂದಾಯ ಇಲಾಖೆ(ಭೂ ಮಾಪನ) ಸರ್ಕಾರದ ಅಧೀನ ಕಾರ್ಯದರ್ಶಿ ವಿಟಿ ರಾಜಶ್ರೀ ಗೆಜೆಟ್ ಅಧಿಸೂಚನೆ ಹೊರಡಿಸಿದ್ದಾರೆ.
ಕರ್ನಾಟಕ ಭೂ ಕಂದಾಯ ಅಧಿನಿಯಮ 1964 ( 1964ರ ಕರ್ನಾಟಕ ಅಧಿನಿಯಮ ಸಂಖ್ಯೆ 12)ರ 6ನೇ ಪ್ರಕರಣದ ಮೇರೆಗೆ ಅಗತ್ಯ ಪಡಿಸಲಾದಂತೆ ಬಳ್ಳಾರಿಯ ಜಿಲ್ಲೆಯ ಸರಹದ್ದುಗಳನ್ನು ಮಾರ್ಪಡಿಸಿ, ವಿಜಯ ನಗರ ಜಿಲ್ಲೆ ಎಂಬ ಹೆಸರಿನ ನೂತನ ಜಿಲ್ಲೆಯನ್ನು ರಚಿಸಲಾಗಿದೆ.
ವಿಜಯನಗರ ಜಿಲ್ಲೆಯ ಕೇಂದ್ರ ಸ್ಥಾನವನ್ನಾಗಿ ಹೊಸಪೇಟೆಯನ್ನು ನಿಗದಿ ಮಾಡಲಾಗಿದೆ.
ನೂತನ ವಿಜಯನಗರ ಜಿಲ್ಲೆಗೆ ಹೊಸಪೇಟೆ, ಕೂಡ್ಲಿಗಿ, ಹಗರಿಬೊಮ್ಮನಹಳ್ಳಿ, ಕೊಟ್ಟೂರು, ಹೂವಿನ ಹಡಗಲಿ ಹಾಗೂ ಹರಪನಹಳ್ಳಿ ತಾಲೂಕುಗಳನ್ನು ಸೇರ್ಪಡೆಗೊಳಿಸಲಾಗಿದೆ.
ಜನರ ಸಮಸ್ಯೆಗಳಿಗಿಂತ ಟಿವಿ ಚಾನಲ್ ಗಳಿಗೆ ಗಂಡ ಹೆಂಡ್ತಿ ಜಗಳಗಳ ಬಗ್ಗೆಯೇ ಹೆಚ್ಚು ಆಸಕ್ತಿ: ಸಿಎಂ ವ್ಯಂಗ್ಯ ಫೇಕ್ ನ್ಯೂಸ್… Read More
ಹಾಸನ: 10 ವರ್ಷದ ಬಾಲಕನೊಬ್ಬ ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನದ ಅಲೂರು ತಾಲೂಕಿನ ಚಿನ್ನಪುರದಲ್ಲಿ ನಡೆದಿದೆ. ಮೃತ ಬಾಲಕ ಸಚಿನ್… Read More
ಮೈಸೂರು: ಶುಕ್ರವಾರ ( 20-09-2024 ) ರಾತ್ರಿ ದಸರಾ ಗಜಪಡೆಯ ಆನೆ ಧನಂಜಯ ಮತ್ತೊಂದು ಆನೆ ಕಂಜನ್ ಮೇಲೆ ಏಕಾಏಕಿ… Read More
ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More
ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
This website uses cookies.
Leave a Comment