Karnataka

ಇಂದಿರಾ ಫೋಟೊ ಮೂಲಕ , ಬಿಜೆಪಿ ಸಂಸದರು ಗಂಡಸರಲ್ಲ ಎಂಬ ಹೇಳಿಕೆಗೆ ವಿಜಯೇಂದ್ರ ಉತ್ತರ

ಬೆಂಗಳೂರು : ಮಾಗಡಿ ಕಾಂಗ್ರೆಸ್‌ ಶಾಸಕ (Magadi Congress MLA) ಎಚ್‌.ಸಿ. ಬಾಲಕೃಷ್ಣ (HC Balakrishna) ಅವರ ಬಿಜೆಪಿ ಸಂಸದರು ಬರೀ ಶೋ ಪೀಸ್‌ಗಳು, ಅವರಲ್ಲಿ ಯಾರೂ ಗಂಡಸರಿಲ್ಲ ಎಂಬ ವಿವಾದಾತ್ಮಕ ಹೇಳಿಕೆಗೆ (controversial Statement) ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (BY Vijayendra) ಅವರು ಇಂದಿರಾ ಗಾಂಧಿ ಅವರ ಫೋಟೊ ಮೂಲಕ ತಿರುಗೇಟು ನೀಡಿದ್ದಾರೆ.

ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಬೇಕಾದ ಪಾಲನ್ನು ನೀಡದೆ ಅನ್ಯಾಯ ಮಾಡುತ್ತಿದೆ ಎಂದು ರಾಮನಗರದ ನಾಗರಕಲ್ಲುದೊಡ್ಡಿ ಗ್ರಾಮದಲ್ಲಿ ಮಾತನಾಡಿದ ಶಾಸಕ ಎಚ್.ಸಿ.ಬಾಲಕೃಷ್ಣ, ದಿಲ್ಲಿಯಲ್ಲಿ ಆಯೋಜಿಸಲಾಗಿರುವ ಜಂತರ್‌ ಮಂತರ್‌ ಪ್ರತಿಭಟನೆಗೆ ಸಂಬಂಧಿಸಿ ಹೇಳಿಕೆ ನೀಡಿ ನರೇಂದ್ರ ಮೋದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ʻʻಬಿಜೆಪಿಯ ಸಂಸದರು ನರೇಂದ್ರ ಮೋದಿ ಮುಂದೆ ಕೂರೋದು ಇಲ್ಲ, ಏಳೋದು ಇಲ್ಲ. ಕೇವಲ ಮೋದಿ ಹೆಸರಲ್ಲಿ ಗೆಲ್ತಾರೆ, ಆದರೆ ವೈಯಕ್ತಿಕ ವರ್ಚಸ್ಸು ಇಲ್ಲ. ಪಕ್ಕದ ತಮಿಳುನಾಡು ತನ್ನ ಹಕ್ಕಿಗಾಗಿ ಮಾಡುವ ಹೋರಾಟವನ್ನ ನೋಡಿ ಕಲಿಯಲಿ. ಬಿಜೆಪಿ ಸಂಸದರೆಲ್ಲಾ ಶೋ ಪೀಸ್ ಗಳು. ಕೇವಲ ದೆಹಲಿಗೆ ಹೋಗೋದು ಟಿಎ-ಡಿಎ ತಕೊಂಡು ಬರೋದು ಅಷ್ಟೇ ಇವರ ಕೆಲಸ. ಬಿಜೆಪಿ ಎಂಪಿಗಳು, ಮಂತ್ರಿಗಳು ರಾಜ್ಯದ ಧ್ವನಿ ಎತ್ತಿಲ್ಲ. ಹಾಗಾಗಿ ನಾವು ಹೋರಾಟ ಮಾಡ್ತಿದ್ದೀವಿʼʼ ಎಂದು ಹೇಳಿದರು.

” ಬಿಜೆಪಿಯ ಗಂಡಸರು ನಮ್ಮ ಹೋರಾಟ ನೋಡಿಯಾದರೂ ಹೋರಾಟ ಮಾಡ್ತಾರಾ ನೋಡೋಣ.. ಇದರ ಅರ್ಥ ಬಿಜೆಪಿಯಲ್ಲಿ ಯಾರು ಗಂಡಸರು ಇಲ್ಲ ಅಂತ.! ಈಗಿರುವ ಬಿಜೆಪಿ ಎಂಪಿಗಳು ಯಾರು ಗಂಡಸರಲ್ಲ ಎಂದು ಅರ್ಥʼʼ ಎಂದು ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ಬಿಜೆಪಿ ಸಂಸದರ ವಿರುದ್ಧ ವಾಗ್ದಾಳಿ ನಾಡೆಸಿದರು.

ಟ್ವಿಟರ್ ನಲ್ಲಿ ಇಂದಿರಾ ಫೋಟೊ ಹಂಚಿಕೊಂಡ ವಿಜಯೇಂದ್ರ:

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ , ಬಾಲಕೃಷ್ಣ ಅವರ ಹೇಳಿಕೆಗೆ ಪ್ರತಿಯಾಗಿ ಕಾಂಗ್ರೆಸ್‌ನ ಗುಲಾಮಿತನವನ್ನು ಪ್ರತಿಪಾದಿಸುವ ಚಿತ್ರವೊಂದನ್ನು ಹಂಚಿಕೊಂಡು ತಿರುಗೇಟು ನೀಡಿದ್ದಾರೆ .

ದೇಶಬಿಟ್ಟು ಬ್ರಿಟಿಷರು ತೊಲಗಿದರೂ ನೆಹರೂ ಕುಟುಂಬದ ಗುಲಾಮಗಿರಿಯ ನೆರಳಲ್ಲೇ ಇರುವ ಶಾಸಕ ಬಾಲಕೃಷ್ಣನವರಂತಹ ಕಾಂಗ್ರೆಸ್ಸಿಗರು ಇಂದು ನಮ್ಮ ಪಕ್ಷದ ಸಂಸದರುಗಳನ್ನು ಕುರಿತು ನೀಡಿರುವ ಕೀಳುಮಟ್ಟದ ಹೇಳಿಕೆಗೆ ಈ ಚಿತ್ರವೇ ಉತ್ತರ ಹೇಳುತ್ತದೆ ಎಂದು ಬರೆದಿದ್ದಾರೆ.ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್: ಸಚಿವ ಮಧು ಬಂಗಾರಪ್ಪ

ಟ್ವಿಟರ್‌ನಲ್ಲಿ ಪ್ರಕಟಿಸಿರುವ ಚಿತ್ರದಲ್ಲಿ ಇಂದಿರಾ ಗಾಂಧಿ ಅವರು ಕುರ್ಚಿಯೊಂದರಲ್ಲಿ ಕುಳಿತುಕೊಂಡಿರುವುದು, ಉಳಿದ ನಾಯಕರೆಲ್ಲ ಸುತ್ತ ದೈನ್ಯ ಸ್ಥಿತಿಯಲ್ಲಿ ನಿಂತಿರುವುದು ಕಾಣುತ್ತದೆ.

Team Newsnap
Leave a Comment

Recent Posts

ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು; ಮೈಸೂರಿನಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ ಎನ್‌ಐಎ

ಬೆಂಗಳೂರು : ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಿಸಲು ಸಂಚು ರೂಪಿಸಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳ(ಎನ್‌ಐಎ)… Read More

May 15, 2024

ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಯುವತಿಯ ಭೀಕರ ಹತ್ಯೆ

ಹುಬ್ಬಳ್ಳಿ : ಇಂದು ಪಾಗಲ್ ಪ್ರೇಮಿಯೊಬ್ಬ ಪ್ರೀತಿ ನಿರಾಕರಿಸಿದ್ದಕ್ಕೆ ಮನೆಗೆ ನುಗ್ಗಿ ಯುವತಿಗೆ ಚಾಕುವಿನಿಂದ ಮನಬಂದಂತೆ ಇರಿದು ಹತ್ಯೆಗೈದಿರುವ ಘಟನೆ… Read More

May 15, 2024

ಪಾಕ್ ಆಕ್ರಮಿತ ಕಾಶ್ಮೀರ ಭಾರತಕ್ಕೆ ಸೇರಿದ್ದು : ಅಮಿತ್‌ ಶಾ

ನವದೆಹಲಿ : ಕೇಂದ್ರ ಗೃಹ ಸಚಿವ ಅಮಿತ್ ಷಾ ಬುಧವಾರ ಪಾಕ್ ಆಕ್ರಮಿತ ಕಾಶ್ಮೀರ (POK) ಮೇಲೆ ಭಾರತದ ಸಾರ್ವಭೌಮತ್ವವನ್ನು… Read More

May 15, 2024

ಪೆನ್ ಡ್ರೈವ್ ಕೇಸ್: ಹಾಸನದ 18 ಕಡೆಗಳಲ್ಲಿ ಎಸ್ ಐಟಿ ಶೋಧ

ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸೇರಿದ್ದು ಎನ್ನಲಾದ ಅಶ್ಲೀಲ ವಿಡಿಯೋ ಹೊಂದಿದ ಪೆನ್ ಡ್ರೈವ್ ಹಂಚಿಕೆ ಪ್ರಕರಣ ಸಂಬಂಧ… Read More

May 15, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 15 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,750 ರೂಪಾಯಿ ದಾಖಲಾಗಿದೆ. 24… Read More

May 15, 2024

ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ

ಮುಂಬೈ: ನಿನ್ನೆ ಬೀಸಿದ ಬಿರುಗಾಳಿಗೆ ನಗರದಲ್ಲಿ ತಲೆಎತ್ತಿದ್ದ ಅಕ್ರಮ ಜಾಹಿರಾತು ಫಲಕ ಕುಸಿದು, 8 ಮಂದಿ ಸಾವನ್ನಪ್ಪಿದ್ದು, 60 ಜನರು… Read More

May 14, 2024