ಉತ್ತರಾಯಣ ಪುಣ್ಯಕಾಲದಲ್ಲಿ ಹಳ್ಳಿ ಹಕ್ಕಿ ‘ವಿಶ್ವನಾಥ್’ ಕಾಂಗ್ರೆಸ್ ಸೇರ್ಪಡೆ ಫಿಕ್ಸ್

Team Newsnap
1 Min Read
Village bird 'Vishwanath' Congress inclusion fix in Uttarayana Punyakala ಉತ್ತರಾಯಣ ಪುಣ್ಯಕಾಲದಲ್ಲಿ ಹಳ್ಳಿ ಹಕ್ಕಿ 'ವಿಶ್ವನಾಥ್' ಕಾಂಗ್ರೆಸ್ ಸೇರ್ಪಡೆ ಫಿಕ್ಸ್

ಕಾಂಗ್ರೆಸ್ ನಿಂದ ವಲಸೆ ಬಂದಿದ್ದ ಬಿಜೆಪಿ ಎಂಎಲ್ ಸಿ ಹಳ್ಳಿಹಕ್ಕಿ ಹೆಚ್.ವಿಶ್ವನಾಥ್ ಮತ್ತೆ ಕಾಂಗ್ರೆಸ್ ಸೇರ್ಪಡೆಗೆ ಸಿದ್ದತೆ ನಡೆಸಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯ ವೇಳೆ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿದ್ದರು ನಂತರ ಶಾಸಕರಾಗಿ ಆಯ್ಕೆಯಾಗಿ ಸಮ್ಮಿಶ್ರ ಸರ್ಕಾರದ ಪತನದ ಸಮಯಲ್ಲಿ ಬಿಜೆಪಿ ಸೇರ್ಪಡೆಯಾಗಿ ಎಂಎಲ್ ಸಿ ಆಗಿರುವ ಹಳ್ಳಿಹಕ್ಕಿ ಹೆಚ್.ವಿಶ್ವನಾಥ್ ಇದೀಗ ಮತ್ತೆ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ .

ಈ ಕುರಿತು ಸ್ವತಃ ಹೆಚ್.ವಿಶ್ವನಾಥ್ ಪ್ರತಿಕ್ರಿಯೆ ನೀಡಿ ನನ್ನ ರಕ್ತವೇ ಕಾಂಗ್ರೆಸ್ ಎಂದಿದ್ದಾರೆ.ಗಾಂಜಾ‌ ದಂಧೆ -ಮಂಗಳೂರಿನ ವೈದ್ಯರು, ವೈದ್ಯ ವಿದ್ಯಾರ್ಥಿಗಳು ಸೇರಿ 10 ಮಂದಿ ಬಂಧನ

ಉತ್ತರಾಯಣದಂದು ನಾನು ಕಾಂಗ್ರೆಸ್ ಪಕ್ಷ ಸೇರುತ್ತೇನೆ. ಅದಕ್ಕಾಗಿಯೇ ರಾಯರ ದರ್ಶನ ಪಡೆದಿದ್ದೇನೆ. ಕಾಂಗ್ರೆಸ್ ಸೇರ್ಪಡೆ ಫಿಕ್ಸ್ ಆಗಿದೆಎಂದಿದ್ದಾರೆ

ವಿಶ್ವನಾಥ್ ಅವರು ಇತ್ತೀಚೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದರು.

ಹೆಚ್ ವಿಶ್ವನಾಥ್ ಅವರು ಏಕಾಏಕಿ ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು.

Share This Article
Leave a comment