Politics

ಬಿಜೆಪಿ ತೊರೆದು ಮಾತೃಪಕ್ಷದ ಗೂಡು ಸೇರುವ ಹಳ್ಳಿ ಹಕ್ಕಿ ವಿಶ್ವನಾಥ್ ?

ಕಳೆದ 3 ವರ್ಷಗಳಿಂದ ಬಿಜೆಪಿಯಲ್ಲಿರುವ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಈಗ ಮರಳಿ ಗೂಡಿಗೆ ಸೇರಲು ಕಸರತ್ತು ನಡೆಸ್ತಿದ್ದಾರಾ? ವಿಶ್ವನಾಥ್ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ತಾರಾ ಅನ್ನೋ ಅನುಮಾನ ಹುಟ್ಟಿಸಿದೆ.

ಬಿಜೆಪಿ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಸದ್ದಿಲ್ಲದೇ ಇಬ್ಬರು ಘಟಾನುಘಟಿ ಕಾಂಗ್ರೆಸ್ ನಾಯಕರನ್ನು ಬ್ಯಾಕ್ ಟು ಬ್ಯಾಕ್ ಭೇಟಿ ಮಾಡಿದ್ದು, ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿಯಾಗಿದೆ.

ವಿಶ್ವನಾಥ್ ಅವರು, ನಿನ್ನೆಯಷ್ಟೇ ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ , ಅದರ ಬೆನ್ನಲ್ಲೇ ಇವತ್ತು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡುವ ಮೂಲಕ ತೀವ್ರ ಕುತೂಹಲ ಮೂಡಿಸಿದ್ದಾರೆ. ಇವತ್ತು ಬೆಳಗ್ಗೆ ಆರೋಗ್ಯ ವಿಚಾರಿಸುವ ನೆಪದಲ್ಲಿ ಸಿದ್ದರಾಮಯ್ಯ ಅವರ ಸರ್ಕಾರಿ‌ ನಿವಾಸಕ್ಕೆ ವಿಶ್ವನಾಥ್ ಭೇಟಿ ಕೊಟ್ಟರು. ಅರ್ಧ ಗಂಟೆಗೂ ಹೆಚ್ಚು ಕಾಲ ಸಿದ್ದರಾಮಯ್ಯ ಅವರ ಜತೆ ವಿಶ್ವನಾಥ್ ಮಾತುಕತೆ ನಡೆಸಿದರು.

ಸಿದ್ದರಾಮಯ್ಯನವರ ನಡೆಯಿಂದ ಬೇಸತ್ತು ಕಾಂಗ್ರೆಸ್ ತೊರೆದು ಜೆಡಿಎಸ್‌ ಸೇರಿದ್ದರು. ನಂತರ ಜೆಡಿಎಸ್‌ನಲ್ಲೂ ವೈಮನಸ್ಸು ಬಂದು ಸಮ್ಮಿಶ್ರ ಸರ್ಕಾರ ಕೆಡವಿ 16 ಜನ ವಲಸಿಗರ ಜತೆ ತಾವೂ ಬಿಜೆಪಿಗೆ ಸೇರ್ಪಡೆ ಆಗಿದ್ದರು. ಆದರೆ ಬಿಜೆಪಿಯಲ್ಲಿ ಮಾತ್ರ ಈವರೆಗೂ ಅವರಿಗೆ ಸಚಿವ ಸ್ಥಾನ ಸಿಗಲಿಲ್ಲ. ಕರ್ನಾಟಕ ಸರ್ಕಾರದಿಂದ 2,500 ರೂ.ಗಳಲ್ಲಿ ತಿಮ್ಮಪ್ಪನ ದರ್ಶನಕ್ಕೆ ಸ್ಪೆಷಲ್‌ ಪ್ಯಾಕೇಜ್‌

ಹಿರಿತನಕ್ಕೆ ಮಾನ್ಯತೆಯೂ ಸಿಗಲಿಲ್ಲ. ಸಾಲದ್ದಕ್ಕೆ ಉಪಚುನಾವಣೆಯಲ್ಲಿ ಸಹ ಸೋತರು. ಬಹಳ ಕಸರತ್ತು ನಡೆಸಿ ಸಾಹಿತ್ಯ ಕೋಟಾದಿಂದ ಪರಿಷತ್‌ಗೆ ನಾಮ ನಿರ್ದೇಶನಗೊಂಡರು. ಆದರೆ ಬಿಜೆಪಿಯಲ್ಲಿದ್ರೂ ಅಲ್ಲಿನ ನಾಯಕರನ್ನು ಸತತವಾಗಿ ಟೀಕಿಸುತ್ತಲೇ ಬಂದರು. ಸದ್ಯ ಅವರು ಈಗ ಬಿಜೆಪಿಯಿಂದಲೂ ಮಾನಸಿಕವಾಗಿ ದೂರವಾಗಿದ್ದಾರೆ.

Team Newsnap
Leave a Comment
Share
Published by
Team Newsnap

Recent Posts

SIT ಯಿಂದ ಸಂಸದ ಪ್ರಜ್ವಲ್ ರೇವಣ್ಣಗೆ ಲುಕ್ ಔಟ್ ನೋಟಿಸ್ ಜಾರಿ

ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More

May 2, 2024

ಪ್ರಜ್ವಲ್ ರೇವಣ್ಣನ ಮಾಜಿ ಕಾರು ಚಾಲಕ ‘ಕಾರ್ತಿಕ್’ ನಾಪತ್ತೆ

ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More

May 2, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More

May 2, 2024

ಪಿಎಚ್ಡಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಅನುಮಾನಾಸ್ಪದ ಸಾವು

ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್‌ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More

May 2, 2024

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 1, 2024

2024ರ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡ ಪ್ರಕಟ

ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್‍ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More

April 30, 2024