ಈ ಗ್ರಾಮ ಪಂಚಾಯತಿ ಚುನಾವಣೆ ಮುಗಿಯುತ್ತಿದ್ದಂತೆ ಗ್ರಾಮೀಣ ಭಾಗದ ಜನರು ಹೊಸ ತೆರಿಗೆ ಭಾರ ಹೊರಲು ಸಿದ್ದರಾಗಬೇಕಿದೆ.
ಈಗಾಗಲೇ ಸರ್ಕಾರ ತೆರಿಗೆ ಯಾವ ಪ್ರಮಾಣದಲ್ಲಿ ಹೆಚ್ಚಿಸಬೇಕು ಎನ್ನುವ ಕೋಷ್ಟಕವನ್ನು ಸಿದ್ಧಪಡಿಸಿದೆ. ಚುನಾವಣೆಯಲ್ಲಿ ಆಯ್ಕೆಯಾದ ಸದಸ್ಯರು ಅಧಿಕಾರ ಸ್ವೀಕಾರ ಮಾಡುತ್ತಿದ್ದಂತೆ ಹಳ್ಳಿಗಳಲ್ಲಿ ಹೊಸ ತೆರಿಗೆ ನೀತಿಯನ್ನು ಕಡ್ಡಾಯವಾಗಿ ಜಾರಿ ಮಾಡಲೇಬೇಕು.
ಗ್ರಾಮೀಣಾ ಜನತೆಗೆ ಬಿಗ್ ಶಾಕ್ ತಡೆದುಕೊಳ್ಳಲು ಸಿದ್ದರಿಬೇಕಿದೆ. ಏಕೆಂದರೆ ಗ್ರಾಮಪಂಚಾಯಿತಿ ಸದಸ್ಯರಾಗಿ ಆಯ್ಕೆಯಾದವರು ತಮ್ಮ ಗ್ರಾಮದ ಅಭಿವೃದ್ಧಿಗೆ ಸಂಪನ್ಮೂಲ ಕ್ರೋಢೀಕರಿಸಸಲು ತೆರಿಗೆ ಹೆಚ್ಚಳ ಮಾಡಿಕೊಳ್ಳುವುದು ಅನಿವಾರ್ಯ ವಾಗಿದೆ ಎಂದು ಸರ್ಕಾರ ಹೇಳಿದೆ.
ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿನ ಕೃಷಿ ತೆರಿಗೆ, ಭೂಮಿ ಮತ್ತು ಕಟ್ಟಡಗಳ ಮೇಲಿನ ತೆರಿಗೆ ಪರಿಷ್ಕರಣೆಗೆ ಸಂಬಂಧಪಟ್ಟಂತೆ ಮಾರ್ಗಸೂಚಿಗಳೂ ಕೂಡ ಈಗಾಗಲೇ ಪ್ರಕಟವಾಗಿವೆ.
ಗ್ರಾಮ ಪಂಚಾಯಿತಿಗಳು ಸಾರ್ವಜನಿಕ ಸಹಭಾಗಿತ್ವದಲ್ಲಿ ಆಸ್ತಿಗಳ ಮೌಲ್ಯಮಾಪನ, ಹೊಸ ತೆರಿಗೆ ನೀತಿಯ ಅನುಷ್ಠಾನ, ಸ್ಥಳೀಯ ಅಗತ್ಯಗಳನ್ನು ಪೂರೈಸಲು ಸಾಕಷ್ಟು ಆದಾಯದ ಉತ್ಪಾದಕತೆ ಮತ್ತು ಸಂಗ್ರಹಣೆ ಹೊಂದುವಂತಾಗಬೇಕೆಂಬುದು ಸರ್ಕಾರದ ಆಶಯವಾಗಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು