ಜ್ಯೋತಿಷಿ ನಂಬಿ, ಗಾಢವಾಗಿ ಪ್ರೀತಿಸಿದ ಯುವತಿಯೊಬ್ಬಳು ಮನೆಯವರನ್ನು ಒಪ್ಪಿಸಿ, ಪ್ರೀತಿಸಿದವನ್ನೇ ಮದುವೆ ಯಾದಳು.
ಆದರೆ ಪತಿ ಧನರಾಜ್ ಧನದಾಯಿ ಎನ್ನುವುದು ಮದುವೆಯಾದ ಆರು ತಿಂಗಳ ನಂತರ ಗೊತ್ತಾಗಿ, ಇಲ್ಲದ ಕಿರುಕುಳ, ಹಿಂಸೆಗೆ ಬೇಸತ್ತು ಮದುವೆಯಾದ ಯುವತಿ ಆತ್ಮಹತ್ಯೆ ಮಾಡಿಕೊಂಡ ಧಾರುಣ ಘಟನೆ ಮೈಸೂರಿನಲ್ಲಿ ಜರುಗಿದೆ.
ಮೈಸೂರಿನ ದಟ್ಟಗಹಳ್ಳಿಯಲ್ಲಿ ವಾಸವಿದ್ದ ರಾಮನಗರ ಜಿಲ್ಲೆಯ ಬಿಡದಿ ಬಳಿಯ ಹೊಸದೊಡ್ಡಿಯ ನಿವೇದಿತಾ (೧೯) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಯುವತಿ.
ಪತಿ ಧನರಾಜ್ ಮತ್ತು ಮೃತರ ಮಾವ ಲಕ್ಕಪ್ಪ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಧನರಾಜ್ ಮತ್ತು ನಿವೇದಿತಾ ಒಂದೇ ಗ್ರಾಮದವರು. ಪ್ರೀತಿಸಿ , ಎರಡು ಕುಟುಂಬದವರು ಇವರ ಪ್ರೀತಿಗೆ ಒಪ್ಪಿ ಮದುವೆ ಮಾಡಿದ್ದರು. ಮದುವೆ ವೇಳೆ ನಿವೇದಿತಾ ಮನೆಯವರು ವರದಕ್ಷಿಣೆಯಾಗಿ 85 ಗ್ರಾಂ ಚಿನ್ನವನ್ನು ನೀಡಿದ್ದರು.
ಈ ಧನರಾಜ್ ಮೈಸೂರಿನಲ್ಲಿ ಹೊಟ್ಟೆ ಪಾಡು ನೋಡಿಕೊಂಡಿದ್ದ. ಧನರಾಜ್ ಆತನ ಪತ್ನಿಗೆ ತವರಿನಿಂದ ಮತ್ತಷ್ಟು ಚಿನ್ನವನ್ನು ತರುವಂತೆ ಒತ್ತಾಯಿಸಿ ಕಿರುಕುಳ , ಹಿಂಸೆ ನೀಡುತ್ತಿದ್ದ. ಇದರಿಂದ ಬೇಸತ್ತಿದ್ದ ನಿವೇದಿತಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಸಂಬಂಧ ಮೃತರ ಸಹೋದರಿ ಕುವೆಂಪುನಗರದ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪತಿ, ಮಾವನನ್ನು ಈಗ ಪೊಲೀಸರು ಬಂಧಿಸಿದ್ದಾರೆ.
ಜನರ ಸಮಸ್ಯೆಗಳಿಗಿಂತ ಟಿವಿ ಚಾನಲ್ ಗಳಿಗೆ ಗಂಡ ಹೆಂಡ್ತಿ ಜಗಳಗಳ ಬಗ್ಗೆಯೇ ಹೆಚ್ಚು ಆಸಕ್ತಿ: ಸಿಎಂ ವ್ಯಂಗ್ಯ ಫೇಕ್ ನ್ಯೂಸ್… Read More
ಹಾಸನ: 10 ವರ್ಷದ ಬಾಲಕನೊಬ್ಬ ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನದ ಅಲೂರು ತಾಲೂಕಿನ ಚಿನ್ನಪುರದಲ್ಲಿ ನಡೆದಿದೆ. ಮೃತ ಬಾಲಕ ಸಚಿನ್… Read More
ಮೈಸೂರು: ಶುಕ್ರವಾರ ( 20-09-2024 ) ರಾತ್ರಿ ದಸರಾ ಗಜಪಡೆಯ ಆನೆ ಧನಂಜಯ ಮತ್ತೊಂದು ಆನೆ ಕಂಜನ್ ಮೇಲೆ ಏಕಾಏಕಿ… Read More
ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More
ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
This website uses cookies.
Leave a Comment