ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಟಿ20 ವರ್ಲ್ಡ್ ಕಪ್ ನಂತರ ಭಾರತೀಯ ಕ್ರಿಕೆಟ್ನ ಟಿ20 ಕ್ರಿಕೆಟ್ನ ನಾಯಕತ್ವದಿಂದ ಕೆಳಗಿಳಿಯಲು ನಿರ್ಧರಿಸಿದ್ದಾರೆ.
ಈ ಮಧ್ಯೆ ವಿರಾಟ್ ಕೊಹ್ಲಿಯನ್ನು ಒನ್ ಡೇ ಇಂಟರ್ನ್ಯಾಷನಲ್ನ ನಾಯಕತ್ವದಿಂದಲೂ ಕೆಳಗಿಳಿಸಲು ಬಿಸಿಸಿಐ ಮತ್ತು ಆಯ್ಕೆ ಸಮಿತಿ ನಿರ್ಧರಿಸಿದೆ ಎಂದು ಗೊತ್ತಾಗಿದೆ.
ಈಗಾಗಲೇ ಬೋರ್ಡ್ ಮತ್ತು ಸೆಲೆಕ್ಷನ್ ಕಮಿಟಿಯಲ್ಲಿ ವಿರಾಟ್ರನ್ನು ಕೆಳಗಿಳಿಸುವ ಬಗ್ಗೆ ಚರ್ಚೆ ಹೆಚ್ಚಾಗಿದೆ. ಒನ್ಡೇ ಇಂಟರ್ನ್ಯಾಷನಲ್ಗೆ ಇಬ್ಬರು ವೈಸ್ ಕ್ಯಾಪ್ಟನ್ಗಳನ್ನು ನೇಮಿಸಲು ಬಿಸಿಸಿಐ ಮುಂದಾಗಿದೆ ಎನ್ನಲಾಗಿದೆ.
.ವಿರಾಟ್ ಟಿ 20 ವರ್ಲ್ಡ್ ಕಪ್ನಲ್ಲಿ ಗೆದ್ದು ತೋರಿಸಲೇಬೇಕಿದೆ. ಒಂದು ವೇಳೆ ಟಿ 20 ವರ್ಲ್ಡ್ಕಪ್ನಲ್ಲಿ ಟೀಂ ಇಂಡಿಯಾ ಫೈನಲ್ ತಲುಪಿದರೂ ಅದರು ಕೊಹ್ಲಿ ಪಾಲಿಗೆ ನಷ್ಟವಾಗಿ ಪರಿಣಮಿಸಲಿದೆ.
ಟಿ20 ವರ್ಲ್ಡ್ಕಪ್ನಲ್ಲಿ ಕಪ್ ಗೆಲ್ಲುವಲ್ಲಿ ವಿರಾಟ್ ವಿಫಲರಾದರೆ ಅವರನ್ನು ಒನ್ ಡೇ ಇಂಟರ್ನ್ಯಾಷನಲ್ನಿಂದಲೂ ಕೆಳಗಿಳಿಸುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ.
ಟಿ20 ತಂಡದ ನಾಯಕತ್ವವನ್ನು ತ್ಯಜಿಸುತ್ತೇನೆ – ವಿರಾಟ್
ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಟಿ20 ವಿಶ್ವಕಪ್ ಬಳಿಕ ಟಿ20 ತಂಡದ ನಾಯಕತ್ವವನ್ನು ತ್ಯಜಿಸುತ್ತೇನೆ ಎಂದು ಅಧಿಕೃತವಾಗಿ ಸಾಮಾಜಿಕ ಜಾಲತಾಣಗಳ ಮೂಲಕ ಸ್ಪಷ್ಟಪಡಿಸಿದ್ದಾರೆ.
ಕೊಹ್ಲಿ, ನಾನು ಕಳೆದ 8-9 ವರ್ಷಗಳಿಂದ ಭಾರತ ತಂಡಕ್ಕಾಗಿ ಆಡುತ್ತಿದ್ದೇನೆ. ನನಗೆ ತಂಡದ ನಾಯಕತ್ವ ನೀಡಿ 5-6 ವರ್ಷಗಳು ಕಳೆದಿದೆ. ಈಗಾಗಲೇ ಸಾಕಷ್ಟು ಯಶಸ್ಸನ್ನು ಕಂಡಿದ್ದೇನೆ. ಇದೀಗ ನಾನು ನನ್ನ ಬ್ಯಾಟಿಂಗ್ ಸಾಮರ್ಥ್ಯದ ಕಡೆಗೆ ಹೆಚ್ಚು ಆಸಕ್ತಿ ವಹಿಸುವ ಉದ್ದೇಶದಿಂದ ಟಿ20 ವಿಶ್ವಕಪ್ ಬಳಿಕ ಟಿ20 ತಂಡದ ನಾಯಕತ್ವ ತ್ಯಜಿಸುತ್ತೇನೆ ಎಂದು ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ.
ಮೈಸೂರು : ಶ್ರೀನಿವಾಸ್ ಪ್ರಸಾದ್ (Srinivas Prasad) ಅವರ ಅಂತ್ಯಕ್ರಿಯೆ ನಾಳೆ ಮಾಡಲಾಗುತ್ತದೆ ಎಂದು ಮಗಳು ಪ್ರತಿಮಾ ಪ್ರಸಾದ್… Read More
ಮೈಸೂರು : ಉದಯಗಿರಿ ಪೊಲೀಸ್ ಠಾಣೆಯಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಗರ್ಭಪಾತ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಮಂದಿ… Read More
ಬೆಂಗಳೂರು: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ (76) ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಮೂತ್ರಕೋಶ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಅವರು… Read More
ರಾಯಚೂರು : ರಾಯಚೂರಿನ ತಾಪಮಾನ ಹೆಚ್ಚಳದಿಂದ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ನಡೆದಿದೆ. ಜನರು ಬಿಸಿ ಗಾಳಿಯಿಂದಾಗಿ ತತ್ತರಿಸುತ್ತಿದ್ದು ,… Read More
ಬೆಂಗಳೂರು : ರಾಜ್ಯದಲ್ಲಿ 14 ಕ್ಷೇತ್ರಗಳ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಮುಕ್ತಾಯವಾಗಿದ್ದು , ಮೇ 7ರಂದು ಉತ್ತರ… Read More
ಮೈಸೂರು: ಮೈಸೂರು ಕೊಡುಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ ಸಿಬ್ಬಂದಿ ಇವಿಎಂ,… Read More
This website uses cookies.
Leave a Comment