Trending

ಟಿ20 ವಿಶ್ವ ಕಪ್ ಗೆದ್ದರೆ ಮಾತ್ರ ವಿರಾಟ್ ಗೆ ನಾಯಕತ್ವ ಗಟ್ಟಿ : ಸೋತರೆ ಸ್ಥಾನ ಪಲ್ಲಟ

ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಟಿ20 ವರ್ಲ್ಡ್ ಕಪ್​ ನಂತರ ಭಾರತೀಯ ಕ್ರಿಕೆಟ್​ನ ಟಿ20 ಕ್ರಿಕೆಟ್​ನ ನಾಯಕತ್ವದಿಂದ ಕೆಳಗಿಳಿಯಲು ನಿರ್ಧರಿಸಿದ್ದಾರೆ.

ಈ ಮಧ್ಯೆ ವಿರಾಟ್ ಕೊಹ್ಲಿಯನ್ನು ಒನ್ ಡೇ ಇಂಟರ್​ನ್ಯಾಷನಲ್​ನ ನಾಯಕತ್ವದಿಂದಲೂ ಕೆಳಗಿಳಿಸಲು ಬಿಸಿಸಿಐ ಮತ್ತು ಆಯ್ಕೆ ಸಮಿತಿ ನಿರ್ಧರಿಸಿದೆ ಎಂದು ಗೊತ್ತಾಗಿದೆ.

ಈಗಾಗಲೇ ಬೋರ್ಡ್ ಮತ್ತು ಸೆಲೆಕ್ಷನ್ ಕಮಿಟಿಯಲ್ಲಿ ವಿರಾಟ್​ರನ್ನು ಕೆಳಗಿಳಿಸುವ ಬಗ್ಗೆ ಚರ್ಚೆ ಹೆಚ್ಚಾಗಿದೆ. ಒನ್​ಡೇ ಇಂಟರ್​ನ್ಯಾಷನಲ್​​ಗೆ ಇಬ್ಬರು ವೈಸ್​ ಕ್ಯಾಪ್ಟನ್​ಗಳನ್ನು ನೇಮಿಸಲು ಬಿಸಿಸಿಐ ಮುಂದಾಗಿದೆ ಎನ್ನಲಾಗಿದೆ.

.ವಿರಾಟ್ ಟಿ 20 ವರ್ಲ್ಡ್​ ಕಪ್​ನಲ್ಲಿ ಗೆದ್ದು ತೋರಿಸಲೇಬೇಕಿದೆ. ಒಂದು ವೇಳೆ ಟಿ 20 ವರ್ಲ್ಡ್​​ಕಪ್​ನಲ್ಲಿ ಟೀಂ ಇಂಡಿಯಾ ಫೈನಲ್ ತಲುಪಿದರೂ ಅದರು ಕೊಹ್ಲಿ ಪಾಲಿಗೆ ನಷ್ಟವಾಗಿ ಪರಿಣಮಿಸಲಿದೆ.

ಟಿ20 ವರ್ಲ್ಡ್​ಕಪ್​ನಲ್ಲಿ ಕಪ್ ಗೆಲ್ಲುವಲ್ಲಿ ವಿರಾಟ್ ವಿಫಲರಾದರೆ ಅವರನ್ನು ಒನ್​ ಡೇ ಇಂಟರ್​​ನ್ಯಾಷನಲ್​ನಿಂದಲೂ ಕೆಳಗಿಳಿಸುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ.

ಟಿ20 ತಂಡದ ನಾಯಕತ್ವವನ್ನು ತ್ಯಜಿಸುತ್ತೇನೆ – ವಿರಾಟ್

ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಟಿ20 ವಿಶ್ವಕಪ್ ಬಳಿಕ ಟಿ20 ತಂಡದ ನಾಯಕತ್ವವನ್ನು ತ್ಯಜಿಸುತ್ತೇನೆ ಎಂದು ಅಧಿಕೃತವಾಗಿ ಸಾಮಾಜಿಕ ಜಾಲತಾಣಗಳ ಮೂಲಕ ಸ್ಪಷ್ಟಪಡಿಸಿದ್ದಾರೆ.

ಕೊಹ್ಲಿ, ನಾನು ಕಳೆದ 8-9 ವರ್ಷಗಳಿಂದ ಭಾರತ ತಂಡಕ್ಕಾಗಿ ಆಡುತ್ತಿದ್ದೇನೆ. ನನಗೆ ತಂಡದ ನಾಯಕತ್ವ ನೀಡಿ 5-6 ವರ್ಷಗಳು ಕಳೆದಿದೆ. ಈಗಾಗಲೇ ಸಾಕಷ್ಟು ಯಶಸ್ಸನ್ನು ಕಂಡಿದ್ದೇನೆ. ಇದೀಗ ನಾನು ನನ್ನ ಬ್ಯಾಟಿಂಗ್ ಸಾಮರ್ಥ್ಯದ ಕಡೆಗೆ ಹೆಚ್ಚು ಆಸಕ್ತಿ ವಹಿಸುವ ಉದ್ದೇಶದಿಂದ ಟಿ20 ವಿಶ್ವಕಪ್ ಬಳಿಕ ಟಿ20 ತಂಡದ ನಾಯಕತ್ವ ತ್ಯಜಿಸುತ್ತೇನೆ ಎಂದು ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ.

Team Newsnap
Leave a Comment
Share
Published by
Team Newsnap

Recent Posts

ನಾಳೆ ಶ್ರೀನಿವಾಸ ಪ್ರಸಾದ್ ಅವರ ಅಂತಿಮ ಸಂಸ್ಕಾರ

ಮೈಸೂರು : ಶ್ರೀನಿವಾಸ್‌ ಪ್ರಸಾದ್ (Srinivas Prasad) ಅವರ ಅಂತ್ಯಕ್ರಿಯೆ ನಾಳೆ ಮಾಡಲಾಗುತ್ತದೆ ಎಂದು ‌ ಮಗಳು ಪ್ರತಿಮಾ ಪ್ರಸಾದ್‌… Read More

April 29, 2024

ಭ್ರೂಣ ಲಿಂಗ ಪತ್ತೆ ಪ್ರಕರಣ – ಮೈಸೂರಿನಲ್ಲಿ 17 ಮಂದಿ ವಿರುದ್ಧ ಎಫ್‌ಐಆರ್‌ ದಾಖಲು

ಮೈಸೂರು : ಉದಯಗಿರಿ ಪೊಲೀಸ್‌ ಠಾಣೆಯಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಗರ್ಭಪಾತ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಮಂದಿ… Read More

April 29, 2024

ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

ಬೆಂಗಳೂರು: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್​ (76) ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಮೂತ್ರಕೋಶ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಅವರು… Read More

April 29, 2024

ಇಬ್ಬರು ಮಕ್ಕಳು ಬಿಸಿಲ ಝಳಕ್ಕೆ ಬಲಿ

ರಾಯಚೂರು : ರಾಯಚೂರಿನ ತಾಪಮಾನ ಹೆಚ್ಚಳದಿಂದ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ನಡೆದಿದೆ. ಜನರು ಬಿಸಿ ಗಾಳಿಯಿಂದಾಗಿ ತತ್ತರಿಸುತ್ತಿದ್ದು ,… Read More

April 28, 2024

ರಾಜ್ಯದಲ್ಲಿ ಇಂದಿನಿಂದ ನರೇಂದ್ರ ಮೋದಿ ಪ್ರಚಾರ

ಬೆಂಗಳೂರು : ರಾಜ್ಯದಲ್ಲಿ 14 ಕ್ಷೇತ್ರಗಳ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಮುಕ್ತಾಯವಾಗಿದ್ದು , ಮೇ 7ರಂದು ಉತ್ತರ… Read More

April 28, 2024

ಮೈಸೂರು : ಇವಿಎಂ, ವಿವಿ ಪ್ಯಾಟ್ ಗಳಿಗೆ ಬಿಗಿ ಭದ್ರತೆ: ಸ್ಟ್ರಾಂಗ್ ರೂಂ ಪರಿಶೀಲಿಸಿದ ಡಿಸಿ ಡಾ ರಾಜೇಂದ್ರ

ಮೈಸೂರು: ಮೈಸೂರು ಕೊಡುಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ ಸಿಬ್ಬಂದಿ ಇವಿಎಂ,… Read More

April 27, 2024