ಮೈಸೂರಿನ ಶಕ್ತಿಧಾಮದ ಮಕ್ಕಳ ಪಾಲನೆ ಪೋಷಣೆ ಜವಾಬ್ದಾರಿ ಹೊರಲು ತಮಿಳು ನಟ ವಿಶಾಲ್ ಸಿದ್ಧರಾಗಿದ್ದಾರೆ.
ದಿ. ನಟ ಪುನೀತ್ ರಾಜ್ಕುಮಾರ್ ಮನೆಗೆ ಬುಧವಾರ ಆಗಮಿಸಿದ ವಿಶಾಲ್, ಪುನೀತ್ ಪತ್ನಿ ಅಶ್ವಿನಿ ಬಳಿ ಈ ಬಗ್ಗೆ ಮನವಿ ಮಾಡಿಕೊಂಡರು.
ನಿನ್ನೆ ಶಿವರಾಜ್ ಕುಮಾರ್ ಜೊತೆ ಮಾತನಾಡಿದ್ದ ವಿಶಾಲ್ ಇಂದು ಪುನೀತ್ ಮನೆಗೆ ಆಗಮಿಸಿ ಶಕ್ತಿಧಾಮದ ಮಕ್ಕಳ ಜವಾಬ್ದಾರಿ ಬಗ್ಗೆ ಅಶ್ವಿನಿ ಜೊತೆ ಪ್ರಸ್ತಾಪ ಮಾಡಿ ಅನುಮತಿ ಕೇಳಿದರು. ಕೆಲವೇ ದಿನಗಳಲ್ಲಿ ಈ ಬಗ್ಗೆ ತಿಳಿಸುವುದಾಗಿ ಅಶ್ವಿನಿ ಭರವಸೆ ನೀಡಿದರು.
1,800 ವಿದ್ಯಾರ್ಥಿಗಳ ಜವಾಬ್ದಾರಿ ಬಗ್ಗೆ ವಿಶಾಲ್, ಅಶ್ವಿನಿ ಅವರೊಂದಿಗೆ ಮಾತುಕತೆ ನಡೆಸಿದ ಬಳಿಕ ಶಿವಣ್ಣ ಬಳಿಯೂ ಈ ಬಗ್ಗೆ ಚರ್ಚೆ ನಡೆಸಿದರು. ಇದಕ್ಕೂ ಮೊದಲು ಅಪ್ಪು ಸಮಾಧಿ ಬಳಿ ತೆರಳಿದ ವಿಶಾಲ್ ಪೂಜೆ ಸಲ್ಲಿಸಿದರು.
ಪುನೀತ್ನನ್ನು ನೆನಪಿಸಿಕೊಂಡಾಗ ನನ್ನ ಮನಸ್ಸಿಗೆ ಒಂದು ವಿಷಯ ಬಂತು. ನಿನ್ನ ಗೆಳೆಯನಾಗಿ ಮಾತು ಕೊಡುತ್ತಿದ್ದೇನೆ. ಆ 1,800 ಮಕ್ಕಳಿಗೆ ನಾನು ವಿದ್ಯಾಭ್ಯಾಸ ಕೊಡಿಸುತ್ತೇನೆ. ಮುಂದಿನ ವರ್ಷದಿಂದ ನಿಮ್ಮ ಫೌಂಡೇಷನ್, ನಿಮ್ಮ ಸಮಾಜಸೇವೆಯನ್ನು ನಾನು ಮುಂದುವರೆಸುತ್ತೇನೆ ಅಂತ ಭರವಸೆ ನೀಡಿದ್ದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು