ಶಕ್ತಿಧಾಮದ ಮಕ್ಕಳ ಜವಾಬ್ದಾರಿ ಹೊರಲು ಸಿದ್ಧರಾದ ವಿಶಾಲ್ – ಅಪ್ಪು ಪತ್ನಿ ಅಶ್ವಿನಿ ಬಳಿ ಮನವಿ

Team Newsnap
1 Min Read

ಮೈಸೂರಿನ ಶಕ್ತಿಧಾಮದ ಮಕ್ಕಳ ಪಾಲನೆ ಪೋಷಣೆ ಜವಾಬ್ದಾರಿ ಹೊರಲು ತಮಿಳು ನಟ ವಿಶಾಲ್ ಸಿದ್ಧರಾಗಿದ್ದಾರೆ.

ದಿ. ನಟ ಪುನೀತ್ ರಾಜ್‍ಕುಮಾರ್ ಮನೆಗೆ ಬುಧವಾರ ಆಗಮಿಸಿದ ವಿಶಾಲ್, ಪುನೀತ್ ಪತ್ನಿ ಅಶ್ವಿನಿ ಬಳಿ ಈ ಬಗ್ಗೆ ಮನವಿ ಮಾಡಿಕೊಂಡರು.

ನಿನ್ನೆ ಶಿವರಾಜ್ ಕುಮಾರ್ ಜೊತೆ ಮಾತನಾಡಿದ್ದ ವಿಶಾಲ್ ಇಂದು ಪುನೀತ್ ಮನೆಗೆ ಆಗಮಿಸಿ ಶಕ್ತಿಧಾಮದ ಮಕ್ಕಳ ಜವಾಬ್ದಾರಿ ಬಗ್ಗೆ ಅಶ್ವಿನಿ ಜೊತೆ ಪ್ರಸ್ತಾಪ ಮಾಡಿ ಅನುಮತಿ ಕೇಳಿದರು. ಕೆಲವೇ ದಿನಗಳಲ್ಲಿ ಈ ಬಗ್ಗೆ ತಿಳಿಸುವುದಾಗಿ ಅಶ್ವಿನಿ ಭರವಸೆ ನೀಡಿದರು.

1,800 ವಿದ್ಯಾರ್ಥಿಗಳ ಜವಾಬ್ದಾರಿ ಬಗ್ಗೆ ವಿಶಾಲ್, ಅಶ್ವಿನಿ ಅವರೊಂದಿಗೆ ಮಾತುಕತೆ ನಡೆಸಿದ ಬಳಿಕ ಶಿವಣ್ಣ ಬಳಿಯೂ ಈ ಬಗ್ಗೆ ಚರ್ಚೆ ನಡೆಸಿದರು. ಇದಕ್ಕೂ ಮೊದಲು ಅಪ್ಪು ಸಮಾಧಿ ಬಳಿ ತೆರಳಿದ ವಿಶಾಲ್ ಪೂಜೆ ಸಲ್ಲಿಸಿದರು.

ಪುನೀತ್‍ನನ್ನು ನೆನಪಿಸಿಕೊಂಡಾಗ ನನ್ನ ಮನಸ್ಸಿಗೆ ಒಂದು ವಿಷಯ ಬಂತು. ನಿನ್ನ ಗೆಳೆಯನಾಗಿ ಮಾತು ಕೊಡುತ್ತಿದ್ದೇನೆ. ಆ 1,800 ಮಕ್ಕಳಿಗೆ ನಾನು ವಿದ್ಯಾಭ್ಯಾಸ ಕೊಡಿಸುತ್ತೇನೆ. ಮುಂದಿನ ವರ್ಷದಿಂದ ನಿಮ್ಮ ಫೌಂಡೇಷನ್, ನಿಮ್ಮ ಸಮಾಜಸೇವೆಯನ್ನು ನಾನು ಮುಂದುವರೆಸುತ್ತೇನೆ ಅಂತ ಭರವಸೆ ನೀಡಿದ್ದರು.

Share This Article
Leave a comment