ಕಾರ್ಯಕಾರಿಣಿ ಸಭೆ ಬಳಿಕ ಸಂಪುಟ ಫೈನಲ್ ಸರ್ಜರಿ : ಸಿಎಂ

Team Newsnap
1 Min Read
Bommai sets stage for JDS-BJP alliance during 'Loka' elections 'ಲೋಕಾ 'ಚುನಾವಣೆ ವೇಳೆಗೆ ಜೆಡಿಎಸ್ - ಬಿಜೆಪಿ ಮೈತ್ರಿಗೆ ವೇದಿಕೆ ಸಜ್ಜು - ಬೊಮ್ಮಾಯಿ

ಕಾರ್ಯಕಾರಿಣಿ ಸಭೆ ಬಳಿಕ ಸಂಪುಟ ಫೈನಲ್ ಸರ್ಜರಿ ಫೈನಲ್ ಆಗಲಿದೆ. ಈ ಬಾರಿ ಜಲಶಕ್ತಿ, ಇಂಧನ, ಪರಿಸರ, ಹಣಕಾಸು, ರಕ್ಷಣಾ ಸಚಿವರನ್ನು ಭೇಟಿ ಮಾಡಿದ್ದೇವೆ. ಈ ವೇಳೆ ಸಕಾರಾತ್ಮಕ ಸ್ಪಂದನೆ ದೊರೆತಿದೆ. ದೆಹಲಿ ಭೇಟಿಯೂ ಕೂಡ ಫಲಪ್ರದವಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಗುರುವಾರ ತಿಳಿಸಿದರು.

ನವದೆಹಲಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಬೊಮ್ಮಯಿ ಅವರು, BJP ಸಂಸ್ಥಾಪನಾ ದಿನಾಚರಣೆಯಲ್ಲಿ ಭಾಗವಹಿಸಲು ನನಗೆ ಅವಕಾಶ ದೊರಕಿರುವುದು ಸಂತೋಷ ತಂದಿದೆ ಎಂದರು. 

ಜಲಶಕ್ತಿ, ಇಂಧನ, ಪರಿಸರ, ಹಣಕಾಸು, ರಕ್ಷಣಾ ಸಚಿವರನ್ನು ಭೇಟಿ ಮಾಡಿದ್ದೇವೆ. ಈ ವೇಳೆ ಸಕಾರಾತ್ಮಕ ಸ್ಪಂದನೆ ದೊರೆತಿದೆ. ದೆಹಲಿ ಭೇಟಿಯೂ ಕೂಡ ಫಲಪ್ರದವಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಗುರುವಾರ ತಿಳಿಸಿದರು.

ನವದೆಹಲಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿಎ ಬೊಮ್ಮಯಿ ಅವರು, BJP ಸಂಸ್ಥಾಪನಾ ದಿನಾಚರಣೆಯಲ್ಲಿ ಭಾಗವಹಿಸಲು ನನಗೆ ಅವಕಾಶ ದೊರಕಿರುವುದು ಸಂತೋಷ ತಂದಿದೆ ಎಂದರು. 

ಏಪ್ರಿಲ್ 16 ಮತ್ತು 17 ರಂದು BJP ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಲಿದೆ. ಚುನಾವಣೆಗೆ ಯಾವ ರೀತಿಯಲ್ಲಿ ಪೂರ್ವಭಾವಿ ತಯಾರಿಗಳನ್ನು ಮಾಡಿಕೊಳ್ಳಬೇಕೆಂದು ಪಕ್ಷಕ್ಕೆ ಹಾಗೂ ನನಗೆ BJP ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೂಚನೆಯನ್ನು ನೀಡಿದ್ದಾರೆ ಎಂದು ತಿಳಿಸಿದರು.

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸ್ಥೂಲವಾಗಿ ಚರ್ಚೆಯಾಗಿದೆ. ವರಿಷ್ಠರು ಎಲ್ಲಾ ಮಾಹಿತಿಯನ್ನು ಪಡೆದುಕೊಂಡಿದ್ದಾರೆ. ಕಾರ್ಯಕಾರಿಣಿ ಸಭೆಗೆ ಬಂದ ಸಂದರ್ಭದಲ್ಲಿ ಮಿಕ್ಕ ವಿಚಾರಗಳನ್ನು ಮಾತನಾಡುವುದಾಗಿ ತಿಳಿಸಿದ್ದಾರೆ. ಇಲ್ಲಿಯ ವರಿಷ್ಠರು, ನಾಯಕರು, ಸಂಘಟನಾ ಕಾರ್ಯದರ್ಶಿಗಳೊಂದಿಗೆ ಚರ್ಚೆ ಮಾಡಿ ತೀರ್ಮಾನ ಮಾಡೋಣ ಎಂದು ತಿಳಿಸಿದ್ದಾರೆ ಎಂದರು.

Share This Article
Leave a comment