ಸಂಪುಟ ಪುನಾರಚನೆಯು ವರಿಷ್ಠರ ಗಮನದಲ್ಲಿ ಇದೆ. ಪುನಾರಚನೆ ಯಾವಾಗ ಎಂಬುದನ್ನು ವರಿಷ್ಠರು ನಿರ್ಧರಿಸುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ ಅವರು, ಆಕಾಂಕ್ಷಿಗಳು ಸಚಿವ ಸ್ಥಾನ ಕೇಳುವುದು ಸಹಜ. ಈ ಬಗ್ಗೆ ವರಿಷ್ಠರು ಯಾವಾಗ ಕರೆಯುತ್ತಾರೋ ಆಗ ಭೇಟಿ ಮಾಡಿ ತೀರ್ಮಾನಿಸುತ್ತೇನೆ ಎಂದು ಹೇಳಿದರು.
ನಿಗಮ ಮಂಡಳಿ ವಿಚಾರವಾಗಿ ಮಾತನಾಡಿ, ಪಕ್ಷದ ವೇದಿಕೆಯಲ್ಲಿ ರಾಜ್ಯಾಧ್ಯಕ್ಷರು ಜೊತೆ ಚರ್ಚೆ ಮಾಡಿ ಹೇಳುತ್ತಾರೆ. ಆ ನಂತರ ನಿಗಮ ಮಂಡಳಿ ನೇಮಕ ಆಗುತ್ತದೆ. ಈ ಬಗ್ಗೆ ನನ್ನ ಮುಂದೆ ಯಾವುದೇ ಪ್ರಸ್ತಾಪವಿಲ್ಲ ಎಂದರು
ಬೆಳಗಾವಿ ರಹಸ್ಯ ಸಭೆ ವಿಚಾರವಾಗಿ ಯಾವುದೇ ಗೊಂದಲ ಇಲ್ಲ. ಅದು ರಹಸ್ಯ ಸಭೆ ಅಂತಾ ನೀವು ಹೇಳುತ್ತೀರಾ. ಆದರೆ ಯಾರಾದರೂ ಸೇರಿದರೆ ಅದು ರಹಸ್ಯ ಸಭೆ ಆಗುತ್ತಾ? ಕಾಂಗ್ರೆಸ್ನಲ್ಲೂ ಹಲವು ಸಭೆಗಳು ಆಗುತ್ತವೆ. ಅವುಗಳನ್ನು ರಹಸ್ಯ ಸಭೆ ಅಂತಾ ಹೇಳುತ್ತೀರಾ ಎಂದು ಪ್ರಶ್ನಿಸಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು