ರಾಷ್ಟ್ರೀಯ

ಇಂದು ಉತ್ತರ ಪ್ರದೇಶದ 3 ನೇ ಹಂತ- ಪಂಜಾಬ್ ನಲ್ಲಿ ಒಂದೇ ಹಂತದಲ್ಲಿ ಮತದಾನ ಆರಂಭ

ಉತ್ತರ ಪ್ರದೇಶ ಮತ್ತು ಪಂಜಾಬ್‌ನಲ್ಲಿ ಇಂದು ಮತದಾನ ದಿನ

ಪಂಜಾಬ್‌ನಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಉತ್ತರ ಪ್ರದೇಶದಲ್ಲಿ 3ನೇ ಹಂತದ ಮತದಾನ ಶುರುವಾಗಿದೆ.

ಇಂದಿನ ಮತದಾನದಲ್ಲಿ ಅಖಿಲೇಶ್ ಸೇರಿದಂತೆ ಹಲವಾರು ಘಟಾನುಘಟಿಗಳು ಭವಿಷ್ಯ ನಿರ್ಧರಿಸಲಿದೆ.

59 ಕ್ಷೇತ್ರ 627 ಅಭ್ಯರ್ಥಿಗಳು.. 2.15 ಕೋಟಿ ಮತದಾರರು
ಉತ್ತರಪ್ರದೇಶ ವಿಧಾನಸಭಾ ಚುನಾವಣೆಯ 3ನೇ ಹಂತದ ಮತದಾನ ಪ್ರಕ್ರಿಯೆ ಶುರುವಾಗಿದೆ.

16 ಜಿಲ್ಲೆಗಳ 59 ಕ್ಷೇತ್ರಗಳಲ್ಲಿ ಬೆಳಗ್ಗೆ 7ರಿಂದ ಮತದಾನ ಪ್ರಕ್ರಿಯೆ ಆರಂಭವಾಗಿದೆ, 2 ಕೋಟಿ 15 ಲಕ್ಷ ಮತದಾರರು 627 ಅಭ್ಯರ್ಥಿಗಳ ಹಣೆಬರಹ ಬರೆಯುತ್ತಿದ್ದಾರೆ.

8 ಜಿಲ್ಲೆಗಳಲ್ಲಿ ಯಾದವ-ಮುಸ್ಲಿಂ ಪ್ರಾಬಲ್ಯ 16 ಜಿಲ್ಲೆಗಳ ಪೈಕಿ 8ರಲ್ಲಿ ಮುಸ್ಲಿಂ ಹಾಗೂ ಯಾದವ ಮತಗಳೇ ನಿರ್ಣಾಯಕ.

59 ಕ್ಷೇತ್ರಗಳ ಪೈಕಿ 29ರಲ್ಲಿ ಯಾದವ-ಮುಸ್ಲಿಂ ಜನಸಂಖ್ಯೆ ಶೇ.40ರಷ್ಟಿದೆ. ಹೀಗಾಗಿ, ಈ ಹಂತದಲ್ಲಿ ಎಸ್ಪಿ ಮುನ್ನಡೆ ಪಡೆಯುತ್ತದೆ ಎಂಬುದು ಸಮಾಜವಾದಿ ಪಕ್ಷದ ವಿಶ್ವಾಸ.

59 ಕ್ಷೇತ್ರಗಳಲ್ಲಿ ಓಬಿಸಿ ಹಾಗೂ ಮೇಲ್ವರ್ಗದ ಬ್ರಾಹ್ಮಣ ಸಮುದಾಯದ ಮತಗಳು ಹೆಚ್ಚಿನ ಸಂಖ್ಯೆಯಲ್ಲಿವೆ. ಲೋಧ, ಕಾಯಸ್ಥ, ದಲಿತ ಜಾಟ್ ಮತಗಳು ಕೂಡ ನಿರ್ಣಾಯಕವಾಗಿವೆ.

ಈ ಮತಗಳ ಮೇಲೆ ಬಿಜೆಪಿ ಕಣ್ಣಿಟ್ಟಿದೆ. ಈ ಸಮುದಾಯಗಳು ತಮ್ಮ ಪಕ್ಷದ ಪರ ಮತ ಚಲಾಯಿಸುತ್ತಾರೆ ಎಂಬ ನಂಬಿಕೆ ಬಿಜೆಪಿ ನಾಯಕರದ್ದು.

ಪಂಜಾಬ್‌ನಲ್ಲಿ ಇಂದು ಒಂದೇ ಹಂತದಲ್ಲಿ ಮತದಾನ
ಪಂಚರಾಜ್ಯ ಚುನಾವಣೆಗಳ ಪೈಕಿ ಉತ್ತರ ಪ್ರದೇಶ ಬಿಟ್ಟರೆ ಹೆಚ್ಚು ಗಮನ ಸೆಳೆದಿರುವ ಮತ್ತೊಂದು ರಾಜ್ಯ ಪಂಜಾಬ್.

ಇಲ್ಲಿ ಇಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಎಲ್ಲಾ 117 ಕ್ಷೇತ್ರಗಳಲ್ಲಿ 1,304 ಅಭ್ಯರ್ಥಿಗಳ ಭವಿಷ್ಯ ಇಂದು ಮತಯಂತ್ರ ಸೇರಲಿದೆ. 2.14 ಕೋಟಿ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ.

Team Newsnap
Leave a Comment
Share
Published by
Team Newsnap

Recent Posts

ಕರ್ತವ್ಯಕ್ಕೆ ತೆರಳುತ್ತಿದ್ದ ಚುನಾವಣಾ ಸಿಬ್ಬಂದಿ ಹೃದಯಾಘಾತದಿಂದ ಸಾವು

ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಎಂಬುವರು… Read More

May 6, 2024

ಪೋಷಕರ ಕಣ್ಣೆದುರೇ ಮಕ್ಕಳು ನೀರುಪಾಲು

ಮಂಗಳೂರು : ಬಂಟ್ವಾಳದ (Bantwal) ನಾವೂರಿನಲ್ಲಿ ಪೋಷಕರ ಎದುರೇ ಇಬ್ಬರು ಮಕ್ಕಳು ನೀರುಪಾಲಾದ ಘಟನೆ ನಡೆದಿದೆ. ಅನ್ಸಾರ್ ಅವರ ಪುತ್ರಿ… Read More

May 6, 2024

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 6, 2024

ಹಾಸನ ಅಶ್ಲೀಲ ವಿಡಿಯೋಗಳನ್ನು ಹಂಚುವುದು ಶಿಕ್ಷಾರ್ಹ ಅಪರಾಧ: ಎಸ್‌ಐಟಿ

ಬೆಂಗಳೂರು : ವಿಶೇಷ ತನಿಖಾ ತಂಡ (SIT) ಮುಖ್ಯಸ್ಥ ಬಿ.ಕೆ.ಸಿಂಗ್ , ಹಾಸನದ ಅಶ್ಲೀಲ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ… Read More

May 6, 2024

ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು

ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More

May 5, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More

May 5, 2024