ಇತ್ತೀಚಿನ ದಿನಗಳಲ್ಲಿ ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹಿಂದೂ ದೇವಾಲಯಗಳ ತೆರವು ಸೂಚನೆ ವಿಚಾರ ಸಾಕಷ್ಟು ವಿವಾದಕ್ಕೆ ಕಾರಣವಾಗಿರುವ ಸಮಯದಲ್ಲೇ ಸಾರ್ವಜನಿಕರ ಪ್ರತಿಭಟನೆಗೆ ಬೆಚ್ಚಿರುವ ಸ್ಥಳೀಯ ಆಡಳಿತವು ತೆರವು ಕಾರ್ಯಾಚರಣೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸ್ಥಗಿತಗೊಳಿಸಿದೆ.
ಈ ಮಧ್ಯೆ ಹಿಂದೂಗಳನ್ನು ಜಾಗೃತಗೊಳಿಸುವ ಉದ್ದೇಶದಿಂದ ಹಿಂದೂ ಜಾಗರಣ ವೇದಿಕೆಯ ದಕ್ಷಿಣ ಭಾರತದ ಕ್ಷೇತ್ರ ಸಂಚಾಲಕ ಜಗದೀಶ್ ಕಾರಂತ್ ಸೆಪ್ಟೆಂಬರ್ ೧೬ರಂದು ಮೈಸೂರಿಗೆ ಭೇಟಿ ನೀಡಲಿದ್ದಾರೆ.
ಮೇಲಧಿಕಾರಿಗಳ ಸೂಚನೆ ಹಿನ್ನೆಲೆಯಲ್ಲಿ, ಮುಂದಿನ ಆದೇಶದವರೆಗೆ ಪಾಲಿಕೆ ಅಧಿಕಾರಿಗಳು ದೇಗುಲಗಳ ತೆರವು ಕಾರ್ಯವನ್ನು ನಿಲ್ಲಿಸಿದ್ದಾರೆ. ಇದರಿಂದ ತೆರವು ಪಟ್ಟಿಯಲ್ಲಿರುವ ೯೩ ಹಿಂದೂ ಧಾರ್ಮಿಕ ಕೇಂದ್ರಗಳ ಪ್ರಮುಖರು ನಿಟ್ಟುಸಿರುಬಿಡುವಂತಾಗಿದೆ. ದೇವಾಲಯಗಳ ಉಳಿವಿಗಾಗಿ ಹಿಂದೂ ಸಂಘಟನೆಗಳು ಜಾಗೃತಗೊಂಡಿವೆ.
ಜಿಲ್ಲಾಡಳಿತದ ವಿರುದ್ಧ ಬೃಹತ್ ಪ್ರತಿಭಟನೆ ಮಾಡಲು ಹಿಂದೂ ಜಾಗರಣ ವೇದಿಕೆ ಸಿದ್ಧತೆ ನಡೆಸಿದೆ. ಮೈಸೂರಿನ ಅರಮನೆ ಕೋಟೆ ಆಂಜನೇಯ ದೇವಾಲಯದ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆಗೆ ಮುಂದಾಗಿದೆ. ಈ ಹಿನ್ನೆಲೆಯಲ್ಲೇ ಜಗದೀಶ್ ಕಾರಂತ್ ೧೬ರಂದು ನಗರಕ್ಕೆ ಬಂದು ಹಿಂದೂಗಳನ್ನುದ್ದೇಶಿಸಿ ಭಾಷಣ ಮಾಡುವರೆಂದು ಆಯೋಜಕರು ತಿಳಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ