ಪೋಲಿ ಹುಡುಗರ ಜೊತೆ ಸೇರಿ ಮಗ ಹಾಳಾಗುತ್ತಾನೆಂದು ಮನೆಯಲ್ಲಿ ಇಟ್ಟು ಕೊಂಡರೆ, ಗೃಹಬಂಧನದಿಂದ ತಪ್ಪಿಸಿಕೊಂಡ ಆ ಮಗ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರಿನ ಜೆ ಪಿ ನಗರದಲ್ಲಿ ಜರುಗಿದೆ.
ಬಯೋಡೆಟಾ ಕಾಪಿ ತರುತ್ತೇನೆ ಎಂದು ಮನೆಯಿಂದ ಹೊರಟ ಯುವಕರೊಬ್ಬರು ತಮ್ಮದೇ ಮತ್ತೊಂದು ಮನೆಯಲ್ಲಿ ಯೋಗೇಶ್ (20) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಜೆಪಿ ನಗರದ ನಿವಾಸಿ ಯೋಗೇಶ್ ಪಿಯುಸಿ ಅರ್ಧಕ್ಕೆ ನಿಲ್ಲಿಸಿದ್ದನು. ಕೆಲವು ಪೋಲಿ ಯುವಕರ ಸಹವಾಸ ಮಾಡಿದ್ದನು.
ನಂಜನಗೂಡು ಠಾಣೆಯಲ್ಲಿ ಯಾವುದೋ ಹಳೆ ಪ್ರಕರಣ ಬಾಕಿಯಿತ್ತು. ಇದರಿಂದ ಮನೆಯಿಂದ ಹೊರಹೋಗಲು ಪೋಷಕರು ಬಿಡುತ್ತಿರಲಿಲ್ಲ.
ಬುಧವಾರ ಮಧ್ಯಾಹ್ನ ಬಯೋಡೆಟಾ ತರುತ್ತೇನೆ ಎಂದು ಮನೆಯಿಂದ ಹೊರಟ ಯುವಕ ಸಂಜೆಯಾದರೂ ಮನೆಗೆ ಹಿಂದಿರುಗದೇ, ತಮ್ಮದೇ ಇನ್ನೊಂದು ಮನೆಯಲ್ಲಿ ನೇಣು ಬಿಗಿದುಕೊಂಡಿದ್ದಾನೆ. ಮೈಸೂರಿನ ವಿದ್ಯಾರಣ್ಯಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು