ವಿಪಕ್ಷ ನಾಯಕ ಸಿದ್ದರಾಮಯ್ಯ ಜೆಡಿಎಸ್ನ ಕೆಲ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂಬ ಹೇಳಿಕೆಗೆ, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿ ನಮ್ಮ ಪಕ್ಷಕ್ಕೂ ಕಾಂಗ್ರೆಸ್ ನ ಕೆಲ ಶಾಸಕರು ಅರ್ಜಿ ಹಾಕಿದ್ದಾರೆ ಎಂದು ಹೇಳಿದ್ದಾರೆ
ಸುದ್ದಿಗಾರರ ಜೊತೆ ಮಾತನಾಡಿದ ಹೆಚ್ಡಿಕೆ ನಮ್ಮ ಪಕ್ಷಕ್ಕೂ ಕಾಂಗ್ರೆಸ್ ಮತ್ತು ಬಿಜೆಪಿಯ ಕೆಲವರು ಅರ್ಜಿ ಹಾಕಿದ್ದಾರೆ ಎಂದಿದ್ದಾರೆ. ಆದರೆ ನಮ್ಮ ಜೊತೆ ಬರುವವರು ಸಣ್ಣ ಮುಖಂಡರು ಮಾತ್ರ ಎಂದು ವ್ಯಂಗ್ಯವಾಗಿ ಹೇಳಿದ್ದಾರೆ
ಬಿಜೆಪಿ, ಕಾಂಗ್ರೆಸ್ ಎರಡು ರಾಷ್ಟ್ರೀಯ ಪಕ್ಷಗಳ ನಾಯಕರು ಬೇರೆ ಪಕ್ಷಗಳಿಂದ ನಮ್ಮ ಪಕ್ಷಕ್ಕೆ ವಲಸೆ ಬರ್ತಿದ್ದಾರೆ ಎಂದು ಹೇಳ್ತಿದ್ದಾರೆ. ಅವರ ಪಟ್ಟಿಗಳನ್ನು ನಾವೂ ಇಟ್ಕೊಂಡಿದ್ದೇವೆ ಎಂದು ಬಹಿರಂಗವಾಗಿ ಹೇಳಿಕೆ ನೀಡ್ತಿದ್ದಾರೆ. ಇದರಲ್ಲಿ ನಮ್ಮ ಪಕ್ಷದವ್ರು ಇದ್ದಾರೆ ಎಂದಿದ್ದಾರೆ. ಆದರೆ ನಾನು ಈ ಎರಡು ಪಕ್ಷಗಳಿಗೆ ಕೇಳ್ತೇನೆ, ನಿಮ್ಮ ಜೊತೆ ಬರೋಕೆ ರೆಡಿ ಆದವರು ಯಾರು ಎಂಬುದನ್ನು ಬಹಿರಂಗವಾಗಿ ಹೇಳಿ. ಇನ್ನು ಇವರ ಜೊತೆ ಯಾರು ಹೋಗ್ತಾರೆ ಎಂಬುದು ನಮಗೂ ಗೊತ್ತಿದೆ. ಇದರಿಂದ ನಮಗೇನು ಅಂತಾ ಗಾಬರಿಯಾಗುವ ಪ್ರಶ್ನೆಯಿಲ್ಲ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ