ಒಕ್ಕಲಿಗ ಸಮುದಾಯವನ್ನು ತುಳಿಯುವುದು ಮುಂದುವರೆದರೆ, ನಮ್ಮ ಹಕ್ಕಿನ ಮೀಸಲಾತಿ ನಿರಾಕರಿಸಿ ನಾವು ಪ್ರತ್ಯೇಕ ರಾಜ್ಯದ ಹೋರಾಟಕ್ಕೂ ಸೈ ಎಂದು ಆದಿಚುಂಚನಗಿರಿ ಮೈಸೂರು ಶಾಖಾಮಠದ ಸೋಮೇಶ್ವರನಾಥ ಸ್ವಾಮೀಜಿ ಪರೋಕ್ಷವಾಗಿ ಎಚ್ಚರಿಕೆ ನೀಡಿದರು.
ಒಕ್ಕಲಿಗರನ್ನು ತುಳಿಯುವುದು ಮುಂದುವರಿಸಿದರೆ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿರುವ ಜಿಲ್ಲೆಗಳನ್ನು ಸೇರಿಸಿ ಪ್ರತ್ಯೇಕ ರಾಜ್ಯವನ್ನು ಕೇಳಬೇಕಾದೀತು ಎಂದರು.
ಮೈಸೂರಿನ ಬೋಗಾದಿಯ ಆದಿಚುಂಚನಗಿರಿ ಶಾಖಾಮಠದಲ್ಲಿ ಭಾನುವಾರ ನಡೆದ ಸಭೆಯಲ್ಲಿ ಮಾತನಾಡಿದ ಶ್ರೀಗಳು, ಮೈಸೂರು, ಮಂಡ್ಯ, ಹಾಸನ, ಬೆಂಗಳೂರು ಒಳಗೊಂಡಂತೆ ಈ ಭಾಗದಲ್ಲಿ ಒಕ್ಕಲಿಗ ಸಮಾಜದವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಮೀಸಲಾತಿ ನಿರಾಕರಿಸಿದರೆ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿರುವ ಜಿಲ್ಲೆಗಳನ್ನು ಸೇರಿಸಿ ಪ್ರತ್ಯೇಕ ರಾಜ್ಯವನ್ನು ಕೇಳಬೇಕಾದೀತು. ಅದಕ್ಕೆ ಸರ್ಕಾರ ಅವಕಾಶ ನೀಡುವುದು ಬೇಡ ಸ್ವಾಮೀಜಿ ಎಚ್ಚರಿಸಿದರು.
ಒಕ್ಕಲಿಗ ಸಮಾಜದವರಿಂದಲೇ ಸರ್ಕಾರಕ್ಕೆ ಶೇ. 60 ರಷ್ಟು ಪಾಲು ಸಿಗುತ್ತಿದೆ. ಬೆಂಗಳೂರು ಮತ್ತು ಮೈಸೂರು ಬೆಳೆಯಲು ಒಕ್ಕಲಿಗ ಸಮಾಜದವರು ತಮ್ಮ ಜಮೀನು ನೀಡಿದ್ದಾರೆ. ಇಷ್ಟೆಲ್ಲಾ ಕೊಡುಗೆ ನೀಡಿದರೂ ಸಮುದಾಯಕ್ಕೆ ಶೇ. 4 ರಷ್ಟು ಮಾತ್ರ ಮೀಸಲಾತಿ ಸಿಗುತ್ತಿದೆ. ಈ ಅನ್ಯಾಯದ ಬಗ್ಗೆ ಸರ್ಕಾರ ಗಮನಹರಿಸಬೇಕು ಎಂದು ತಿಳಿಸಿದರು.
ಮೈಸೂರು ಮತ್ತು ಚಾಮರಾಜನಗರ ಒಕ್ಕಲಿಗರ ಸಂಘದ ಸಭೆಯಲ್ಲಿ ಜನಸಂಖ್ಯೆ ಆಧರಿಸಿ ಒಕ್ಕಲಿಗರಿಗೆ ಶೇ. 15 ರಷ್ಟು ಮೀಸಲಾತಿ ದೊರಕಿಸಿಕೊಡುವಂತೆ ಸರ್ಕಾರದ ಮೇಲೆ ಒತ್ತಡ ಹೇರಲು ಒಗ್ಗಟ್ಟಾಗಿ ಹೋರಾಟ ನಡೆಸುವ ನಿರ್ಣಯವನ್ನು ತೆಗೆದುಕೊಳ್ಳಲಾಯಿತು.
ಶಾಸಕರಾದ ಜಿ.ಟಿ.ದೇವೇಗೌಡ, ಶಾಸಕ ಎಲ್.ನಾಗೇಂದ್ರ, ಕಾಂಗ್ರೆಸ್ ಮುಖಂಡ ವಾಸು, ಹರೀಶ್ ಗೌಡ, ಪ್ರಶಾಂತ್ ಗೌಡ, ಬಿಜೆಪಿ ಮುಖಂಡ ಸಂದೇಶ್ ಸ್ವಾಮಿ, ಒಕ್ಕಲಿಗರ ಸಂಘದ ಅಧ್ಯಕ್ಷ ಜಿ.ಮಂಜು, ಗೌರವಾಧ್ಯಕ್ಷ ಜಿ.ಕುಮಾರಗೌಡ, ಪ್ರಧಾನ ಕಾರ್ಯದರ್ಶಿ ಬಿ.ಪಿ.ಬೋರೇಗೌಡ, ಮುಖಂಡರಾದ ಜಯರಾಂ, ನಂಜಯ್ಯ, ಚಂದ್ರೇಗೌಡ, ಮುಕುಂದ, ಸುರೇಶ್ ಉಪಸ್ಥಿತರಿದ್ದರು.
ಶ್ರೀರಂಗಪಟ್ಟಣ : ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಶ್ರೀರಂಗಪಟ್ಟಣ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ… Read More
ಆಂಧ್ರಪ್ರದೇಶ: ಹಿಂದಿನ ಸರ್ಕಾರ ತಿರುಪತಿ ಲಡ್ಡುವನ್ನು ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಯಾರಿಸಲಾಗಿದೆ ಎಂದು ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು… Read More
ಬೆಂಗಳೂರು: ಜೆಪಿ ಶಾಸಕ ಮುನಿರತ್ನವಿರುದ್ಧ ಮತ್ತೊಂದು ಕೇಸ್ ದಾಖಲಾಗಿದ್ದು , ಇದೀಗ ಶಾಸಕನ ವಿರುದ್ಧ ಅತ್ಯಾಚಾರ ಕೇಸ್ ದಾಖಲಾಗಿದೆ. ಶಾಸಕ… Read More
ಬೆಂಗಳೂರು: ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಬಿಎಂಟಿಸಿ ಬಸ್ ಅಪಘಾತಕ್ಕೆ ವಿಶೇಷ ಚೇತನ ಬಲಿಯಾಗಿರುವ ಘಟನೆ ನಡೆದಿದೆ. ಬಿಎಂಟಿಸಿ ಬಸ್ ಯಶವಂತಪುರದಿಂದ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,640 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಸೆ.19ರಿಂದ ಮ ಆಡಳಿತಾಧಿಕಾರಿ ಮತ್ತು ಜಿಟಿಟಿಸಿಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ನೀಡಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ… Read More
This website uses cookies.
Leave a Comment