Karnataka

ರಾಜ್ಯದಲ್ಲಿ ಮತ್ತೆ ವೀಕೆಂಡ್ ಕರ್ಫ್ಯೂ ಜಾರಿ : ನೈಟ್​ ಕರ್ಫ್ಯೂ ಮುಂದುವರಿಕೆ- ಆರ್.ಅಶೋಕ್​​

ಕೊರೊನಾ-ಒಮಿಕ್ರಾನ್ ನಿಯಂತ್ರಣಕ್ಕೆ ಮಂಗಳವಾರ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಿತು.

ತಜ್ಞರೊಂದಿಗೆ ಸಭೆ ನಡೆದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಕಂದಾಯ ಸಚಿವ ಆರ್ ಅಶೋಕ್​ ಮುಖ್ಯಾಂಶಗಳನ್ನು ವಿವರಿಸಿದರು.

ಬೆಂಗಳೂರಿನಲ್ಲಿ 9ನೇ ತರಗತಿವರೆಗೂ ಆಪ್​​ಲೈನ್​ ಕ್ಲಾಸ್​.. 10 ಮತ್ತು 12 ತರಗತಿ ಹೊರತು ಪಡಿಸಿ ಎಲ್ಲಾ ತರಗತಿಗಳು ಆಫ್​ ಲೈನ್​ ಕ್ಲಾಸ್​​ಗೆ ಮಾತ್ರ ಅವಕಾಶ ನೀಡಲಾಗಿದೆ. ನಾಳೆ10 ಗಂಟೆಯಿಂದ ನಿಯಮಗಳು ಜಾರಿ ಆಗಲಿದೆ ಎಂದರು

ಬೆಂಗಳೂರಿನಲ್ಲಿ ಈಗ 3048 ಸೋಂಕಿತರು 147 ಒಮಿಕ್ರಾನ್ ಪ್ರಕರಣಗಳು ಪತ್ತೆಯಾಗಿದೆ.

ಕೊರೊನಾ ಪ್ರಕರಣಗಳ ಸಂಖ್ಯೆ ಎರಡು ಮೂರು ದಿನಗಳಲ್ಲಿ ಡಬಲ್​ ಆಗುತ್ತಿದೆ. ಮಹಾರಾಷ್ಟ್ರದಲ್ಲಿ 10 ಸಾವಿರ ಕೇಸ್​ ಆಗಿದೆ. ಆದ್ದರಿಂದ ರಾಜ್ಯದಲ್ಲಿ, ಅದರಲ್ಲೂ ಬೆಂಗಳೂರಿನಲ್ಲಿ ನಿಯಮಗಳನ್ನು ಜಾರಿ ಮಾಡುವ ಅಗತ್ಯ ಇದೆ. ಆದ್ದರಿಂದ ಸಭೆಯಲ್ಲಿ ಚರ್ಚೆ ನಡೆಸಿ ಕೆಲವು ನಿರ್ಧಾರ ಮಾಡಿದ್ದೇವೆ ಎಂದು ಅಶೋಕ್ ತಿಳಿಸಿದರು.

1) ಬೆಂಗಳೂರಿಗೆ ಪ್ರತ್ಯೇಕ, ರಾಜ್ಯಕ್ಕೆ ಪ್ರತ್ಯೇಕ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಗುವುದು

2) ಬೆಂಗಳೂರಿನಲ್ಲಿ 9ನೇ ತರಗತಿವರೆಗೂ ಆಪ್​​ಲೈನ್​ ಕ್ಲಾಸ್​.. 10 ಮತ್ತು 12 ತರಗತಿ ಹೊರತು ಪಡಿಸಿ ಎಲ್ಲಾ ತರಗತಿಗಳು ಆಫ್​ ಲೈನ್​ ಕ್ಲಾಸ್​​ಗೆ ಮಾತ್ರ ಅವಕಾಶ ನೀಡಲಾಗಿದೆ. ನಾಳೆ 10 ಗಂಟೆಯಿಂದ ನಿಯಮಗಳು ಜಾರಿ ಆಗಲಿದೆ.

3) ಮುಂದಿನ ಎರಡು ವಾರ ಶಾಲೆಗಳು ಕ್ಲೋಸ್.. ಬೆಂಗಳೂರಿನಲ್ಲಿ 10 ಮತ್ತು 12 ತರಗತಿ ಮಾತ್ರ ಓಪನ್..

4) ರಾಜ್ಯದಲ್ಲಿ ಮುಂದಿನ ಎರಡು ವಾರ ಅಂದರೇ ಜನವರಿ 6ರ ಶುಕ್ರವಾರ ಸಂಜೆಯಿಂದ ವೀಕೆಂಡ್​​ ಕರ್ಫ್ಯೂ ಜಾರಿ ಆಗಲಿದೆ.. ಎರಡು ವಾರ ವೀಕೆಂಡ್ ಕರ್ಫ್ಯೂ, ನೈಟ್ ಕರ್ಫ್ಯೂ ಜಾರಿ ಆಗಲಿದೆ.

5) ಚಿತ್ರ ಮಂದಿರ, ಬಾರ್, ಮಾಲ್​, ಪಬ್​ಗಳಲ್ಲಿ 50:50 ಜನರಿಗೆ ಅಷ್ಟೇ ಅವಕಾಶ

6) ಮದುವೆ ಕಾರ್ಯಕ್ರಮದಲ್ಲಿ ಹೊರಾಂಗಣದಲ್ಲಿ 200 ಜನರಿಗೆ, ಒಳಾಂಗಣದಲ್ಲಿ 100 ಜನರಿಗೆ ಮಾತ್ರ ಅವಕಾಶ

7) ಬಸ್​, ಮೆಟ್ರೋದಲ್ಲಿ ನಿಂತು ಪ್ರಯಾಣ ಮಾಡುವಂತಿಲ್ಲ.. ಬಿಎಂಟಿಸಿ, ಮೆಟ್ರೋ ಪ್ರತ್ಯೇಕ ಮಾರ್ಗಸೂಚಿ ನೀಡುತ್ತೇವೆ.

8) ರಾಜ್ಯದಲ್ಲಿ ಪ್ರತಿಭಟನೆ ಹಾಗೂ ಜಾತ್ರೆ, ಮೆರವಣಿಗೆ, ಜನಜಂಗುಳಿ ಮಾಡುವಂತಿಲ್ಲ..

9) ಅತಿ ಹೆಚ್ಚು ಸೋಂಕಿತರು ಬಂದರೇ ಆಸ್ಪತ್ರೆಗಳ ಮೇಲೆ ಒತ್ತಡ ಆಗಲಿದೆ.. ಆದ್ದರಿಂದಲೇ ಸರ್ಕಾರ ಮುಂದಾಲೋಚನೆ ಮಾಡಿ ತೀರ್ಮಾನಗಳನ್ನು ಕೈಗೊಂಡಿದೆ ಎಂದು ಸ್ಪಷ್ಟಪಡಿಸಿದರು.

Team Newsnap
Leave a Comment
Share
Published by
Team Newsnap

Recent Posts

ಬಿಜೆಪಿ ಕಾರ್ಯಕರ್ತರಿಂದ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಯತ್ನ

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಲ್ಲಿಸಿದ್ದ… Read More

September 25, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಸೆಪ್ಟೆಂಬರ್ 25 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 70,600 ರೂಪಾಯಿ ದಾಖಲಾಗಿದೆ. 24… Read More

September 25, 2024

ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಮಾಜಿ ಸಂಸದ ಪ್ರತಾಪ್ ಸಿಂಹ ಗಣೇಶ ವಿಸರ್ಜನೆ ಶೋಭಾಯಾತ್ರೆ ಮೆರವಣಿಗೆ ವೇಳೆ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದಡಿ ಎಫ್‌ಐಆರ್ ದಾಖಲಾಗಿದೆ.… Read More

September 25, 2024

ಮೂಡಾ ಹಗರಣ : ಸಿಎಂ ವಿರುದ್ಧ ತನಿಖೆಗೆ ಕೋರ್ಟ್ ಅಸ್ತು – ಸಿದ್ದುಗೆ ಸಂಕಷ್ಟ

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ದೊಡ್ಡ ಸಂಕಷ್ಟ ಮುಂದೆ ಅಧೀನ ನ್ಯಾಯಾಲಯ ತೀರ್ಪು ಘೋಷಿಸಬಹುದು ಸುಪ್ರೀಂ ಕೋರ್ಟ್ ಬಾಗಿಲು ತಟ್ಟಲು… Read More

September 24, 2024

ಈ ಬಾರಿ ಮೈಸೂರಿನಲ್ಲಿ ಮಹಿಷ ಮಂಡಲೋತ್ಸವ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮತ್ತೆ ಮಹಿಷ ದಸರಾ ಕೂಗು ಕೇಳಿ ಬಂದಿದ್ದು ,ಈ ಬಾರಿಯೂ ಮಹಿಷ ದಸರಾ ವಿವಾದ… Read More

September 24, 2024

ದರ್ಶನ್ , ಪವಿತ್ರ ಜಾಮೀನು ಮುಂದೂಡಿಕೆ:ಮೂವರಿಗೆ ಜಾಮೀನು ಮಂಜೂರು

ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಮತ್ತು ಎ2 ಆರೋಪಿಯಾಗಿರುವ… Read More

September 23, 2024