Editorial

ಒಂದು ಓಟಿಗಾಗಿ ಎಷ್ಟೆಲ್ಲಾ ಆಟ…

ಆಟೋ ಡ್ರೈವರ್ ಆದ ನಾನು ಇತ್ತೀಚಿನ ಚುನಾವಣಾ ಸಮಯದಲ್ಲಿ ನನ್ನ 10 ವರ್ಷದ ಮಗನೊಂದಿಗೆ
ತರಕಾರಿ ತರಲು ಮಾರ್ಕೆಟ್ ಗೆ ಕಾಲು ನಡಿಗೆಯಲ್ಲಿ ಹೋಗಿದ್ದೆ……….

ಹಿಂದಿರುಗಿ ಬರುವಾಗ ಒಂದು ಪಕ್ಷದ
ಚುನಾವಣಾ ಪ್ರಚಾರ ಸಭೆ ನಡೆಯುತ್ತಿತ್ತು. ಜನರ ಗುಂಪು ನೋಡಿ ನನ್ನ ಮಗ ಅದನ್ನು ತೋರಿಸು ಎಂದು
ಹಠ ಹಿಡಿದ. ನಾನು ಗುಂಪಿನಲ್ಲಿ ಹೋಗಿ ಕುಳಿತೆ.

ಆ ಕ್ಷೇತ್ರದ ಅಭ್ಯರ್ಥಿ ಭಾಷಣ ಮಾಡುತ್ತಿದ್ದ.
” ಅಕ್ಕ ತಂಗಿಯರೇ, ಅಣ್ಣ ತಮ್ಮಂದಿರೇ, ನಾನು ನಿಮ್ಮ ಮನೆ ಮಗ, ಇಲ್ಲೇ ಹುಟ್ಟಿ ಬೆಳೆದ ಬಡ ರೈತನ ಮಗ,
ನನಗೆ ಗೊತ್ತು ಬಡತನ ಎಷ್ಟು ಕಷ್ಟ ಅಂತ. ಒಳ್ಳೆಯ ರಸ್ತೆ ಇಲ್ಲ, ಬೀದಿ ದೀಪ ಇಲ್ಲ, ಕುಡಿಯುವ ನೀರಿಲ್ಲ, ಎಲ್ಲೆಲ್ಲೂ ಗಲೀಜು,ಬೀದಿ ನಾಯಿ ಕಾಟ, ಕಾಮುಕರು, ರೌಡಿಗಳ ತೊಂದರೆ, ಲಂಚ ಅತಿಯಾಗಿದೆ. ಹಬ್ಬ ಉತ್ಸವಗಳನ್ನು ದೊಡ್ಡ ಪ್ರಮಾಣದಲ್ಲಿ ಆಯೋಜಿಸುತ್ತೇನೆ. ದೇವ ಮಂದಿರಗಳನ್ನು ಕಟ್ಟಿಸುತ್ತೇನೆ. ನೀವು ನನ್ನನ್ನು ಗೆಲ್ಲಿಸಿದರೆ 24 ಗಂಟೆಯು ನಾನು ನಿಮಗೆ ಸೇವೆ ಸಲ್ಲಿಸುತ್ತೇನೆ. ನಾನು ನಿಮ್ಮ ಸೇವಕ. ಈ ಎಲ್ಲಾ ಸಮಸ್ಯೆಗಳನ್ನು ಪರಿಹರಿಸುತ್ತೇನೆ. ನಿಮ್ಮ ಕಾಲಿಡಿದು ಕೇಳಿಕೊಳ್ಳುತ್ತೇನೆ ನನಗೇ ಮತ ನೀಡಿ.” ಎಂದು ಕಣ್ಣೀರು ಸುರಿಸಿದ.

ನನ್ನ ಮಗನ ಕಣ್ಣಿನಲ್ಲಿಯೂ ನೀರು. ಏಕೆಂದು ಕೇಳಿದೆ.
” ಅಪ್ಪಾ ಇವರು ಎಷ್ಟು ಒಳ್ಳೆಯವರು. ನಮ್ಮ ಕಷ್ಟ ಎಲ್ಲಾ ಪರಿಹರಿಸುತ್ತಾರಂತೆ. ನಿನ್ನ ಓಟು ಇವರಿಗೇ ಹಾಕಪ್ಪ “

ಅವನ ಮುಗ್ಧತೆಗೆ ಮನದಲ್ಲೇ ನಕ್ಕು ಆಗಲಿ
ಎಂದು ಹೇಳಿ ಮನೆ ಕಡೆ ಹೊರಟೆ. ಕರಳು ಚುರಕ್ ಎಂದಿತು. ಅವನು ಕೇಳದಿದ್ದರೂ ನಾನೇ ಐಸ್ ಕ್ರೀಮ್
ಕೊಡಿಸಿದೆ. ತಿನ್ನುತ್ತಾ ಬರುತಿರುವಾಗ ಸ್ವಲ್ಪ ದೂರದ ಮ್ಯೆದಾನದಲ್ಲಿ ಮತ್ತೊಂದು ಪಕ್ಷದ ಸಭೆ ನಡೆಯುತ್ತಿತ್ತು.
ಅದಕ್ಕೂ ಹಠ ಮಾಡಿದ. ಹೋಗಲಿ, ಹೇಗಿದ್ದರೂ ಭಾನುವಾರ ಪರವಾಗಿಲ್ಲ ಎಂದು ಅಲ್ಲಿಗೂ ಕರೆದೊಯ್ದೆ.

ಅಲ್ಲಿನ ಅಭ್ಯರ್ಥಿಯೂ ಮಾತನಾಡುತ್ತಿದ್ದ. “ಮಹನೀಯರೆ, ಮಹಿಳೆಯರೆ, ಹುಟ್ಟಿನಿಂದಲೇ ಸಮಾಜ ಸೇವೆಯಲ್ಲಿ ತೊಡಗಿಸಿ ಕೊಂಡಿರುವ ನನಗೆ ನಿಮ್ಮ ಸೇವೆಯನ್ನು ಹೆಚ್ಚಿಗೆ ಮಾಡಲು ಚುನಾವಣೆಗೆ ನಿಂತಿರುವೆ. ನಾನೇನಾದ್ರು ಆಯ್ಕೆಯಾದರೆ ನಿಮ್ಮ ಮನೆಬಾಗಿಲಿಗೆ ಉಚಿತ ಅಕ್ಕಿ, ರಾಗಿ, ಜೋಳ, ಎಣ್ಣೆ, ಬಟ್ಟೆ, ತಾಳಿ, ಟಿವಿ,
ಲ್ಯಾಪ್ ಟಾಪ್ ಇನ್ನೂ ಎಲ್ಲಾ ಕೊಡುತ್ತೇನೆ. ನಿಮಗೆ ಆರೋಗ್ಯ, ನಿಮ್ಮ ಮಕ್ಕಳಿಗೆ ಉಚಿತ ಶಿಕ್ಷಣ, ವೃದ್ಧರಿಗೆ
ಪಿಂಚಣಿ ಎಲ್ಲಾ ಕೊಡಿಸುತ್ತೇನೆ. ದಯವಿಟ್ಟು ನಿಮ್ಮ ಅಮೂಲ್ಯ ಓಟು ನನಗೇ ಕೊಡಿ.”

ಜನರ ಜೋರು ಚಪ್ಪಾಳೆ. ನಡುವೆ ಮಗನನ್ನು ನೋಡುತ್ತೇನೆ. ಅವನು ಮತ್ತೆ ಕಣ್ಣೀರು.
“ಅಪ್ಪಾ ಇವರು ಇನ್ನೂ ಒಳ್ಳೆಯವರು. ಎಲ್ಲಾ ಉಚಿತ ಕೊಡುತ್ತಾರೆ. ನಿನ್ನ ಓಟು ಇವರಿಗೇ ಕೊಡು”

ಆಯ್ತು ಮಗ ಎಂದು ಹೇಳಿ ಮನೆಗೆ ಬಂದೆವು.
ರಾತ್ರಿ ಮಲಗಿರುವಾಗ ಕೇಳಿದ,
” ಅಪ್ಪಾ ಇಷ್ಟೊಂದು ಒಳ್ಳೆಯ ಜನ ಚುನಾವಣೆಗೆ ನಿಲ್ಲುವಾಗ ನೀನ್ಯಾಕೆ ಯಾವಾಗಲೂ ರಾಜಕಾರಣಿಗಳನ್ನು ಬಯ್ಯುತ್ತೀಯ. ಪಾಪ ಅವರು ಒಳ್ಳೆಯವರು. ನೀನೇ ಸರಿಯಿಲ್ಲ. “ಎಂದ.

” ಮಗನೇ ನನಗೆ ಸುಮಾರು 50 ವರ್ಷ ಸಮೀಪಿಸುತ್ತಿದೆ. ನಾನು 20 ರಿಂದ 25 ಚುನಾವಣೆಗಳನ್ನು
ನೋಡಿದ್ದೇನೆ. ಎಲ್ಲಾ ಅಭ್ಯರ್ಥಿಗಳು, ಪಕ್ಷಗಳೂ ಹೀಗೇ ಹೇಳುತ್ತವೆ. ಚುನಾವಣೆ ಮುಗಿದು ಗೆದ್ದಮೇಲೆ
ನಾವು ಅವರನ್ನು ಭೇಟಿಯಾಗುವುದು ಅಸಾಧ್ಯ. ಒಂದು ವೇಳೆ ಭೇಟಿಯಾದರು ಎರಡು ನಿಮಿಷ ಮಾತನಾಡಿ ಸಾಗುಹಾಕುತ್ತಾರೆ. ಅವರ ಕೆಲವು ಹಿಂಬಾಲಕರಿಗೆ ಬಿಟ್ಟರೆ ಯಾರಿಗೂ ಏನೂ ಮಾಡುವುದಿಲ್ಲ. ಚುನಾವಣಾ ಸಮಯದಲ್ಲಿ ಮಾತ್ರ ಮೊಸಳೆ ಕಣ್ಣೀರು ಸುರಿಸುತ್ತಾರೆ.” ಎಂದು ಹೇಳುತ್ತಿದ್ದಂತೆ ಮನೆಯ ಕಾಲಿಂಗ್ ಬೆಲ್ ಶಬ್ದವಾಯಿತು.

ಬಾಗಿಲು ತೆಗೆದರೆ ಒಬ್ಬ,…..
” ಅಣ್ಣಾ ತಗೋ 2000 ರೂಪಾಯಿ, ಅಕ್ಕನಿಗೆ ಒಂದು ಸೀರೆ ಇದೆ. ಕವರ್ ಒಳಗೆ
ಒಂದು ಎಣ್ಣೇ ಬಾಟಲ್ ಇಟ್ಟಿದ್ದೇನೆ. ನಮ್ಮ ಅಭ್ಯರ್ಥಿಯನ್ನು ಮರೆಯಬೇಡ “ಎಂದು ಹೇಳಿ ಕ್ಯೆಮುಗಿದು
ಹೊರಟ. ಇನ್ನೊಬ್ಬ ನನ್ನ ಮಗನನ್ನು ನೋಡಿ ಅವನಿಗೂ 100 ರ ನೋಟು ನೀಡಿದ.

ಮಗನಿಗೆ ಏನೂ ಅರ್ಥವಾಗಲಿಲ್ಲ. 100 ನೋಟು ನೋಡಿ ಖುಷಿಯಾಯಿತು.

ನನಗೆ ನನ್ನ ಮಗನ ಭವಿಷ್ಯ ನೆನಪಾಗಿ ಭಯವಾಯಿತು.

ನಿಮಗೆ,…..

ಏಳಿ ಎದ್ದೇಳಿ ಜಾಗೃತಗೊಳ್ಳಿ, ನಮ್ಮ ಮಕ್ಕಳ ಉತ್ತಮ ಭವಿಷ್ಯಕ್ಕಾಗಿ, …….

ವಿವೇಕಾನಂದ. ಹೆಚ್.ಕೆ

Team Newsnap
Leave a Comment
Share
Published by
Team Newsnap

Recent Posts

ಬೆಂಗಳೂರಿನಲ್ಲಿ 10 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ

ಬೆಂಗಳೂರು : 10 ವರ್ಷದ ಬಾಲಕಿಗೆ ಚಾಕ್ಲೆಟ್ ಕೊಡಿಸುವುದಾಗಿ ನಂಬಿಸಿ ಕಾಮುಕನೊಬ್ಬ ಅತ್ಯಾಚಾರ ಎಸೆಗಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ… Read More

May 20, 2024

ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ : ಸಿಎಂ ಸಿದ್ದು

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ ಎಂದು ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ. ಪ್ಲೆಸ್ ಕ್ಲಬ್… Read More

May 20, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 20 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,400 ರೂಪಾಯಿ ದಾಖಲಾಗಿದೆ. 24… Read More

May 20, 2024

ಪೆನ್ ಡ್ರೈವ್ ಹೊಳೆಯಲ್ಲಿ ಕೊಚ್ಚಿ ಹೋಗುತ್ತಿದೆ ರಾಜ್ಯದ ಅಭಿವೃದ್ಧಿ

ಪ್ರಕರಣದಿಂದ ಸ್ವಾರ್ಥ ರಾಜಕಾರಣಿಗಳಿಗೆ, ಕೆಲ ಮಾಧ್ಯಮಗಳಿಗೆ, ಗಂಜಿ ಗಿರಾಕಿಗಳಿಗೆ ಮಾತ್ರ ಲಾಭ ?! ಬರಗಾಲದಿಂದ ರಾಜ್ಯದಲ್ಲಿ ಆಗಿರುವ ಅನಾಹುತ ,… Read More

May 20, 2024

ತಾಯಿಯ ಶವದೊಂದಿಗೆ 4 ದಿನ ಕಳೆದ ಪುತ್ರಿಯೂ ವಿಧಿವಶ

ಕುಂದಾಪುರ : ಮೇ 16 ರ ರಾತ್ರಿ ಗೋಪಾಡಿ ಗ್ರಾಮದ ಮೂಡುಗೋಪಾಡಿಯ ನಿವಾಸಿ ಜಯಂತಿ ಶೆಟ್ಟಿ (61) ಅವರ ಮೃತದೇಹ… Read More

May 19, 2024

ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ

2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್​ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More

May 18, 2024